Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು...

ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ ಪಾಕಿಸ್ತಾನನ ಎದುರಿನ ಪಂದ್ಯ ಹಲವಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಪಾಕ್ ನೀಡಿದ 160 ರನ್‌ಗಳ ಗುರಿಯನ್ನು ಭಾರತ ತಂಡ ಕೊನೆಯ ಎಸೆತದಲ್ಲಿ ಮುಟ್ಟಿತು. ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಶತಕದ ಜೊತೆಯಾಟದ ನೆರವಿನೊಂದಿಗೆ ಗೆಲುವಿನ ಪತಾಕೆ ಹಾರಿಸಿತು. ಕೊನೆಯ 8 ಎಸೆತಗಳಲ್ಲಿ 28 ರನ್ ಗಳಿಸಿದ ಭಾರತ ತಂಡ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಆ ಒಂದೊಂದು ಎಸೆತವು ಪಂದ್ಯದ ದಿಕ್ಕು ಬದಲಿಸುವಂತಿದ್ದವು. ಆ 8 ಎಸೆತಗಳ ನೋಟ ಇಲ್ಲಿದೆ.

18 ಓವರ್ ಮುಗಿದಾಗ ಭಾರತ ತಂಡ ನಾಲ್ಕು ವಿಕೆಟ್ ಕಳೆದುಕೊಂಡು 129 ರನ್ ಗಳಿಸಿತ್ತು. ಗೆಲುವಿಗೆ 12 ಎಸೆತಗಳಲ್ಲಿ 31 ಬೇಕಿತ್ತು. ಪಾಕ್ ಬೌಲರ್ ಹ್ಯಾರಿಸ್ ರೌಫ್ ಎಸೆದ 19ನೇ ಓವರ್‌ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಒಂದು ರನ್ ಗಳಿಸಿದರೆ ಮರು ಎಸೆತದಲ್ಲಿ ಕೊಹ್ಲಿ ಸಹ ಒಂದು ರನ್ ಗಳಿಸಿದರು. ಆದರೆ ಮೂರನೇ ಎಸೆತದಲ್ಲಿ ಹಾರ್ದಿಕ್ ರನ್ ಗಳಿಸದೆ ನಾಲ್ಕನೆ ಎಸೆತದಲ್ಲಿ 1 ರನ್ ಗಳಿಸಿದರು. ಆಗ ಭಾರತ 131 ರನ್ ಗಳಿಸಿತ್ತು. ಗೆಲುವಿಗೆ 8 ಎಸೆತಗಳಲ್ಲಿ 28 ರನ್ ಗಳಿಸಬೇಕಿತ್ತು. ಪಂದ್ಯ ಪಾಕ್‌ ಪರವಾಗಿತ್ತು. ಆನಂತರ ನಡೆದಿದ್ದು ಕೊಹ್ಲಿ ಆಟ. ಅದು ಹೀಗಿತ್ತು..

18.5: ಸ್ಲೊ ಬಾಲ್ ಅನ್ನು ವಿರಾಟ್ ಕೊಹ್ಲಿ ನೇರ ಸಿಕ್ಸ್‌ ಭಾರಿಸಿದರು.

18.6: ಫೈನ್‌ ಲೆಗ್‌ನಲ್ಲಿ ವಿರಾಟ್ ಕೊಹ್ಲಿ ಸಿಕ್ಸರ್ ಭಾರಿಸಿದರು. ಅಲ್ಲಿಗೆ ಕೊನೆಯ ಓವರ್‌ನಲ್ಲಿ 16 ರನ್ ಗಳಿಸಬೇಕಾಗಿತ್ತು.

19.1: ಸ್ಪಿನ್ ಬೌಲರ್ ಮೊಹಮ್ಮದ್ ನವಾಜ್ ಎಸೆತ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಬಾಬರ್ ಅಜಂಗೆ ಕ್ಯಾಚಿತ್ತು ಔಟಾದರು. ಭಾರತಕ್ಕೆ ಆಗ 5 ಎಸೆತಗಳಲ್ಲಿ 16 ರನ್ ಬೇಕಿತ್ತು.

19.2:  ಕ್ರಿಸ್‌ಗೆ ಬಂದಿದ್ದ ಹೊಸ ಬ್ಯಾಟರ್ ದಿನೇಶ್ ಕಾರ್ತಿಕ್ ಫುಲ್ ಟಾಸ್ ಬಾಲನ್ನು ಲಾಂಗ್‌ಆನ್‌ನತ್ತ ಬಾರಿಸಿ ಕೇವಲ ಒಂದು ರನ್ ಗಳಿಸಿದರು. ಭಾರತಕ್ಕೆ ಆಗ 4 ಎಸೆತಗಳಲ್ಲಿ 15 ರನ್ ಬೇಕಿತ್ತು.

19.3: ವಿರಾಟ್ ಕೊಹ್ಲಿ ಲಾಂಗ್ ಆನ್‌ನತ್ತ ಭಾರಿಸಿ ಎರಡು ರನ್ ಗಳಿಸಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 13 ರನ್ ಬೇಕಿತ್ತು.

19.4: ಫುಲ್ ಟಾಸ್ ಬಂದ ಬಾಲನ್ನು ಕೊಹ್ಲಿ ಲೈನ್ ಮತ್ತು ಡೀಪ್ ಸ್ಕ್ವೇರ್‌ ನಡುವೆ ಸಿಕ್ಸರ್ ಬಾರಿಸಿದರು. ಅದು ಹೈ ಪುಲ್ ಟಾಸ್ ಇದ್ದ ಕಾರಣ ಅಂಪೈರ್ ನೋಬಾಲ್ ಎಂದು ಘೋಷಿಸಿದರು.  ಅಲ್ಲಿಗೆ ಪಂದ್ಯ ಭಾರತದ ಕಡೆ ವಾಲಿತು. ಭಾರತಕ್ಕೆ ಆಗ 3 ಎಸೆತಗಳಲ್ಲಿ 6 ರನ್ ಬೇಕಿತ್ತು.

19.4- ಫ್ರಿ ಹಿಟ್: ನವಾಜ್ ಎಸೆದ ಬಾಲ್ ವೈಡ್ ಆಯಿತು. ಭಾರತಕ್ಕೆ ಒಂದು ರನ್ ಸಿಕ್ಕಿತು. ಪಾಕ್ ಆಟಗಾರರು ನೋಬಾಲ್ ಅಲ್ಲವೆಂದು ವಾದ ಮಾಡಿದರು. ಆದರೆ ಅಂಪೈರ್ ನೋಬಾಲ್ ನೀಡಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 5 ರನ್ ಬೇಕಿತ್ತು.

13.4 -ಫ್ರಿ ಹಿಟ್: ನವಾಜ್ ವೇಗದಲ್ಲಿ ಎಸೆದ ಬಾಲ್ ಕೊಹ್ಲಿಯನ್ನು ತಪ್ಪಿಸಿ ವಿಕೆಟ್‌ಗೆ ಬಡಿದು ಥರ್ಡ್ ಮ್ಯಾನ್ ಕಡೆಗೆ ಹೋದಾಗ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಚೆಂಡು ವಿಕೆಟ್‌ಗೆ ಬಡಿದ ಕಾರಣ ಬೈಸ್ ನೀಡಬಾರದೆಂದು ಪಾಕ್ ಆಟಗಾರರು ವಾದ ಮಾಡಿದರು. ಆದರೆ ಅಂಪೈರ್ ಬೈಸ್ ರನ್ ನೀಡಿದರು. ಭಾರತಕ್ಕೆ ಆಗ 2 ಎಸೆತಗಳಲ್ಲಿ 2 ರನ್ ಬೇಕಿತ್ತು.

13.5: ವೈಡ್ ಆಗುತ್ತಿದ್ದ ಬಾಲ್ ಆಡಿದ ದಿನೇಶ್ ಕಾರ್ತಿಕ್ ಸ್ಟಂಪ್ ಔಟ್ ಆದರು. ಅಲ್ಲಿಗೆ ಪಂದ್ಯ ಪಾಕ್ ಕಡೆಗೆ ವಾಲಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 2 ರನ್ ಬೇಕಿತ್ತು.

13.6: ನವಾಜ್ ವೈಡ್ ಮಾಡಿದರು. ಅಶ್ವಿನ್ ಬಾಲ್ ಮುಟ್ಟಲಿಲ್ಲ. ಭಾರತಕ್ಕೆ ಎಕ್ಸ್ಟ್ರಾ ರೂಪದಲ್ಲಿ ಒಂದು ರನ್ ಸಿಕ್ಕಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 1 ರನ್ ಬೇಕಿತ್ತು.

13.6: ನವಾಜ್ ಎಸೆತವನ್ನು ಆರ್ ಅಶ್ವಿನ್ ಓವರ್ ಮಿಡ್ ಆಫ್ ಕಡೆ ಬಾರಿಸಿ ಒಂದು ರನ್ ಓಡಿದರು. ಅಲ್ಲಿಗೆ ಭಾರತ ತಂಡಕ್ಕೆ ನಾಲ್ಕು ವಿಕೆಟ್ ಜಯ ಲಭಿಸಿತು. ಅಶ್ವಿನ್ ಕುಣಿದು ಕುಪ್ಪಳಿಸಿದರೆ, ಮೈದಾನಕ್ಕೆ ನುಗ್ಗಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೊಹ್ಲಿಯನ್ನು ಭುಜದ ಮೇಲೆತ್ತಿ ಸಂಭ್ರಮಿಸಿದರು.

53 ಎಸೆತಗಳಲ್ಲಿ 06 ಬೌಂಡರಿ ಮತ್ತು 04 ಸಿಕ್ಸರ್ ಸೇರಿ 82 ರನ್ ಚಚ್ಚಿದ ವಿರಾಟ್ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತ ಕಂಡಿತು. ಆನಂತರ ಮಸೂದ್ (52) ಮತ್ತು ಇಫ್ತಿಕಾರ್ ಅಹ್ಮದ್‌ರವರ (51) ರನ್‌ಗಳ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಪೇರಿಸಿತ್ತು. ಭಾರತದ ಪರವಾಗಿ ಹಾರ್ದಿಕ್ ಪಾಂಡ್ಯ ಮತ್ತು ಅರ್ಶದೀಪ್ ಸಿಂಗ್ ತಲಾ ಮೂರು ವಿಕೆಟ್ ಪಡೆದರು.

ಆನಂತರ ಭಾರತವೂ ತಂಡವೂ ಸಹ ಆರಂಭಿಕ ಆಘಾತ ಕಂಡಿತು. 31 ರನ್ ಗಳಿಸುವಷ್ಟಲ್ಲಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಅಕ್ಸರ್ ಪಟೇಲ್ ಔಟ್ ಆಗಿ ಪೆವಿಲಿಯನ್ ಸೇರಿದ್ದರು. ಆನಂತರ ಜೊತೆಗೂಡಿದ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಜೊತೆಯಾಟ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು. ಪಾಕ್ ಪರವಾಗಿ ಹ್ಯಾರಿಸ್ ರೌಫ್ ಮತ್ತು ಮೊಹಮ್ಮದ್ ನವಾಜ್ ತಲಾ ಎರಡು ವಿಕೆಟ್ ಪಡೆದರು.

ಇದನ್ನೂ ಓದಿ: 2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...