Homeಕರ್ನಾಟಕಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

ಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

- Advertisement -
- Advertisement -

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ದಲಿತ ಮಹಿಳೆಗೆ ಸಚಿವ ವಿ.ಸೋಮಣ್ಣ ಹಲ್ಲೆ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಂಜೆ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ.

“ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ” ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ‌ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ.

“ನಿನ್ನೆ 173 ಜನಕ್ಕೆ ನಿವೇಶನ ಹಂಚಿಕೆ ಮಾಡಲಾಯ್ತು. ಇನ್ನು 9-10 ಸೈಟ್​ಗಳಿದ್ದು, ಸುಮಾರು 25 ಜನರು ಕೇಳುತ್ತಿದ್ದಾರೆ. ಈ ಮಹಿಳೆ ಐದಾರು ಬಾರಿ ಕಾಲಿಗೆ ನಮಸ್ಕಾರ ಮಾಡಿದರು. ನಾಲ್ಕೂವರೆ ಸಾವಿರ ರೂ. ಯಾರಿಗೋ ಕೊಟ್ಟಿದ್ದೀನಿ ಅಂದ್ರು.  ಆ ವೇಳೆ ನಾನೇ ಹಣ ನೀಡಿದೆ. ನಾನು ಎಲ್ಲಾ ಹೆಣ್ಣು ಮಕ್ಕಳನ್ನು ಸೋದರಿಯ ಭಾವನೆಯಲ್ಲಿ ನೋಡುತ್ತೇನೆ. ಒಂದು ವೇಳೆ ಈ ಘಟನೆ ನಡೆದ್ರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಕಾಲಿಗೆ ಬೀಳಲು ಬಂದಾಗ ತಡೆಯಲು ಹೋದಾಗ ಕೈ ತಾಗಿದೆಯೇ ಹೊರತು ಹೊಡೆದಿಲ್ಲ” ಎಂದು ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಮಹಿಳೆಯ ಕೆನ್ನೆಗೆ ಉದ್ದೇಶಪೂರ್ವಕವಾಗಿ ಹೊಡೆದಿರುವಂತೆ ಕಂಡು ಬರುತ್ತಿದೆ.

ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಸೋಮಣ್ಣನವರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್‌ ಗೂಂಡೂರಾವ್‌ ಟ್ವೀಟ್ ಮಾಡಿದ್ದು, “ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದಿದ್ದಾರೆ.

“ಅಂದು ಅರವಿಂದ್ ಲಿಂಬಾವಳಿ, ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ, ಎಲ್ಲಿದೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಸರ್ಕಾರ? ಇದೇನಾ ಪ್ರಜಾಪ್ರಭುತ್ವ? ನಿಮ್ಮ ಮನೆಯ ಹೆಣ್ಣುಮಕ್ಕಳ ಮೇಲೂ ಹೀಗೆ ಹಲ್ಲೆ ಮಾಡ್ತೀರಾ? ಇವರ ಪ್ರಕಾರ ಹೆಣ್ಣು ಅಂದ್ರೆ ಏನು?” ಎಂದು ಯುವ ಕರ್ನಾಟಕ ಫೇಸ್‌ಬುಕ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...