Homeಕರ್ನಾಟಕಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ,...

ಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ, ದಲಿತ ವಿದ್ಯಾರ್ಥಿಗಳು!

‘ಮೀಸಲಾತಿ ಹೆಚ್ಚಳ: ಎಸ್‌ಸಿ, ಎಸ್‌ಟಿಗಳಿಗೆ ದೀಪಾವಳಿ ಗಿಫ್ಟ್‌’ ಎಂದೆಲ್ಲ ಕೆಲ ಮಾಧ್ಯಮಗಳು ಅತಿರಂಜಕವಾಗಿ ವರದಿ ಮಾಡುತ್ತಿವೆ. ವಾಸ್ತವದಲ್ಲಿ ದಲಿತ ವಿದ್ಯಾರ್ಥಿಗಳ ಬದುಕನ್ನು ಸರ್ಕಾರ ಕತ್ತಲೆಗೆ ತಳ್ಳುತ್ತಿದೆ!

- Advertisement -
- Advertisement -

“ಮೈಸೂರಿನ ಯುವರಾಜ ಕಾಲೇಜಿನ ವಿದ್ಯಾರ್ಥಿ ನಾನು. ಪರಿಶಿಷ್ಟ ಜಾತಿಗೆ ಸೇರಿದ್ದು ‘ಆಲ್‌ ಅದರ್‌ ಕಾಂಬಿನೇಷನ್‌’ನಲ್ಲಿ ‘ಬಿ’ ಸ್ಕೀಮ್‌ ಅಡಿಯಲ್ಲಿ ಪ್ರವೇಶಾತಿ ಪಡೆದಿದ್ದೆ. ನಮಗೆ ನೀಡಿದ್ದ ಶುಲ್ಕಪಟ್ಟಿಯಲ್ಲಿ ನಿಗದಿಪಡಿಸಿದಂತೆ ರೂ. 2,50,000ಕ್ಕಿಂತ ಕಡಿಮೆ ವಾರ್ಷಿಕ ಆದಾಯದ ಅನ್ವಯ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರವೇಶಾತಿ ವೇಳೆ ತಲಾ ರೂ. 9,030 ಶುಲ್ಕವನ್ನು ಕಟ್ಟಿದ್ದೆ. ಆದರೆ ಮೂರನೇ ವರ್ಷದ ಪ್ರವೇಶಾತಿಗೆ ಕಾಲೇಜಿಗೆ ಹೋದಾಗ ರೂ. 60 ಸಾವಿರಕ್ಕಿಂತ ಹೆಚ್ಚಿನ ಶುಲ್ಕವನ್ನು ಪಾವತಿಸುವಂತೆ ಹೇಳುತ್ತಿದ್ದಾರೆ. ನನಗೆ ಇಷ್ಟು ದೊಡ್ಡ ಮಟ್ಟದ ಮೊತ್ತವನ್ನು ಪಾವತಿಸಲು ಆಗುತ್ತಿಲ್ಲ. ಹೀಗಾಗಿ ಕಾಲೇಜು ತೊರೆಯಲು ನಿರ್ಧರಿಸಿದ್ದೇನೆ” ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ದಲಿತ ವಿದ್ಯಾರ್ಥಿ.

“ಪ್ರಥಮ ಹಾಗೂ ದ್ವಿತೀಯ ವರ್ಷದಲ್ಲಿ ಬಾಕಿ ಉಳಿದಿರುವ ಶುಲ್ಕವನ್ನು ಸೇರಿಸಿಕೊಡಬೇಕು. ನೀವು 9,000 ರೂ. ಕಟ್ಟಿದ್ದೀರಿ. ಒಟ್ಟು 26,000 ರೂ. ಶುಲ್ಕವನ್ನು ಕಾಲೇಜಿಗೆ ಪ್ರತಿವರ್ಷ ಪಾವತಿ ಮಾಡಬೇಕಿತ್ತು. ನಿಮ್ಮ ಖಾತೆಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ಸರ್ಕಾರ ಹಣ ಸಂದಾಯ ಮಾಡಿರುತ್ತದೆ. ಅದನ್ನು ನಮಗೆ ತಂದುಕೊಡಬೇಕು ಎಂದು ಕಾಲೇಜಿನಿಂದ ಸಮರ್ಥನೆ ಬರುತ್ತಿದೆ. ಆದರೆ ನಾನು ಹಾಸ್ಟೆಲ್‌ಗೆ ಸೇರ್ಪಡೆಯಾಗಿದ್ದೆ. ನನ್ನ ವಿದ್ಯಾರ್ಥಿವೇತನವು ಹಾಸ್ಟೆಲ್‌ಗೆ ಹೋಗಿರುತ್ತದೆ. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸವಲತ್ತುಗಳಿರುತ್ತವೆ ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಸರ್ಕಾರ ನಮ್ಮನ್ನು ನಯವಾಗಿ ವಂಚಿಸಿದೆ. ಕಾಲೇಜಿಗೆ ಪೂರ್ಣ ಶುಲ್ಕ ಕಟ್ಟಬೇಕೆಂದೂ, ಸರ್ಕಾರ ಉಳಿದ ಶುಲ್ಕವನ್ನು ಪಾವತಿಸುವುದಿಲ್ಲವೆಂದೂ ನಾನು ಕಾಲೇಜು ಸೇರುವಾಗಲೇ ಹೇಳಿದ್ದರೆ ನಾನು ಬೇರೆ ದಾರಿ ನೋಡಿಕೊಳ್ಳುತ್ತಿದ್ದೆ. ಆದರೆ ಎರಡು ವರ್ಷ ಓದಿದ ಬಳಿಕ ಈಗ ಏಕಾಏಕಿ ಈ ಸೂಚನೆ ನೀಡುತ್ತಿದ್ದಾರೆ. ಪ್ರಥಮ ವರ್ಷದ ಸೇರ್ಪಡೆಯ ವೇಳೆ ತೋರಿಸಿದ್ದ ಶುಲ್ಕ ಪಟ್ಟಿಯಲ್ಲಿ ಇದ್ಯಾವುದರ ಉಲ್ಲೇಖವಿಲ್ಲ. ಕಾಲೇಜಿನಿಂದ ಯಾವುದೇ ಸೂಚನೆಯನ್ನೂ ನೀಡಿರಲಿಲ್ಲ. ಈಗ ಶುಲ್ಕ ಪಾವತಿಸದಿದ್ದರೆ ಮೂರನೇ ವರ್ಷಕ್ಕೆ ಪ್ರವೇಶಾತಿ ನೀಡುವುದಿಲ್ಲ ಎನ್ನುತ್ತಿದ್ದಾರೆ. ಅನಿವಾರ್ಯವಾಗಿ ನಾನು ಕಾಲೇಜು ತೊರೆಯುತ್ತಿದ್ದೇನೆ. ನನ್ನ ಅಮೂಲ್ಯವಾದ ಎರಡು ವರ್ಷಗಳು ವ್ಯರ್ಥವಾಗುತ್ತಿದೆ” ಎನ್ನುತ್ತಾ ಆ ವಿದ್ಯಾರ್ಥಿ ಕಣ್ಣೀರು ಹಾಕಿದನು.

“ಯುವರಾಜ ಕಾಲೇಜಿಗೆ ‘ಎ’ ಸ್ಕೀಮ್‌ನಲ್ಲಿ ಪ್ರಥಮ ವರ್ಷದ ಬಿ.ಎಸ್‌ಸಿ, ಬಿಬಿಎ, ಬಿಸಿಎ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯುವ, 2,50,000 ರೂ.ಗಿಂತ ಕಡಿವೆ ವಾರ್ಷಿಕ ಆದಾಯವಿರುವ ಎಸ್‌.ಸಿ., ಎಸ್.ಟಿ. ವಿದ್ಯಾರ್ಥಿಗಳಿಗೆ ಕೇವಲ 270 ರೂ. ಶುಲ್ಕವಿತ್ತು. ಆದರೆ ಈ ಶುಲ್ಕವನ್ನು ಈಗ ಏಕಾಏಕಿ ಏಳು ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ. ಸಾಮಾನ್ಯ ವಿದ್ಯಾರ್ಥಿಗಳ ಶುಲ್ಕಕ್ಕೂ ಇತರೆ ವಿದ್ಯಾರ್ಥಿಗಳ ಶುಲ್ಕಕ್ಕೂ ಯಾವುದೇ ವ್ಯತ್ಯಾಸವಿಲ್ಲದಂತೆ ಆಗಿದೆ. ದಲಿತರಿಗೆ ಸಾಕಷ್ಟು ಸೌಕರ್ಯಗಳಿರುತ್ತವೆ ಎಂಬುದು ಭ್ರಮೆಯಷ್ಟೇ” ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ.

ಇದು ಕೇವಲ ಯುವರಾಜ ಕಾಲೇಜಿನ ಸಮಸ್ಯೆಯಲ್ಲ. ಮೈಸೂರು ವಿವಿಯ ಎಲ್ಲ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲೂ ಬಡ ವಿದ್ಯಾರ್ಥಿಗಳು ಈ ಶೋಷಣೆಗೆ ಈಡಾಗಿದ್ದಾರೆ. ಕೆಲವು ವಿದ್ಯಾರ್ಥಿಗಳು, “ಸರ್ಕಾರ ನಮಗೆ ಯಾವುದೇ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಿಲ್ಲ. ನಮಗೆ ಇನ್ನೂ ಸ್ಕಾಲರ್‌ಶಿಪ್ ಬಂದಿಲ್ಲ. ಹಣ ಕಟ್ಟದೆ ಕಾಲೇಜಿಗೂ ಸೇರಿಸಿಕೊಳ್ಳುತ್ತಿಲ್ಲ. ಖಾಸಗಿ ಕಾಲೇಜುಗಳಿಗೂ ಸರ್ಕಾರಿ ಕಾಲೇಜುಗಳಿಗೂ ಯಾವ ವ್ಯತ್ಯಾಸವೂ ಇಲ್ಲವಾಗಿದೆ” ಎನ್ನುತ್ತಿದ್ದಾರೆ.

“ಶುಲ್ಕ ಪಾವತಿ ಮಾಡಲು ಶಕ್ತರಾಗದ ಅನೇಕ ಬಡ ವಿದ್ಯಾರ್ಥಿಗಳು ಕಾಲೇಜು ತೊರೆಯಲು ನಿರ್ಧರಿಸಿದ್ದಾರೆ” ಎಂಬ ಆತಂಕವನ್ನು ಹೆಸರು ಹೇಳಲಿಚ್ಛಿಸದ ಮೈಸೂರು ವಿವಿ ಪ್ರಾಧ್ಯಾಪಕರೊಬ್ಬರು ‘ನಾನುಗೌರಿ.ಕಾಂ’ಗೆ ವಿವರಿಸಿದರು. “ಒಬ್ಬ ವಿದ್ಯಾರ್ಥಿ ಕಾಲೇಜು ತೊರೆದು ಹೋಗುತ್ತಿದ್ದ. ವಿಚಾರಿಸಿದಾಗ, ಇಷ್ಟು ಖರ್ಚು ಮಾಡಿ ಓದಿದರೂ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿ ಇಲ್ಲ. ಸ್ವಿಗ್ಗಿಯಲ್ಲೋ, ಜೊಮೊಟೊದಲ್ಲೋ ಬದುಕು ಕಂಡುಕೊಳ್ಳುತ್ತೇನೆ ಎಂದು ತಿಳಿಸಿದ” ಎಂದು ಆ ಪ್ರಾಧ್ಯಾಪಕರು ಆಘಾತ ವ್ಯಕ್ತಪಡಿಸಿದರು.

ಶುಲ್ಕ ಹೆಚ್ಚಳ ವಿರೋಧಿಸಿ ಇತ್ತೀಚೆಗೆ ಸಣ್ಣಮಟ್ಟದಲ್ಲಿ ಎಐಡಿಎಸ್‌ಒ (ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಸ್ಟೂಟೆಂಡ್ ಆರ್ಗನೈಸೇಷನ್‌) ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತ್ತು. “ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳಿಗೂ ಮೊದಲನೇ ವರ್ಷದ, ಎರಡನೇ ವರ್ಷದ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ. ಮಹಾರಾಣಿ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.16,000, ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ. 30,000 ಹಾಗೂ ಯುವರಾಜ ಕಾಲೇಜಿನಲ್ಲಿ 30 ರಿಂದ 60 ಸಾವಿರದವರೆಗೆ ಶುಲ್ಕವನ್ನು ಕಟ್ಟಬೇಕೆಂದು ಆದೇಶ ಹೊರಡಿಸಲಾಗಿದೆ” ಎಂದು ಸಂಘಟನೆ ಆಕ್ಷೇಪ ವ್ಯಕ್ತಪಡಿಸಿತ್ತು.

2021-22ನೇ ಸಾಲಿನ ಎಸ್‌.ಸಿ., ಎಸ್‌.ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕಾಲೇಜಿಗೆ ಮಂಜೂರಾಗದ ಕಾರಣ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಮತ್ತು ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗಿದೆ. ಅಕ್ಟೋಬರ್‌‌ 29ರೊಳಗೆ ಶುಲ್ಕವನ್ನು ನೀಡಬೇಕೆಂದು ‘ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ’ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೂಚನೆ ನೀಡಿರುವುದು.

“ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ವಿದ್ಯಾರ್ಥಿಗಳು ಬಡವರು, ರೈತರು, ಕೂಲಿ ಕಾರ್ಮಿಕರ ಮಕ್ಕಳಾಗಿದ್ದಾರೆ. ಇವರಿಗೆ ಏಕಾಏಕಿ ಸಾವಿರಾರು ರೂಪಾಯಿ ಶುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ ಕಟ್ಟುವುದು?” ಎಂದು ಸಂಘಟನೆ ಪ್ರಶ್ನಿಸಿತ್ತು.

ಶುಲ್ಕ ಹೆಚ್ಚಳ ವಿರೋಧಿಸಿ ಇತ್ತೀಚೆಗೆ ಎಐಡಿಎಸ್‌ಒ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಮೈಸೂರು ಜಿಲ್ಲಾಧ್ಯಕ್ಷರಾದ ಸುಭಾಷ್, “ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸುವ ಉದ್ದೇಶವಿಲ್ಲಿದೆ. ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ ಶುಲ್ಕ ರೂಪದಲ್ಲಿ ಕಾಲೇಜಿಗೆ ಹಾಗೂ ಹಾಸ್ಟೆಲ್‌ ಸೇರುತ್ತಿತ್ತು. ಉಳಿಕೆ ಹಣವನ್ನು ವಿದ್ಯಾರ್ಥಿಗಳಿಗೆ ಕೊಡಲಾಗುತ್ತಿತ್ತು. ಈಗ ನೇರ ವಿದ್ಯಾರ್ಥಿಗಳ ಖಾತೆಗೆ ಹಣ ಹಾಕಿರುತ್ತಾರೆ ಎನ್ನಲಾಗುತ್ತಿದೆ. ಸರ್ಕಾರ ಮತ್ತು ಕಾಲೇಜಿನ ನಡುವೆ ವ್ಯವಹಾರ ನಡೆದಾಗ ಸರ್ಕಾರ ಕಡ್ಡಾಯವಾಗಿ ಹಣವನ್ನು ಪಾವತಿಸಲೇಬೇಕಿರುತ್ತದೆ. ಆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿರುವ ಸರ್ಕಾರ, ವಿದ್ಯಾರ್ಥಿಗಳ ಖಾತೆಗೆ ಹಣ ಹಾಕುವುದಾಗಿ ನಂಬಿಸಿರುವ ಸಾಧ್ಯತೆ ಇದೆ. ಕೆಲವು ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ ಬಂದಿದೆ ಎನ್ನುತ್ತಾರೆ, ಕೆಲವು ವಿದ್ಯಾರ್ಥಿಗಳು ಬಂದಿಲ್ಲ ಎನ್ನತ್ತಿದ್ದಾರೆ. ಇದರ ವಿರುದ್ಧ ವಿದ್ಯಾರ್ಥಿಗಳು ಒಂದಾಗಿ ಧ್ವನಿ ಎತ್ತಬೇಕಿದೆ” ‌ಎಂದು ಆಶಿಸಿದರು.

‘ನಾನುಗೌರಿ.ಕಾಂ’ಗೆ ಯುವರಾಜ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಎನ್.ಯಶೋಧಾ ಅವರು ಪ್ರತಿಕ್ರಿಯಿಸಿ, “ನಮ್ಮದು ಸ್ವಾಯತ್ತ ಕಾಲೇಜು. ಎಸ್‌.ಸಿ., ಎಸ್‌.ಟಿ. ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸಬೇಕಾಗಿದೆ. ವಿದ್ಯಾರ್ಥಿ ವೇತನ ಬಂದಿದೆಯೋ ಇಲ್ಲವೋ ಎಂದು ವಿದ್ಯಾರ್ಥಿಗಳು ಗಮನ ಹರಿಸುತ್ತಿಲ್ಲ. ಸಮಾಜ ಇಲಾಖೆ ಇಲಾಖೆಯಲ್ಲಿ ಒತ್ತಡ ತರಬೇಕು. ನೇರವಾಗಿ ಕಾಲೇಜಿಗೆ ಹಣ ಪಾವತಿಸಿ ಎಂದು ತಿಳಿಸಬೇಕು. ಅಥವಾ ತಮ್ಮ ಖಾತೆಗೆ ಹಣ ಬಂದಿದ್ದರೆ ಸೂಚನೆಗಳನ್ನು ನೀಡುವಂತೆ ಆಗ್ರಹಿಸಬೇಕು” ಎಂದು ತಿಳಿಸಿದರು.

“ಎರಡು ಕಂತುಗಳಲ್ಲೇ ಶುಲ್ಕ ಪಾವತಿ ಮಾಡಲು ಅವಕಾಶ ನೀಡಿದ್ದೇವೆ. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿಲ್ಲ” ಎಂದರು.

ಇದನ್ನೂ ಓದಿರಿ: ದಲಿತ ಶಾಸಕನಿಗೆ ಅಶ್ಲೀಲವಾಗಿ ನಿಂದಿಸಿ, ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಶಾಸಕ

ಬಡ ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಆತಂಕದ ಕುರಿತು ಮೈಸೂರು ವಿವಿ ಕುಲಪತಿ ಜಿ.ಹೇಮಂತ್‌ಕುಮಾರ್‌, ಮಹಾರಾಜ ಕಾಲೇಜು ಪ್ರಾಂಶುಪಾಲರಾದ ಪ್ರೊ.ಅನಿಟ ವಿಮ್ಲಾ ಬ್ರಾಗ್ಸ್ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಲು ಯತ್ನಿಸಿತು. ಆದರೆ ಕರೆಯನ್ನು ಸ್ವೀಕರಿಸಲಿಲ್ಲ.

ಒಂದೆಡೆ ಎಸ್‌.ಟಿ., ಎಸ್‌.ಟಿ.ಗಳ ಮೀಸಲಾತಿಯನ್ನು ಹೆಚ್ಚಿಸುತ್ತಿದ್ದೇವೆ ಎಂದು ಹೇಳಿಕೊಳ್ಳುವ ಸರ್ಕಾರ, ಅದೇ ಎಸ್‌.ಸಿ., ಎಸ್.ಟಿ. ವಿದ್ಯಾರ್ಥಿಗಳ ಶುಲ್ಕವನ್ನು ಹೆಚ್ಚಿಸಿ ಅಥವಾ ವಿದ್ಯಾರ್ಥಿ ವೇತನವನ್ನು ಸಮರ್ಪಕವಾಗಿ ಬಿಡುಗಡೆಯೂ ಮಾಡದೆ ವಂಚನೆಗೈಯುತ್ತಿದೆ. ಸಾರ್ವಜನಿಕವಾಗಿ ಬಿಡುಗಡೆಯಾಗದ, ಸದನದಲ್ಲಿ ಚರ್ಚೆಯೂ ಆಗದ ಜಸ್ಟೀಸ್ ಎಚ್‌.ಎನ್‌.ನಾಗಮೋಹನ ದಾಸ್ ಸಮಿತಿಯ ವರದಿಯನ್ನು ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದೆ. ‘ಎಸ್‌ಸಿ, ಎಸ್‌ಟಿಗಳಿಗೆ ದೀಪಾವಳಿ ಗಿಫ್ಟ್‌’ ಎಂದೆಲ್ಲ ಕೆಲ ಮಾಧ್ಯಮಗಳು ಅತಿರಂಜಕವಾಗಿ ವರದಿ ಮಾಡುತ್ತಿವೆ. ವಾಸ್ತವದಲ್ಲಿ ದಲಿತ ವಿದ್ಯಾರ್ಥಿಗಳ ಬದುಕನ್ನು ಸರ್ಕಾರ ಕತ್ತಲೆಗೆ ತಳ್ಳುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಹಿಂದ ವರ್ಗದವರು ವಿದ್ಯಾವಂತರಾಗಬಾರದು ಎಂಬ ಮನುವಾದಿಗಳ ಹಿಡನ್ ಅಜೆಂಡಾ, ಅತ್ಯಂತ ಯಶಸ್ವಿಯಾಗಿ ಜಾರಿಯಾಗುತ್ತಿದೆ.

  2. ಕೇವಲ ಬಾಯಿಮಾತಿನಲ್ಲಿ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ದಲಿತ ವಿದ್ಯಾರ್ಥಿ ಸಮೂಹದ ಬಗ್ಗೆ ಕಾಳಜಿ ತೋರುವುದಲ್ಲ, ಶೈಕ್ಷಣಿಕ ವಾಗಿ ಮುಂದೆ ಬರುವುದಕ್ಕೆ ಪ್ರೋತ್ಸಾಹ ನೀಡುವಂತ ಕ್ರಮ ಸರ್ಕಾರದ್ದಾಗಿರಬೇಕು, ಆದರೆ ಸನಾತನವಾದಿಗಳು, ಮನುವಾದಿಗಳಿಂದ ಇದನ್ನು ನೀರೀಕ್ಷಿಸಲಾಗದು, ಇದಕ್ಕೆ ಸಂಘಟಿತ ಹೋರಾಟದಿಂದ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಬಹುದು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...