Homeಕರ್ನಾಟಕ‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ...!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್...

‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ…!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್ ಸದಸ್ಯರಿಗೆ ದೀಪಾವಳಿ ಉಡುಗೊರೆ

- Advertisement -
- Advertisement -

ವಿಜಯನಗರ ಜಿಲ್ಲೆಯ ಹೊಸಪೇಟೆ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದ ಚುನಾಯಿತ ಸದಸ್ಯರಿಗೆ ದುಬಾರಿ ದೀಪಾವಳಿ ಉಡುಗೊರೆಗಳನ್ನು ನೀಡಿ ವಿವಾದವೆಬ್ಬಿಸಿದ್ದಾರೆ.

ತಮ್ಮ ಮನೆಯಲ್ಲಿ ನಡೆಯುವ ಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಪೆಟ್ಟಿಗೆಯಲ್ಲಿ ಚಿನ್ನ, ಬೆಳ್ಳಿ, ಬಟ್ಟೆ, ನಗದುಗಳನ್ನು ಅವರು ನೀಡಿದ್ದಾರೆ. ಉಡುಗೊಡೆ ಬಾಕ್ಸ್ ಮತ್ತು ಅದರಲ್ಲಿರುವ ಫೋಟೋಗಳು ಈಗ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವ ಆನಂದ್ ಸಿಂಗ್‌ ಎರಡು ಸೆಟ್ ಉಡುಗೊರೆ ಬಾಕ್ಸ್‌ಗಳನ್ನು ನಗರಸಭೆ ಸದಸ್ಯರಿಗೆ ಮತ್ತು ಇನ್ನೊಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ವಿತರಿಸಿದ್ದಾರೆ ಎಂದು ವರದಿಯಾಗಿದೆ. ಪುರಸಭೆ ಸದಸ್ಯರಿಗೆ 1 ಲಕ್ಷ ರೂ.ನಗದು, 144 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ರೇಷ್ಮೆ ಸೀರೆ, ಧೋತಿ, ಡ್ರೈ ಫ್ರೂಟ್ ಬಾಕ್ಸ್ ನೀಡಿದರೆ, ಪಂಚಾಯ್ತಿ ಸದಸ್ಯರಿಗೆ ಇದಕ್ಕಿಂತಲೂ ಕಡಿಮೆ ನಗದು, ಚಿನ್ನಾಭರಣ ಮತ್ತು ಉಳಿದ ವಸ್ತುಗಳನ್ನು ನೀಡಿದ್ದಾಗಿ ವರದಿ ಹೇಳಿವೆ.

ಇದನ್ನೂ ಓದಿ: ಅರಣ್ಯ ಕಾಯ್ದೆಯಡಿ ಹಲವು ಗಂಭೀರ ಪ್ರಕರಣಗಳಿರುವ ಆನಂದ್ ಸಿಂಗ್‌ಗೆ ಅರಣ್ಯ ಸಚಿವ ಸ್ಥಾನ!

ಹೊಸಪೇಟೆ ಕ್ಷೇತ್ರವು 35 ಚುನಾಯಿತ ಮತ್ತು ಐದು ನಾಮನಿರ್ದೇಶಿತ ಸದಸ್ಯರ ಒಂದು ನಗರಸಭೆಯನ್ನು ಹೊಂದಿದೆ. ಜೊತೆಗೆ 182 ಸದಸ್ಯರನ್ನು ಹೊಂದಿರುವ 10 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ.

ಕೆಲವು ಪುರಸಭೆಯ ಚುನಾಯಿತ ಸದಸ್ಯರು ಉಡುಗೊರೆ ಪೆಟ್ಟಿಗೆಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದು, ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ಆನಂದ್‌ ಸಿಂಗ್‌ ಸೋಗಿನ ಸಜ್ಜನಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆನಂದ್ ಸಿಂಗ್ ಅವರ ಬೆಂಬಲಿಗರು ಇದನ್ನು ನಿರಾಕರಿಸಿದ್ದು, ಪ್ರತಿ ದೀಪಾವಳಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅವರು ಉಡುಗೊರೆಗಳನ್ನು ಕಳುಹಿಸುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಇರುವುದರಿಂದ ಈ ವರ್ಷ ವಿವಾದವಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳಿಗೂ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸಲಾಗಿದೆ ಎಂದು ಬೆಂಬಲಿಗರು ಹೇಳಿದ್ದಾರೆ.

ಇದನ್ನೂ ಓದಿ: ತನಗೆ ಸಿಕ್ಕ ಖಾತೆಗೆ ಕ್ಯಾತೆ ತೆಗೆದ ಸಚಿವ ಆನಂದ್ ಸಿಂಗ್!

“ಸಚಿವ ಆನಂದ್ ಸಿಂಗ್ ಅವರು ಪ್ರತಿ ಗಣೇಶ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಆಹ್ವಾನದ ಭಾಗವಾಗಿ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸುತ್ತಾರೆ. ಅವರು ಅವುಗಳನ್ನು ತನ್ನ ಆಪ್ತ ಸ್ನೇಹಿತರು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಕಳುಹಿಸುತ್ತಾರೆ. ಇದನ್ನು ಯಾಕೆ ವಿವಾದ ಮಾಡುತ್ತಿದ್ದಾರೆ ಎಂಬುದು ನಮಗೆ ಖಚಿತವಿಲ್ಲ” ಎಂದು ಹೊಸಪೇಟೆಯ ಬೆಂಬಲಿಗರೊಬ್ಬರು ಹೇಳಿದ್ದಾರೆ.

ಆಸ್ತಿ ವಿವಾದದ ಕುರಿತು ಕುಟುಂಬವೊಂದಕ್ಕೆ ಬೆದರಿಕೆ ಹಾಕಿದ್ದಕ್ಕಾಗಿ ಆನಂದ್ ಸಿಂಗ್ ವಿರುದ್ಧ ಪೊಲೀಸರು ಸೆಪ್ಟೆಂಬರ್‌‌‌ನಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ದಲಿತ ವ್ಯಕ್ತಿ ಡಿ. ಪೋಲಪ್ಪ ನೀಡಿದ ದೂರಿನ ಮೇರೆಗೆ ಸಚಿವರು ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿ ಗಣಿ ಉದ್ಯಮಿಯಾಗಿದ್ದು, ಅವರ ಚರ ಮತ್ತು ಸ್ಥಿರ ಆಸ್ತಿಗಳ ಒಟ್ಟು ಮೊತ್ತ 70 ಕೋಟಿ ರೂ. ಆಗಿದೆ. 2009 ರಲ್ಲಿ ಬಳ್ಳಾರಿ ಗಣಿಗಾರಿಕೆ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆನಂದ್ ಸಿಂಗ್‌ ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ, ವಂಚನೆ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ಕ್ರಿಮಿನಲ್ ಅತಿಕ್ರಮಣ ಮತ್ತು ಫೋರ್ಜರಿ ಆರೋಪವಿದೆ.

ಇದನ್ನೂ ಓದಿ: ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ರಾಜ್ಯದ ಬೇಲಿಕೇರಿ ಕೋಟೆಯಿಂದ ಕಬ್ಬಿಣವನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಲ್ಲಿ 2013 ರಲ್ಲಿ ಸಿಬಿಐ ಅವರನ್ನು ಎರಡನೇ ಬಾರಿಗೆ ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಷ್ಟೊಂದು ದುಬಾರಿ ಹಣ ಎಲ್ಲಿಂದ ಬಂತು ಇಲ್ಲಿಗೆ ಯಾಕೆ ಐಟಿ ಯವರು ಯಾಕೆ ರೈಡ್ ಮಾಡ್ಲಿಲ್ಲ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...