Homeಕರ್ನಾಟಕಬೆಂಗಳೂರು: ನಟ, ಹೋರಾಟಗಾರ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ನಟ, ಹೋರಾಟಗಾರ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

“ಭೂತಕೋಲವು ಹಿಂದೂ ಸಂಪ್ರದಾಯದ ಭಾಗವಲ್ಲ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಹೇಳಿದ ಕೆಲವು ದಿನಗಳ ನಂತರ ಬೆಂಗಳೂರು ಪೊಲೀಸರು ಶನಿವಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಭೂತ ಕೋಲವು ಆದಿವಾಸಿಗಳ ಸಂಸ್ಕೃತಿಯ ಭಾಗವಾಗಿದೆ. ಅದರಲ್ಲಿ ವೈದೀಕರಣ ಇಲ್ಲ ಎಂದು ಚೇತನ್‌ ಬುಧವಾರ ಹೇಳಿದ್ದರು. “ಭಾರತದಲ್ಲಿ ಹಿಂದೂ ಧರ್ಮ ಅಸ್ತಿತ್ವಕ್ಕೆ ಬರುವ ಮೊದಲೇ ಆದಿವಾಸಿಗಳು ಕಾಡಿನ ಆರಾಧನೆಯನ್ನು ಮಾಡುತ್ತಿದ್ದರು” ಎಂದು ಚೇತನ್ ಹೇಳಿದ್ದರು.

ಹಿಂದಿ ಮತ್ತು ಹಿಂದುತ್ವದ ಹೇರಿಕೆಯನ್ನು ಒಪ್ಪಲಾಗದು ಎಂದೂ ಅವರು ತಿಳಿಸಿದ್ದರು. ಚೇತನ್ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಶೇಷಾದ್ರಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಬೆಂಗಳೂರು (ಉತ್ತರ) ಸಂಚಾಲಕ ಶಿವಕುಮಾರ್ ಅವರ ದೂರಿನ ಆಧಾರದ ಮೇಲೆ ಚೇತನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದು ಹಿಂದುತ್ವ ಸಂಘಟನೆಯಾದ ಹಿಂದೂ ಜಾಗರಣ ವೇದಿಕೆ ಕೂಡ ಚೇತನ್‌ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ದೂರು ದಾಖಲಿಸಿದೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಭಿನ್ನ ವರ್ಗಗಳ ನಡುವೆ ದ್ವೇಷವನ್ನುಉತ್ತೇಜಿಸಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಭೂತಕೋಲ ಸಂಪ್ರದಾಯವು ಹಿಂದೂ ಸಂಸ್ಕೃತಿಯ ಭಾಗವಾಗಿದೆ ಎಂಬ ‘ಕಾಂತಾರ’ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಚೇತನ್‌ ಹೇಳಿಕೆ ನೀಡಿದ್ದರು. ಚಿತ್ರದಲ್ಲಿ ತೋರಿಸಲಾಗಿರುವ ಪಂಜುರ್ಲಿಯು ಹಿಂದೂ ಸಂಪ್ರದಾಯದ ಭಾಗ ಎಂದು ರಿಷಬ್‌ ಹೇಳಿದ್ದರು.

ರಿಷಬ್‌ ಹೇಳಿಕೆಗೆ ಹಲವಾರು ಜನ ಆಕ್ಷೇಪ ವ್ಯಕ್ತಪಡಿಸಿದ್ದರು. ಭೂತಕೋಲವು ಹೇಗೆ ಅವೈದಿಕವಾಗಿದೆ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಚೇತನ್‌ ವಿರುದ್ಧ ಈ ವರ್ಷ ದಾಖಲಾಗಿರುವ ಎರಡನೇ ಪ್ರಕರಣ ಇದಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧರಿಸುವುದನ್ನು ರಾಜ್ಯ ಸರ್ಕಾರ ನಿಷೇಧ ಹೇರಿದ ಬಳಿಕ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಹಿಜಾಬ್‌ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಆಲಿಸಿದ ಕರ್ನಾಟಕ ಹೈಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಾಧೀಶರನ್ನು ಟೀಕಿಸಿದ ಆರೋಪದಲ್ಲಿ ಚೇತನ್‌ ಅವರನ್ನು ಫೆಬ್ರವರಿಯಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದರು.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ #ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...