Homeಮುಖಪುಟಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

ಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

- Advertisement -
- Advertisement -

‘ಕಾಂತಾರ’ ಸಿನಿಮಾದಲ್ಲಿನ ‘ವರಹ ರೂಪಂ’ ಹಾಡಿಗೂ ಮಲಯಾಳಂನ ‘ನವರಸಂ’ ಆಲ್ಬಮ್‌ಗೂ ಸಾಮ್ಯತೆಗಳು ಕಂಡು ಬಂದಿದ್ದು, ಕಾಂತಾರ ಚಿತ್ರತಂಡವು ಟ್ಯೂನ್‌ ಕದ್ದಿರುವ ಆರೋಪಕ್ಕೆ ಗುರಿಯಾಗಿದೆ.

ಈ ಕುರಿತು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಕಾನೂನು ಕ್ರಮ ಜರುಗಿಸಲು ನಿರ್ಧರಿಸಿದೆ. ‘ಕಾಂತಾರ’ ಚಿತ್ರದ ‘ವರಹ ರೂಪಂ’ ಹಾಡಿಗೆ ಆಕ್ಷೇಪ ಎತ್ತಿದ್ದು, ಕೃತಿಚೌರ್ಯದ ಆರೋಪ ಮಾಡಿದೆ.

‘ಕಾಂತಾರ’ ಚಿತ್ರತಂಡದಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದಿರುವ ‘ಥೈಕ್ಕುಡಮ್ ಬ್ರಿಡ್ಜ್’ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

“ತೈಕ್ಕುಡಂ ಬ್ರಿಡ್ಜ್‌’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ” ಎಂದು ‘ಥೈಕ್ಕುಡಮ್ ಬ್ರಿಡ್ಜ್‌’ ತಿಳಿಸಿದೆ.

“ನಮ್ಮ ದೃಷ್ಟಿಕೋದಲ್ಲಿ ‘ಸ್ಫೂರ್ತಿ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ” ಎಂದು ಎಚ್ಚರಿಸಿದೆ.

 

View this post on Instagram

 

A post shared by Thaikkudam Bridge (@thaikkudambridge)

“ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲವನ್ನು ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಿಮ್ಮನ್ನು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ” ಎಂದು ತಿಳಿಸಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದ್ದು, ಅಜನೀಶ್ ಬಿ.ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ‘ವರಹ ರೂಪಂ’ ಹಾಗೂ ‘ಸಿಂಗಾರ ಸಿರಿಯೇ’ ಹಾಡಿನ ಟ್ಯೂನ್‌ಗಳ ಮೇಲೆ ಕೃತಿಚೌರ್ಯದ ಆಕ್ಷೇಪಗಳನ್ನು ಪ್ರೇಕ್ಷಕರು ಮಾಡಿದ್ದರು.

‘ಸಿಂಗಾರ ಸಿರಿಯೇ’ ಹಾಡಿಗೂ ‘ಅಜಯ್‌- ಅತುಲ್‌’ ಅವರ ‘ಅಪ್ಸರ ಆಲಿ’ ಹಾಡಿಗೂ ಸಾಮ್ಯತೆಯನ್ನು ಪ್ರೇಕ್ಷಕರು ಗುರುತಿಸಿದ್ದರು.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

ಈ ಕುರಿತು ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಂಗೀತ ನಿರ್ದೇಶಕ ಅಜನೀಶ್‌ ಬಿ.ಲೋಕನಾಥ್, “ವರಹ ರೂಪಂ ಹಾಡು ರ್‍ಯಾಕ್‌ ಮ್ಯೂಸಿಕ್ ಶೈಲಿಯದ್ದಾಗಿದೆ. ಆದರೆ ರಾಗ ಸಂಯೋಜನೆ ಸಂಪೂರ್ಣ ಭಿನ್ನವಾಗಿದೆ. ಶೈಲಿ ಹಾಗೂ ರಾಗದ ಛಾಯೆ ಒಂದೇ ರೀತಿ ಇರುವುದರಿಂದ ‘ವರಹಾ ರೂಪಂ’ಗೂ ‘ನವರಸಂ’ಗೂ ಸಾಮ್ಯತೆ ಇದೆ ಅನಿಸುತ್ತದೆ. ಖಂಡಿತವಾಗಿಯೂ ನವರಸಂನಿಂದ ಸ್ಫೂರ್ತಿ ಇದೆ. ರಾಗ ಛಾಯೆ ಹಾಗೂ ಶೈಲಿ ಒಂದೇ ಆಗಿದ್ದರಿಂದ ಹೋಲಿಕೆ ಬರುತ್ತದೆ” ಎಂದಿದ್ದರು.

“ಸಿಂಗಾರ ಸಿರಿಯೇ ಹಾಡಿಗೂ ಅಪ್ಸರ ಅಲಿ ಹಾಡಿಗೂ ಸಂಬಂಧವಿಲ್ಲ. ಕೊರಸ್ ಬರುವ ಕಡೆ ಸಾಮ್ಯತೆ ಇದೆ ಎನಿಸುತ್ತದೆ” ಎಂದು ಸ್ಪಷ್ಪಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...