Homeಮುಖಪುಟ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ...”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ತಮ್ಮ ಸ್ಥಾನವನ್ನು ತ್ಯಜಿಸುವಂತೆ ಕೇಳಿಕೊಂಡಿದ್ದ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರ ವಿವಾದಾತ್ಮಕ ನಿರ್ದೇಶನವನ್ನು ಪ್ರಶ್ನಿಸಿ ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸುವ ಬಗ್ಗೆ ಕೇರಳ ಹೈಕೋರ್ಟ್ ಇಂದು ಸಂಜೆ ವಿಶೇಷ ವಿಚಾರಣೆ ನಡೆಸಲಿದೆ.

ಹಿಂದಿನ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲೇಖಿಸಿರುವ ರಾಜ್ಯಪಾಲ ಆರಿಫ್‌ ಖಾನ್ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ನೇಮಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಹೊಂದಿಲ್ಲ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲರ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾನಿಲಯಗಳನ್ನು ‘ನಾಶಮಾಡುವ’ ಉದ್ದೇಶದಿಂದ ಯುದ್ಧ ನಡೆಸುತ್ತಿದ್ದು, ಸಂಘ ಪರಿವಾರದ ನಾಯಕನಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿಶ್ವವಿದ್ಯಾಲಯಗಳ ಉಪಕುಲಪತಿ ನೇಮಕದಲ್ಲಿ ರಾಜ್ಯಪಾಲರ ಅಧಿಕಾರ ಕಡಿತಗೊಳಿಸುವ ಮಸೂದೆ ಅಂಗೀಕರಿಸಿದ ತಮಿಳುನಾಡು

ರಾಜ್ಯಪಾಲರ ಈ ಕ್ರಮವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಅಧಿಕಾರ ಮತ್ತು ಶೈಕ್ಷಣಿಕವಾಗಿ ಸ್ವತಂತ್ರವಾಗಿರಬೇಕಾದ ವಿಶ್ವವಿದ್ಯಾಲಯಗಳ ಮೇಲಿನ ಅತಿಕ್ರಮಣವಾಗಿದೆ ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳ ಸರ್ಕಾರವು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ತಮ್ಮದೇ ನಿರ್ಧಾರದ ಮೇಲೆ ನೇಮಕ ಮಾಡಿತ್ತು. ಆದರೆ ಇದನ್ನು ವಿರೋಧಿಸಿರುವ ರಾಜ್ಯಪಾಲರು, ಉಪ ಕುಲಪತಿಗಳನ್ನು ನೇಮಿಸುವುದು ತಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

ಕೇರಳ ವಿಶ್ವವಿದ್ಯಾಲ, ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ತ್‌‌ ಎಳುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ ಉಪ ಕುಲಪತಿಗಳಿಗೆ ತಮ್ಮ ಸ್ಥಾನಗಳನ್ನು ತೊರೆಯುವಂತೆ ರಾಜ್ಯಪಾಲರು ಕೇಳಿದ್ದಾರೆ.

ರಾಜ್ಯಪಾಲರ ಈ ತೀರ್ಮಾನದ ವಿರುದ್ಧ ಆಡಳಿತರೂಢ ಎಡ ಡೆಮಾಕ್ರಟಿಕ್ ಫ್ರಂಟ್ ಮುಂದಿನ ತಿಂಗಳು ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಭಾರಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಇದನ್ನೂ ಓದಿ: ಹಂಪಿಯ ಕನ್ನಡ ವಿಶ್ವವಿದ್ಯಾಲಯ ಅಧೋಗತಿಯ ಹಾದಿ ಹಿಡಿದದ್ದು ಹೇಗೆ?

“ಇಂತಹ ನಿರ್ದೇಶನವನ್ನು ನೀಡಲು ರಾಜ್ಯಪಾಲರಿಗೆ ಯಾವುದೇ ಅಧಿಕಾರವಿಲ್ಲ. ಇದು ಅನಿಯಂತ್ರಿತವಾಗಿದ್ದು, ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದೆ. ಅವರು ಕೇರಳದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಮತ್ತು ನಾಶಮಾಡಲು ಬಯಸುತ್ತಾರೆ” ಎಂದು ಸಿಪಿಐ (ಎಂ) ನಾಯಕ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

“ಆರೆಸ್ಸೆಸ್ಸ್‌‌ ಕಾರ್ಯಕರ್ತರನ್ನು ನೇಮಿಸಿ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಅವರು ಬಯಸಿದ್ದು, ಈ ಮೂಲಕ  ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುತ್ವ ಸಿದ್ಧಾಂತವನ್ನು ಪ್ರಚಾರ ಮಾಡಲು ಹೊರಟಿದ್ದಾರೆ. ಸಂವಿಧಾನವು ಅಂತಹ ಯಾವುದೇ ಆದೇಶವನ್ನು ನೀಡಲು ರಾಜ್ಯಪಾಲರಿಗೆ ಅನುಮತಿ ನೀಡದ ಕಾರಣ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಾಗುತ್ತದೆ” ಅವರು ಹೇಳಿದ್ದಾರೆ.

ಕೇರಳ ರಾಜ್ಯಪಾಲರು ನಿರಂತರವಾಗಿ ರಾಜ್ಯ ಸರ್ಕಾರದ ಜೊತೆಗೆ ಸಂಘರ್ಷ ನಡೆಸುತ್ತಲೆ ಬಂದಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರ ವಿರುದ್ಧದ ತಮ್ಮ ದಾಳಿಯನ್ನು ತೀವ್ರಗೊಳಿಸಿದ್ದು,“ಪ್ರಜಾಪ್ರಭುತ್ವವನ್ನು ಗೌರವಿಸುವ ಯಾರೂ ಇಂತಹ ಅತಿಯಾದ ಪ್ರವೃತ್ತಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

ರಾಜ್ಯಪಾಲರ ಕಚೇರಿ ಇರುವುದು ರಾಜ್ಯ ಸರ್ಕಾರವನ್ನು ಬಿಕ್ಕಟ್ಟಿಗೆ ಸಿಲುಕಿಸಲೊ ಅಥವಾ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಲು ಇರುವುದು ಅಲ್ಲ. ಸಂವಿಧಾನವು ರಾಜ್ಯಪಾಲರಿಗೆ ನೀಡಿದ ಅಧಿಕಾರ ಮತ್ತು ಕರ್ತವ್ಯ ರಾಜ್ಯ, ಜನರು ಮತ್ತು ಸಂವಿಧಾನದ ಘನತೆಯನ್ನು ಕಾಪಾಡುವುದಾಗಿದೆ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ “ಸಂಘ ಪರಿವಾರ ಹಸ್ತಕ್ಷೇಪ” ನಡೆಸಿದೆ ಎಂದು ಪಿಣರಾಯಿ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...