Homeಕ್ರೀಡೆಕ್ರಿಕೆಟ್ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ...

ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ ಚರ್ಚೆ

- Advertisement -
- Advertisement -

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಗಾದೆ ಮಾತಿನಂತೆ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ-ಪಾಕಿಸ್ತಾನ ಎದುರಿನ ಸೂಪರ್ 12 ಹಂತದ ಪಂದ್ಯ ಮುಗಿದರೂ ಅದರ ಕುರಿತ ಚರ್ಚೆಗಳು ಮಾತ್ರ ನಿಂತಿಲ್ಲ. ತೀವ್ರ ಕೂತೂಹಲಕ್ಕೆ ಕಾರಣವಾಗಿದ್ದ ಆ ಪಂದ್ಯ ಕೊನೆಯ ಓವರ್‌ನ ಕೊನೆಯ ಬಾಲ್‌ವರೆಗೂ ಸಾಗಿ ಅಂತಿಮವಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು. ಕೊನೆಯ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಎಸೆದ ನೋಬಾಲ್ ಒಂದು ಇಡೀ ಪಂದ್ಯದ ದಿಕ್ಕು ಬದಲಿಸಿಬಿಟ್ಟಿತು. ಆದರೆ ಪಾಕಿಸ್ತಾನ ತಂಡವು ಅದು ನೋಬಾಲ್ ಅಲ್ಲವೆಂದು ವಾದಿಸಿತು. ಅಷ್ಟು ಮಾತ್ರವಲ್ಲದೆ ನೋಬಾಲ್ ಕಾರಣಕ್ಕೆ ನೀಡಲಾದ ಫ್ರೀ ಹಿಟ್‌ನಲ್ಲಿ ಕೊಹ್ಲಿ ಬೌಲ್ಡ್ ಆದ ನಂತರ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಅದನ್ನು ಡೆಡ್ ಬಾಲ್ ಎಂದು ಪರಿಗಣಿಸಬೇಕು ಮತ್ತು ಬೈಸ್‌ ರನ್ ನೀಡಬಾರದು ಎಂದು ಪಾಕ್ ಆಟಗಾರರು ವಾದಿಸಿದರೂ ಅಂಪೈರ್ ಪುರಸ್ಕರಿಸಲಿಲ್ಲ. ಈ ಕುರಿತು ಚರ್ಚೆಗಳು ಮುಂದುವರೆದಿವೆ.

ನಿಯಮಗಳ ಪ್ರಕಾರ ಫ್ರಿಹಿಟ್ ಬಾಲ್‌ನಲ್ಲಿ ರನ್‌ ಔಟ್ ಹೊರತುಪಡಿಸಿ ಉಳಿದ ಔಟ್‌ಗಳಿಗೆ ಅವಕಾಶವಿಲ್ಲ. ಅದೇ ರೀತಿ ಬೌಲ್ಡ್ ಆದಾಗ ಬಾಲ್ ಚಲನೆಯಲ್ಲಿರುವವರೆಗೂ ರನ್ ಗಳಿಸುವ ಅವಕಾಶವಿದೆ ಎಂದು ಐಸಿಸಿ ನಿಯಮಗಳು ಹೇಳುತ್ತವೆ. ಈ ವಿಷಯದ ಕುರಿತು ತಜ್ಞ ಅಂಪೈರ್ ಎಂದು ಖ್ಯಾತಿ ಪಡೆದ ಸೈಮನ್ ಟಫೆಲ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ರಾತ್ರಿ ಎಂಸಿಜಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ರೋಚಕ ಕ್ಲೈಮ್ಯಾಕ್ಸ್ ನಂತರ “ಕೊಹ್ಲಿ ಫ್ರೀ ಹಿಟ್‌ನಲ್ಲಿ ಬೌಲ್ಡ್ ಆದಾಗ ಭಾರತ ಗಳಿಸಿದ ಬೈಸ್ ರನ್‌ಗಳ ಕುರಿತು ವಿವರಿಸಲು ಅನೇಕರು ನನ್ನನ್ನು ಕೇಳಿದ್ದಾರೆ” ಎಂದು ಸೈಮನ್ ಟೌಫೆಲ್ ಲಿಂಕ್ಡ್‌ಇನ್‌ನಲ್ಲಿ ಬರೆದಿದ್ದಾರೆ.

“ಐಸಿಸಿ ನಿಯಮಗಳ ಪ್ರಕಾರ ಆ ಪಂದ್ಯದಲ್ಲಿ ಸ್ಟಂಪ್‌ಗೆ ಬಡಿದ ಬಾಲ್ ಥರ್ಡ್ ಮ್ಯಾನ್‌ ಕಡೆ ಚಲಿಸಿತು. ಆಗ ಬ್ಯಾಟರ್‌ಗಳು ಮೂರು ರನ್ ಗಳಿಸಿದಾಗ ಬೈ ಸಿಗ್ನಲ್ ನೀಡಿದ ಅಂಪೈರ್ ನಿರ್ಧಾರ ಸರಿಯಾಗಿದೆ. ಫ್ರೀ ಹಿಟ್‌ ಬಾಲ್‌ನಲ್ಲಿ ಸ್ಟ್ರೈಕರ್ ಬೌಲ್ಡ್ ಆಗಲು ಸಾಧ್ಯವಿಲ್ಲ. ಆದ್ದರಿಂದ ಅದು ಡೆಡ್ ಬಾಲ್ ಅಲ್ಲ. ಬಾಲ್ ಇನ್ನೂ ಆಟದಲ್ಲಿದ್ದರಿಮದ ಬೈಸ್‌ ನೀಡುವುದು ನಿಯಮಗಳ ಅಡಿ ಸರಿಯಾದ ಕ್ರಮವಾಗಿದೆ” ಎಂದು ಅವರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಆ ಒಂದು ನೋಬಾಲ್‌ನಿಂದಾಗಿ ಸಾಕಷ್ಟು ಚರ್ಚೆಗಳು ನಡೆದವು ಮತ್ತು ಪಾಕ್ ಆ ಪಂದ್ಯವನ್ನು ಕಳೆದುಕೊಂಡಿತು. ಇಲ್ಲದಿದ್ದಲ್ಲಿ ವಿರಾಟ್ ಕೊಹ್ಲಿಯವರು ಬೌಲ್ಡ್ ಆದದ್ದು ಆನಂತರ ಮೂರು ರನ್ ಬೈಸ್ ರೂಪದಲ್ಲಿ ಸಿಕ್ಕಿದ್ದು ಸಾಧ್ಯವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಆ ಪಂದ್ಯ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಹಾಗಾಗಿಯೇ ಆಸ್ಟ್ರೇಲಿಯಾದ ಆಟಗಾರ ಮಿಷೆಲ್ ಮಾರ್ಶ್ “ಇಲ್ಲಿಗೆ ವಿಶ್ವಕಪ್ ಟೂರ್ನಿ ನಿಲ್ಲಿಸಿ ಬಿಡೋಣ. ಏಕೆಂದರೆ ಪಾಕ್-ಭಾರತ ಪಂದ್ಯಕ್ಕಿಂತ ಹೆಚ್ಚಿನ ಮನರಂಜನೆ ನೀಡಲು ಸಾಧ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ: ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...