Homeಮುಖಪುಟಗುಂಪು ಹಲ್ಲೆಯನ್ನು ಸಮರ್ಥಿಸಿದ ಯುವತಿಗೆ ಕುರಾನ್ ಹಂಚುವಂತೆ ಆದೇಶಿಸಿದ ಕೋರ್ಟ್

ಗುಂಪು ಹಲ್ಲೆಯನ್ನು ಸಮರ್ಥಿಸಿದ ಯುವತಿಗೆ ಕುರಾನ್ ಹಂಚುವಂತೆ ಆದೇಶಿಸಿದ ಕೋರ್ಟ್

- Advertisement -
- Advertisement -

ಗುಂಪುಹಲ್ಲೆಯಿಂದ ಮೃತರಾಗಿದ್ದ ತಬ್ರೇಜ್ ಹತ್ಯೆಯನ್ನು ಫೇಸ್ ಬುಕ್ಕಿನಲ್ಲಿ ಸಮರ್ಥಿಸಿ ಬಂಧನಕ್ಕೊಳಗಾಗಿದ್ದ ರಾಂಚಿಯ ರಿಚಾ ಭಾರತಿಗೆ ಅಲ್ಲಿನ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ. ಅದರೆ ಜಾಮೀನು ನೀಡಲು ವಿಧಿಸಿರುವ ಷರತ್ತು ಮಾತ್ರ ವಿಶೇಷವಾಗಿದೆ.

ಮುಸ್ಲೀಮರ ಭಾವನೆಗಳಿಗೆ ದಕ್ಕೆ ತಂದುದಕ್ಕಾಗಿ ನ್ಯಾಯಾಧೀಶ ಮನೀಶ್ ಸಿಂಗ್ ಅವರು ಆಕೆಗೆ ಹದಿನೈದು ದಿನಗಳ ಒಳಗಾಗಿ ಪವಿತ್ರ ಕುರಾನಿನ ಐದು ಪ್ರತಿಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ದಾನ ಮಾಡುವಂತೆ ಷರತ್ತು ವಿಧಿಸಿದೆ.

ಈ ಕುರಿತ ಮಾತನಾಡಿರುವ ಆರೋಪಿ ಪರ ವಕೀಲರಾದ ರಾಮ್ ಪರ್ವೇಶ್ವರ್ ಸಿಂಗ್ ರವರು “ಒಂದು ಪ್ರತಿಯನ್ನು ದೂರುದಾರ ಸದಾರ್ ಅಂಜುಮಾನ್ ಇಸ್ಲಾಮಿಕ್ ಸಂಘಕ್ಕೆ ನೀಡಿ ರಶೀದ ಪಡೆಯಬೇಕು ಜೊತೆಗೆ ಇನ್ನು ನಾಲ್ಕು ಪ್ರತಿಗಳನ್ನು ಲೈಬ್ರರಿ, ಕಾಲೇಜು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಗೆ ದಾನ ನೀಡಿ ಆ ರಶೀದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿದೆ” ಎಂದಿದ್ದಾರೆ.

ಗುಂಪು ಹತ್ಯೆಯನ್ನು ರಿಚಾ ಭಾರತಿ ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದುದ್ದರ ವಿರುದ್ಧ ಪೀಥೋರಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಪೊಲೀಸರು ರಿಚಾರನ್ನು ಬಂಧಿಸಿದ್ದರು. ಇದರಿಂದ ಕುಪಿತಗೊಂಡ ಬಲಪಂಥೀಯ ಸಂಘಟನೆಗಳು, ಸ್ಥಳೀಯ ನಿವಾಸಿಗಳು ಪೊಲೀಸರ ಮೇಲೆ ತೀವ್ರ ರೀತಿಯ ಒತ್ತಡ ತಂದಿದ್ದರು. ಕಳೆದ ಶನಿವಾರ ಪಿಥೋರಿಯಾ ಪೊಲೀಸ್ ಠಾಣೆ ಎದುರು ದೊಡ್ಡ ಪ್ರತಿಭಟನೆ ಸಹ ನಡೆದಿತ್ತು.

ಈಗ ನ್ಯಾಯಾಲಯ ಆಕೆಗೆ ತನ್ನ ತಪ್ಪಿನ ಅರಿವಾಗುವಂತೆ ಮಾಡಲು ಈ ನಿಬಂಧನೆಯನ್ನು ವಿಧಿಸಿದೆ. ಜಾತ್ಯಾತೀತತೆಯ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯೇ ಆಗಿದೆ. ಈ ಹಿಂದೆ 2013ರಲ್ಲಿ ದೆಹಲಿಯ ಹೈಕೋರ್ಟ್ ಶಿಕ್ಷಕಿಯೊಬ್ಬರಿಗೆ ಸುಳ್ಳು ಹೇಳಿದ ಕಾರಣಕ್ಕಾಗಿ ಪ್ರಾಯಶ್ಚಿತವಾಗಿ ಮಹಾತ್ಮ ಗಾಂಧಿಯವರ ಸಮಾಧಿ ಇರುವ ರಾಜ್ ಘಾಟ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸುವಂತೆ ಆದೇಶಿಸಿತ್ತು. ಮತ್ತು ನಿನ್ನೆ ಬಾಲಾಪರಾಧಿಯೊಬ್ಬರು ನಂತರ ಮೆಡಿಕಲ್ ಸ್ಟೂಟೆಂಡ್ ಆದ ನಂತರ ಗಿಡ ನೆಡಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಈಗ ಈ ರಿಚಾ ಭಾರತಿ ರಾಂಚಿ ಕೋರ್ಟಿನ ಆದೇಶವನ್ನು ಯಾವ ರೀತಿ ಪರಿಗಣಿಸುತ್ತಾರೆ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...