Homeಕರ್ನಾಟಕದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

ದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

- Advertisement -
- Advertisement -

ಸಹಾಯಹಸ್ತ ಕೋರಿ ಬಂದ ಮಹಿಳೆಯ ಮೇಲೆ ಸಚಿವ ವಿ.ಸೋಮಣ್ಣ ಹಲ್ಲೆ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದಿದ್ದು, ವ್ಯಾಪಕ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಘಟನೆಯ ಬಳಿಕ ಹಲ್ಲೆಗೊಳಗಾದ ಮಹಿಳೆಯಿಂದ ಸ್ಪಷ್ಟನೆಯನ್ನೂ ಕೊಡಿಸಲಾಗಿದೆ. “ನನ್ನ ಮೇಲೆ ಸೋಮಣ್ಣ ಹಲ್ಲೆ ಮಾಡಿಲ್ಲ” ಎಂಬ ಹೇಳಿಕೆಯನ್ನು ಸಂತ್ರಸ್ತ ಅಸಹಾಯಕ ಮಹಿಳೆಯ ಮೂಲಕ ಕೊಡಿಸಲಾಗಿದೆ. ಬಡ ಕುಟುಂಬವನ್ನು ಬೆದರಿಸಿರುವ ಅನುಮಾನಗಳು ವ್ಯಕ್ತವಾಗುತ್ತಿವೆ.

ಹಲ್ಲೆ ಮಾಡಿರುವುದು ಸ್ಪಷ್ಟವಾಗಿ ದಾಖಲಾಗಿರುವ ವಿಡಿಯೊ ವೈರಲ್ ಆಗುತ್ತಿದ್ದು, ಸೋಮಣ್ಣನವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಟ್ಯಾಗ್ ಮಾಡಿದ್ದಾರೆ.

“ಬಿಜೆಪಿಯವರು ಬಾಯಲ್ಲಿ ಮಾತ್ರ ಮಾತೃ ದೇವೋಭವ ಎನ್ನುತ್ತಾರೆ. ಮಹಿಳೆಯ ಮೇಲೆ ಕೈ ಮಾಡಿದ ಸಚಿವ ಸೋಮಣ್ಣರನ್ನು ಈ ಕೂಡಲೇ ಸಚಿವ ಸ್ಥಾನದಿಂದ ತೆಗೆದು ಹಾಕಬೇಕು” ಎಂಬ ಒತ್ತಾಯಗಳನ್ನು ಜನರು ಮಾಡುತ್ತಿದ್ದಾರೆ.

“ಬಡವರಿಗೆ ಹೀಗಾಗುತ್ತದೆ. ನೀವು ಯಾವುದಕ್ಕೂ ಸಿದ್ಧರಾಗಿರಬೇಕು. ಮೊದಲನೆಯದಾಗಿ ಅವರು ನಿಮ್ಮನ್ನು ಗೌರವಿಸದೆ ಕನ್ನೆಗೆ ಭಾರಿಸುತ್ತಾರೆ. ನಂತರ ಸುಳ್ಳು ಹೇಳಿಕೆ ಕೊಡಿಸುತ್ತಾರೆ” ಎಂದು ಅಕ್ಷಯ್ ಕೆ.ಜೈನ್ ಎಂಬವರು ಟ್ವೀಟ್ ಮಾಡಿದ್ದಾರೆ.

“ನೆರವು ಕೇಳಿ ಬಂದ ಅಸಹಾಯಕ ಮಹಿಳೆಗೆ ಸಚಿವ ಸೋಮಣ್ಣ ಕೆನ್ನೆಗೆ ಬಾರಿಸಿ ಹಲ್ಲೆ ನಡೆಸಿದ ಸಾಕ್ಷಿಯಾಗಿ ವಿಡಿಯೋ ದಾಖಲೆಯಿದೆ. ಆದರೆ ಅಸಹಾಯಕ ಸಂತ್ರಸ್ತರಿಗೆ ಬೆದರಿಕೆ ಹಾಕಿ ವ್ಯತಿರಿಕ್ತವಾದ ಹೇಳಿಕೆ ಕೊಡಿಸಿದ್ದಾರೆ. ಸ್ಥಳೀಯ ಸಂಘಟನೆಗಳು ಮುಂದೆ ಬಂದು ಸಂತ್ರಸ್ತರಿಗೆ ಸಾಂತ್ವನ, ಧೈರ್ಯ ತುಂಬಿದರೆ ಸೋಮಣ್ಣನವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಬಹುದು ಮತ್ತು ಶೋಷಿತರಿಗೆ ನ್ಯಾಯ ಒದಗಿಸಬಹುದು. ಆದರೆ ಪರಿಸ್ಥಿತಿ ಸರಳವಾಗಿಲ್ಲವಲ್ಲ? ಏನು ಮಾಡಬಹುದು?” ಎಂದು ಚಿಂತಕರಾದ ಶ್ರೀಪಾದ ಭಟ್‌ ಪೋಸ್ಟ್‌ ಮಾಡಿದ್ದಾರೆ.

ತನ್ನ ಕಷ್ಟ ಹೇಳಲು ಬಂದ ಮಹಿಳೆಯ ಮೇಲೆ ಹಲ್ಲೆ ಮಾಡಿರುವುದು ಇಡೀ ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ. ಕೂಡಲೇ ಸೋಮಣ್ಣ ರಾಜೀನಾಮೆ ನೀಡಬೇಕು. ಮಹಿಳಾ ವಿರೋಧಿ ಶಾಸಕನನ್ನು ಬಿಜೆಪಿ ಅಮಾನತು ಮಾಡುವುದೇ? ಬೊಮ್ಮಾಯಿಯವರೇ ಸೋಮಣ್ಣರನ್ನು ಸಂಪುಟದಿಂದ ಕೈಬಿಡುವಿರೇ?” ಎಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದು ಕಾಂಗ್ರೆಸ್ ನಾಯಕರಾದ ದಿನೇಶ್‌ ಗೂಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

“ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಕೇಳಿದ್ದಾರೆ.

“ಸ್ತ್ರೀ ಉದ್ಧಾರಕರಂತೆ ಮಾತಾಡುವ ಬಿಜೆಪಿಗರೇ, ಇದೆನಾ ನಿಮ್ಮ ಸಂಸ್ಕೃತಿ? ನಿವೇಶನ ಹಂಚಿಕೆಯಲ್ಲಾದ ಅನ್ಯಾಯದ ಬಗ್ಗೆ ಅಹವಾಲು ಸಲ್ಲಿಸಲು ಬಂದ ಹೆಣ್ಣುಮಗಳ ಜೊತೆ ಸಚಿವ ಸೋಮಣ್ಣ ನಡೆದುಕೊಂಡ ರೀತಿ ಇದು. ಮಹಿಳೆಗೆ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ ಈ ಕ್ಷಣವೇ ರಾಜೀನಾಮೆ ನೀಡಬೇಕು. ಅವರ ಮೇಲೆ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡರಾದ ದಿವ್ಯಪ್ರಭಾ ಗೌಡ ಆಗ್ರಹಿಸಿದ್ದಾರೆ.

“ಸಂತ್ರಸ್ತೆಯೊಬ್ಬರ ನೋವನ್ನು ಕೇಳಿಸಿಕೊಳ್ಳುವ ವ್ಯವಧಾನವೂ ನಿಮಗೆ ಇಲ್ಲವಾಯಿತೇ ಸಚಿವರೇ? ಜನಪ್ರತಿನಿಧಿಯಾಗಿ ನಿಮ್ಮದು ಇದೆಂಥ ನಡವಳಿಕೆ? ಜನರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸುವ ಯೋಗ್ಯತೆ ಇಲ್ಲದ ಮಹಿಳಾ ವಿರೋಧಿ ಬಿಜೆಪಿ ಸರಕಾರದಿಂದ ಎಂದಿಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ” ಎಂದಿದ್ದಾರೆ.

ಇದೇನಿದು ಗುಂಡಾರಾಜ್ಯ. ಅಂದು ಅರವಿಂದ ಲಿಂಬಾವಳಿ. ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ ಎಲ್ಲಿದೆ ಪ್ರಜಾಪ್ರಭುತ್ವ?” ಎಂದು ಚೇತನ್ ಸೂರ್ಯ ಎಸ್. ಎಂಬವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...