Homeಮುಖಪುಟದೆಹಲಿ ಜನರ ಮಾತೃಭಾಷೆ ಕಲಿಸಲು ಮುಂದಾಗುವ ಮೂಲಕ ಮತ್ತೊಂದು ಜನಪರ ಹೆಜ್ಜೆಯಿಟ್ಟ ಆಪ್ ಸರ್ಕಾರ

ದೆಹಲಿ ಜನರ ಮಾತೃಭಾಷೆ ಕಲಿಸಲು ಮುಂದಾಗುವ ಮೂಲಕ ಮತ್ತೊಂದು ಜನಪರ ಹೆಜ್ಜೆಯಿಟ್ಟ ಆಪ್ ಸರ್ಕಾರ

- Advertisement -
- Advertisement -

ದೆಹಲಿಯ ಆಮ್ ಆದ್ಮಿ ಪಾರ್ಟಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಶಿಕ್ಷಣ ಕ್ಷೇತ್ರದಲ್ಲಿ ಮಾಡುತ್ತಿರುವ ಕ್ರಾಂತಿಕಾರಕ ಬದಲಾವಣೆ ಬಗ್ಗೆ ನಿಮಗೆಲ್ಲಾ ತಿಳಿದೇ ಇದೆ. ಇದೇ ನಿಟ್ಟಿನಲ್ಲಿ ದೆಹಲಿ ಸರ್ಕಾರವು ಹೊಸ ಯೋಜನೆಯೊಂದನ್ನು ಜಾರಿ ಮಾಡಲು ನಿರ್ಧರಿಸಿದೆ. ಏನದು ಹೊಸ ಯೋಜನೆ?

ದೆಹಲಿ ಶಾಲೆಗಳಲ್ಲಿ ಓದುತ್ತಿರುವ 8 ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮೈಥಿಲಿ ಭಾಷೆಯನ್ನು ಐಚ್ಚಿಕ ವಿಷಯವನ್ನಾಗಿ ಪರಿಚಯಿಸುವುದಾಗಿ ದೆಹಲಿ ಸರ್ಕಾರ ತಿಳಿಸಿದೆ.

‘ಪೂರ್ವಾಚಲೀಸ್’ ಎಂದೇ ಕರೆಯಲ್ಪಡುವ ಪೂರ್ವ ಉತ್ತರ ಪ್ರದೇಶ ಹಾಗೂ ಬಿಹಾರದಿಂದ ದೆಹಲಿಗೆ ವಲಸೆ ಬರುವ ಬಹುಪಾಲು ಜನರು ಮಾತನಾಡುವ ಭಾಷೆ ಮೈಥಿಲಿ ಮತ್ತು ಬೋಜ್ ಪುರಿಯಾಗಿದ್ದು, ದೆಹಲಿಗೆ ವಲಸೆ ಬಂದಿರುವ ಶೇ.40% ಜನರು ಈ ರಾಜ್ಯದವರೇ ಆಗಿದ್ದಾರೆ.

ಈಗಾಗಲೇ ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಮೈಥಿಲಿ ಭಾಷೆಯನ್ನು ಈ ವರ್ಷದಿಂದ ಐಚ್ಛಿಕ ವಿಷಯವನ್ನಾಗಿ ಸೇರಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ಹಾಗೆಯೇ ಆಧುನಿಕ ಭಾರತೀಯ ಭಾಷೆಗಳನ್ನು ವ್ಯಾಖ್ಯಾನಿಸುವ ಸಂವಿಧಾನದ 8ನೇ ಪರಿಚ್ಛೇದಕ್ಕೆ ಬೋಜ್ ಪುರಿ ಭಾಷೆಯನ್ನು ಸೇರಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸರ್ಕಾರವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

‘8-12ನೇ ತರಗತಿವರೆಗಿನ ವಿದ್ಯಾರ್ಥಿಗಳು ಮೈಥಿಲಿ ಭಾಷೆಯನ್ನು ಒಂದು ವಿಷಯವನ್ನಾಗಿ ಕಲಿಯಲಿದ್ದಾರೆ. ದೆಹಲಿಯಲ್ಲಿ ವಾಸವಿರುವ ಮೈಥಿಲಿ ಭಾಷೆಯನ್ನು ಮಾತನಾಡಬಲ್ಲ ಸಾವಿರಾರು ವಿದ್ಯಾರ್ಥಿಗಳಿಗೆ ಮಾತೃಭಾಷೆಯನ್ನು ಒಂದು ವಿಷಯವನ್ನಾಗಿ  ಕಲಿಯಲು ಅವಕಾಶ ಸಿಗಲಿದೆ’ ಎಂದು ದೆಹಲಿ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿರುವ ಮನಿಷ್ ಸಿಸೋಡಿಯಾ ತಿಳಿಸಿದರು.

ಮೈಥಿಲಿ ಭಾಷೆಯಂತೆ ಬೋಜ್ ಪುರಿ ಭಾಷೆಯನ್ನು ಪರಿಚ್ಛೇದಕ್ಕೆ ಸೇರಿಸಿದಲ್ಲಿ ಬೋಜ್ ಪುರಿ ಭಾಷೆಯನ್ನು ಐಚ್ಛಿಕ ವಿಷಯವನ್ನಾಗಿ ವಿದ್ಯಾರ್ಥಿಗಳು ಕಲಿಸಬಹುದು. ಹಾಗಾಗಿ ಸಂವಿಧಾನದ 8ನೇ  ಪರಿಚ್ಛೇದದಲ್ಲಿ ಬೋಜ್ ಪುರಿ ಭಾಷೆಯನ್ನು ಒಳಗೊಳ್ಳಬೇಕು ಎಂದು ಸರ್ಕಾರವು ಒತ್ತಾಯಿಸಿದೆ.

‘ಮೈಥಿಲಿ ಭಾಷೆಯಂತೆ ಬೋಜ್ ಪುರಿಯನ್ನು ಐಚ್ಛಿಕ ವಿಷಯವನ್ನಾಗಿ ಪರಿಚಯಿಸಬೇಕು ಎಂದುಕೊಂಡೆವು. ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬೋಜ್ ಪುರಿಯನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಮೈಥಿಲಿ-ಬೋಜ್ ಪುರಿ ಅಕಾಡೆಮಿ ಆಫ್ ದೆಹಲಿ ಅಧ್ಯಕ್ಷನಾಗಿ ನಾನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಬೋಜ್ ಪುರಿಯನ್ನು ಸೇರಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ’ ಎಂದು ಸಿಸೋಡಿಯಾ ತಿಳಿಸಿದರು.

‘ಈಗಾಗಲೇ ಸರ್ಕಾರವು ಸಂಸ್ಕೃತವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋಚಿಂಗ್ ನೀಡುತ್ತಿದೆ. ಈ ಪ್ರಯೋಗದಲ್ಲಿ ನಾವು ಉತ್ತಮ ಫಲಿತಾಂಶ ಪಡೆದಿದ್ದೇವೆ. ಇದೇ  ನಿಟ್ಟಿನಲ್ಲಿ ಮೈಥಿಲಿ ಭಾಷೆಯನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ನಾಗರೀಕ ಸೇವಾ ಪರೀಕ್ಷೆ ಒಳಗೊಂಡಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸ್ಪರ್ಧಿಸುವ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡಲು ಸರ್ಕಾರ ನಿರ್ಧರಿಸಿದೆ’ ಎಂದು ಮನೀಷ್ ಸಿಸೊಡಿಯಾ ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...