Homeರಾಷ್ಟ್ರೀಯಉಪ ಕುಲಪತಿಗಳ ರಾಜೀನಾಮೆ ಕೇಳಿ ಪತ್ರ ಕಳುಹಿಸಿರುವುದು ಸರಿಯಲ್ಲ: ಕೇರಳ ಹೈಕೋರ್ಟ್

ಉಪ ಕುಲಪತಿಗಳ ರಾಜೀನಾಮೆ ಕೇಳಿ ಪತ್ರ ಕಳುಹಿಸಿರುವುದು ಸರಿಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ತಮ್ಮ ಸ್ಥಾನಗಳಿಗೆ ಕೂಡಲೆ ರಾಜಿನಾಮೆ ನೀಡುವಂತೆ ಕೇರಳದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ನೀಡಿದ್ದ ನಿರ್ದೇಶನಕ್ಕೆ ಹಿನ್ನಡೆಯಾಗಿದೆ. ಸೋಮವಾರ ನಡೆದ ವಿಶೇಷ ವಿಚಾರಣೆಯಲ್ಲಿ ಕೇರಳ ಹೈಕೋರ್ಟ್‌‌ ರಾ‌ಜ್ಯಪಾಲರು ಅಂತಿಮ ಆದೇಶ ನೀಡುವವರೆಗೆ ಉಪ ಕುಲಪತಿಗಳು ತಮ್ಮ ಸ್ಥಾನದಲ್ಲಿ ಮುಂದುವರೆಯಬಹುದು ಎಂದು ಎಂದು ಆದೇಶ ನೀಡಿದೆ.

“ಸೂಕ್ತ ತನಿಖೆಯ ನಂತರವೇ ಉಪ ಕುಲಪತಿಗಳನ್ನು ವಜಾ ಮಾಡಬಹುದು. ರಾಜೀನಾಮೆ ಕೇಳಿ ಪತ್ರ ಬರೆದಿದ್ದು ಸರಿಯಲ್ಲ. ಉಪ ಕುಲಪತಿಗಳ ವಿರುದ್ಧ ಕಾನೂನು ಪ್ರಕಾರ ಮಾತ್ರ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯಪಾಲರು ಕಾರ್ಯವಿಧಾನಗಳನ್ನು ಪೂರ್ಣಗೊಳಿಸಬೇಕು ಎಂದು ನ್ಯಾಯಾಲಯ ಇಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿನ ಉಪ ಕುಲಪತಿಗಳ ನೇಮಕಾತಿಗಳು ಪ್ರಾಥಮಿಕವಾಗಿ ಕಾನೂನುಬಾಹಿರವಲ್ಲವೇ ಎಂದು ಹೈಕೋರ್ಟ್ ಕೇಳಿದೆ. ನೇಮಕ ಮಾಡುವ ಅಧಿಕಾರ ರಾಜ್ಯಪಾಲರದ್ದಾಗಿದ್ದು, ಅವರು ಏಕೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಕೇಳಿದೆ.

ಇದನ್ನೂ ಓದಿ: ವಿವಿಗಳ ನೇಮಕಾತಿಗೆ ಅಂಟಿದ ಗುರು-ಶಿಷ್ಯ ಬಾಂಧವ್ಯದ ’ಕಳಂಕ’

“ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿ ನೇಮಕ ಅಸಿಂಧು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ತೀರ್ಪು ಅನ್ವಯವಾಗುವುದಾದರೆ ಉಪ ಕುಲಪತಿಗಳಿಗೆ ಅಕ್ಟೋಬರ್ 24ರವರೆಗೆ ಕಾಲಾವಕಾಶ ನೀಡಿದ ರಾಜ್ಯಪಾಲರು ಗೌರವಾನ್ವಿತರು” ಎಂದೂ ಹೈಕೋರ್ಟ್ ಹೇಳಿದೆ. ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ನೀಡಿರುವ ನೋಟಿಸ್ ವಿರುದ್ಧ ಉಪ ಕುಲಪತಿಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಮಧ್ಯೆ, ರಾಜ್ಯಪಾಲರು ಕಾನೂನಿನ ಪ್ರಕಾರ ಮಾತ್ರವೆ ಕ್ರಮ ಕೈಗೊಳ್ಳಬಹುದೆ ಹೊರತು ವಜಾಗೊಳಿಸಲು ಸಾಧ್ಯವಿಲ್ಲ ಎಂದು ಉಪ ಕುಲಪತಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪ್ರಸ್ತುತ ಅಸಾಧಾರಣ ಪರಿಸ್ಥಿತಿಯನ್ನು ಪರಿಗಣಿಸಿರುವ ಹೈಕೋರ್ಟ್‌ ರಜೆಯ ದಿನವೂ ವಿಶೇಷ ವಿಚಾರಣೆ ನಡೆಸಿದೆ. ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರ ಪೀಠವು ಉಪ ಕುಲಪತಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸಂಜೆ ನಾಲ್ಕು ಗಂಟೆಗೆ ಪ್ರಾರಂಭಿಸಿತ್ತು.

ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್‌ನ ಆದೇಶವನ್ನು ಉಲ್ಲೇಖಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ರಾಜ್ಯದ ಎಲ್ಲಾ ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಕಳೆದ ದಿನ ಸೂಚಿಸಿದ್ದರು.

ಇದನ್ನೂ ಓದಿ: ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಇಂದು ಬೆಳಗ್ಗೆ 11.30ರೊಳಗೆ ರಾಜೀನಾಮೆ ನೀಡಬೇಕು ಎಂದು ರಾಜ್ಯಪಾಲರು ಆಗ್ರಹಿಸಿದ್ದರು. ಆದರೆ ಉಪ ಕುಲಪತಿಗಳು ಯಾರೂ ರಾಜೀನಾಮೆ ನೀಡಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಈ ನಡುವೆ ಉಪ ಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ನೀಡಿದ್ದ ಗಡುವು ಮುಗಿದಿದ್ದು, ಯಾರೂ ಈ ವರೆಗೆ ರಾಜೀನಾಮೆ ನೀಡಿಲ್ಲ.

ಕೇರಳದ ಇತಿಹಾಸದಲ್ಲಿ ರಾಜಭವನವು ಒಂದು ಅಸಾಮಾನ್ಯ ಹೆಜ್ಜೆಗೆ ಪ್ರವೇಶಿಸಿದೆ. ಯುಜಿಸಿ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ತಾಂತ್ರಿಕ ವಿಶ್ವವಿದ್ಯಾಲಯದ ವಿಸಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್ ಆದೇಶವನ್ನು ಆಧರಿಸಿ ರಾಜ್ಯಪಾಲರು ಈ ಅಸಾಮಾನ್ಯ ಕ್ರಮವನ್ನು ಕೈಗೊಂಡಿದ್ದರು.

ಕೇರಳ ವಿಶ್ವವಿದ್ಯಾಲಯ, ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ತ್‌‌ ಎಳುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ ಉಪ ಕುಲಪತಿಗಳಿಗೆ ತಮ್ಮ ಸ್ಥಾನಗಳನ್ನು ತೊರೆಯುವಂತೆ ರಾಜ್ಯಪಾಲರು ಕೇಳಿದ್ದರು.

ಇದನ್ನೂ ಓದಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ರಾಜ್ಯಪಾಲರ ಆದೇಶವನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾನಿಲಯಗಳನ್ನು ‘ನಾಶಮಾಡುವ’ ಉದ್ದೇಶದಿಂದ ಯುದ್ಧ ನಡೆಸುತ್ತಿದ್ದು, ಸಂಘ ಪರಿವಾರದ ನಾಯಕನಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಈ ಕ್ರಮವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಅಧಿಕಾರ ಮತ್ತು ಶೈಕ್ಷಣಿಕವಾಗಿ ಸ್ವತಂತ್ರವಾಗಿರಬೇಕಾದ ವಿಶ್ವವಿದ್ಯಾಲಯಗಳ ಮೇಲಿನ ಅತಿಕ್ರಮಣವಾಗಿದೆ” ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದರು.

ಕೇರಳ ಸರ್ಕಾರವು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ತಮ್ಮದೇ ನಿರ್ಧಾರದ ಮೇಲೆ ನೇಮಕ ಮಾಡಿತ್ತು. ರಾಜ್ಯಪಾಲರ ತೀರ್ಮಾನದ ವಿರುದ್ಧ ಆಡಳಿತರೂಢ ಎಡ ಡೆಮಾಕ್ರಟಿಕ್ ಫ್ರಂಟ್ ಮುಂದಿನ ತಿಂಗಳು ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಭಾರಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಆಡಳಿತರೂಢ ಸಿಪಿಐಎಂ ಪಕ್ಷವೂ ಕೇರಳ ಸರ್ಕಾರವನ್ನು ಬೆಂಬಲಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ “ಇಂತಹ ನಿರ್ದೇಶನವನ್ನು ನೀಡಲು ರಾಜ್ಯಪಾಲರಿಗೆ ಯಾವುದೇ ಅಧಿಕಾರವಿಲ್ಲ. ಇದು ಅನಿಯಂತ್ರಿತವಾಗಿದ್ದು, ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದೆ. ಅವರು ಕೇರಳದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಮತ್ತು ನಾಶಮಾಡಲು ಬಯಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಕೇಂದ್ರಿಯ ವಿವಿ ಕನ್ನಡ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ತಮ್ಮ ಶಿಷ್ಯರನ್ನೇ ಆಯ್ಕೆ ಮಾಡಿದ ಸಂದರ್ಶಕರು: ಆರೋಪ

“ಆರೆಸ್ಸೆಸ್ಸ್‌‌ ಕಾರ್ಯಕರ್ತರನ್ನು ನೇಮಿಸಿ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಅವರು ಬಯಸಿದ್ದು, ಈ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುತ್ವ ಸಿದ್ಧಾಂತವನ್ನು ಪ್ರಚಾರ ಮಾಡಲು ಹೊರಟಿದ್ದಾರೆ. ಸಂವಿಧಾನವು ಅಂತಹ ಯಾವುದೇ ಆದೇಶವನ್ನು ನೀಡಲು ರಾಜ್ಯಪಾಲರಿಗೆ ಅನುಮತಿ ನೀಡದ ಕಾರಣ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಾಗುತ್ತದೆ” ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...