Homeಕರ್ನಾಟಕ‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ...!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್...

‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ…!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್ ಸದಸ್ಯರಿಗೆ ದೀಪಾವಳಿ ಉಡುಗೊರೆ

- Advertisement -
- Advertisement -

ವಿಜಯನಗರ ಜಿಲ್ಲೆಯ ಹೊಸಪೇಟೆ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದ ಚುನಾಯಿತ ಸದಸ್ಯರಿಗೆ ದುಬಾರಿ ದೀಪಾವಳಿ ಉಡುಗೊರೆಗಳನ್ನು ನೀಡಿ ವಿವಾದವೆಬ್ಬಿಸಿದ್ದಾರೆ.

ತಮ್ಮ ಮನೆಯಲ್ಲಿ ನಡೆಯುವ ಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಪೆಟ್ಟಿಗೆಯಲ್ಲಿ ಚಿನ್ನ, ಬೆಳ್ಳಿ, ಬಟ್ಟೆ, ನಗದುಗಳನ್ನು ಅವರು ನೀಡಿದ್ದಾರೆ. ಉಡುಗೊಡೆ ಬಾಕ್ಸ್ ಮತ್ತು ಅದರಲ್ಲಿರುವ ಫೋಟೋಗಳು ಈಗ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವ ಆನಂದ್ ಸಿಂಗ್‌ ಎರಡು ಸೆಟ್ ಉಡುಗೊರೆ ಬಾಕ್ಸ್‌ಗಳನ್ನು ನಗರಸಭೆ ಸದಸ್ಯರಿಗೆ ಮತ್ತು ಇನ್ನೊಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ವಿತರಿಸಿದ್ದಾರೆ ಎಂದು ವರದಿಯಾಗಿದೆ. ಪುರಸಭೆ ಸದಸ್ಯರಿಗೆ 1 ಲಕ್ಷ ರೂ.ನಗದು, 144 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ರೇಷ್ಮೆ ಸೀರೆ, ಧೋತಿ, ಡ್ರೈ ಫ್ರೂಟ್ ಬಾಕ್ಸ್ ನೀಡಿದರೆ, ಪಂಚಾಯ್ತಿ ಸದಸ್ಯರಿಗೆ ಇದಕ್ಕಿಂತಲೂ ಕಡಿಮೆ ನಗದು, ಚಿನ್ನಾಭರಣ ಮತ್ತು ಉಳಿದ ವಸ್ತುಗಳನ್ನು ನೀಡಿದ್ದಾಗಿ ವರದಿ ಹೇಳಿವೆ.

ಇದನ್ನೂ ಓದಿ: ಅರಣ್ಯ ಕಾಯ್ದೆಯಡಿ ಹಲವು ಗಂಭೀರ ಪ್ರಕರಣಗಳಿರುವ ಆನಂದ್ ಸಿಂಗ್‌ಗೆ ಅರಣ್ಯ ಸಚಿವ ಸ್ಥಾನ!

ಹೊಸಪೇಟೆ ಕ್ಷೇತ್ರವು 35 ಚುನಾಯಿತ ಮತ್ತು ಐದು ನಾಮನಿರ್ದೇಶಿತ ಸದಸ್ಯರ ಒಂದು ನಗರಸಭೆಯನ್ನು ಹೊಂದಿದೆ. ಜೊತೆಗೆ 182 ಸದಸ್ಯರನ್ನು ಹೊಂದಿರುವ 10 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ.

ಕೆಲವು ಪುರಸಭೆಯ ಚುನಾಯಿತ ಸದಸ್ಯರು ಉಡುಗೊರೆ ಪೆಟ್ಟಿಗೆಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದು, ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ಆನಂದ್‌ ಸಿಂಗ್‌ ಸೋಗಿನ ಸಜ್ಜನಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆನಂದ್ ಸಿಂಗ್ ಅವರ ಬೆಂಬಲಿಗರು ಇದನ್ನು ನಿರಾಕರಿಸಿದ್ದು, ಪ್ರತಿ ದೀಪಾವಳಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅವರು ಉಡುಗೊರೆಗಳನ್ನು ಕಳುಹಿಸುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಇರುವುದರಿಂದ ಈ ವರ್ಷ ವಿವಾದವಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳಿಗೂ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸಲಾಗಿದೆ ಎಂದು ಬೆಂಬಲಿಗರು ಹೇಳಿದ್ದಾರೆ.

ಇದನ್ನೂ ಓದಿ: ತನಗೆ ಸಿಕ್ಕ ಖಾತೆಗೆ ಕ್ಯಾತೆ ತೆಗೆದ ಸಚಿವ ಆನಂದ್ ಸಿಂಗ್!

“ಸಚಿವ ಆನಂದ್ ಸಿಂಗ್ ಅವರು ಪ್ರತಿ ಗಣೇಶ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಆಹ್ವಾನದ ಭಾಗವಾಗಿ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸುತ್ತಾರೆ. ಅವರು ಅವುಗಳನ್ನು ತನ್ನ ಆಪ್ತ ಸ್ನೇಹಿತರು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಕಳುಹಿಸುತ್ತಾರೆ. ಇದನ್ನು ಯಾಕೆ ವಿವಾದ ಮಾಡುತ್ತಿದ್ದಾರೆ ಎಂಬುದು ನಮಗೆ ಖಚಿತವಿಲ್ಲ” ಎಂದು ಹೊಸಪೇಟೆಯ ಬೆಂಬಲಿಗರೊಬ್ಬರು ಹೇಳಿದ್ದಾರೆ.

ಆಸ್ತಿ ವಿವಾದದ ಕುರಿತು ಕುಟುಂಬವೊಂದಕ್ಕೆ ಬೆದರಿಕೆ ಹಾಕಿದ್ದಕ್ಕಾಗಿ ಆನಂದ್ ಸಿಂಗ್ ವಿರುದ್ಧ ಪೊಲೀಸರು ಸೆಪ್ಟೆಂಬರ್‌‌‌ನಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ದಲಿತ ವ್ಯಕ್ತಿ ಡಿ. ಪೋಲಪ್ಪ ನೀಡಿದ ದೂರಿನ ಮೇರೆಗೆ ಸಚಿವರು ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿ ಗಣಿ ಉದ್ಯಮಿಯಾಗಿದ್ದು, ಅವರ ಚರ ಮತ್ತು ಸ್ಥಿರ ಆಸ್ತಿಗಳ ಒಟ್ಟು ಮೊತ್ತ 70 ಕೋಟಿ ರೂ. ಆಗಿದೆ. 2009 ರಲ್ಲಿ ಬಳ್ಳಾರಿ ಗಣಿಗಾರಿಕೆ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆನಂದ್ ಸಿಂಗ್‌ ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ, ವಂಚನೆ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ಕ್ರಿಮಿನಲ್ ಅತಿಕ್ರಮಣ ಮತ್ತು ಫೋರ್ಜರಿ ಆರೋಪವಿದೆ.

ಇದನ್ನೂ ಓದಿ: ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ರಾಜ್ಯದ ಬೇಲಿಕೇರಿ ಕೋಟೆಯಿಂದ ಕಬ್ಬಿಣವನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಲ್ಲಿ 2013 ರಲ್ಲಿ ಸಿಬಿಐ ಅವರನ್ನು ಎರಡನೇ ಬಾರಿಗೆ ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಷ್ಟೊಂದು ದುಬಾರಿ ಹಣ ಎಲ್ಲಿಂದ ಬಂತು ಇಲ್ಲಿಗೆ ಯಾಕೆ ಐಟಿ ಯವರು ಯಾಕೆ ರೈಡ್ ಮಾಡ್ಲಿಲ್ಲ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...