Homeಕ್ರೀಡೆಕ್ರಿಕೆಟ್ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ...

ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ ಚರ್ಚೆ

- Advertisement -
- Advertisement -

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಗಾದೆ ಮಾತಿನಂತೆ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ-ಪಾಕಿಸ್ತಾನ ಎದುರಿನ ಸೂಪರ್ 12 ಹಂತದ ಪಂದ್ಯ ಮುಗಿದರೂ ಅದರ ಕುರಿತ ಚರ್ಚೆಗಳು ಮಾತ್ರ ನಿಂತಿಲ್ಲ. ತೀವ್ರ ಕೂತೂಹಲಕ್ಕೆ ಕಾರಣವಾಗಿದ್ದ ಆ ಪಂದ್ಯ ಕೊನೆಯ ಓವರ್‌ನ ಕೊನೆಯ ಬಾಲ್‌ವರೆಗೂ ಸಾಗಿ ಅಂತಿಮವಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು. ಕೊನೆಯ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಎಸೆದ ನೋಬಾಲ್ ಒಂದು ಇಡೀ ಪಂದ್ಯದ ದಿಕ್ಕು ಬದಲಿಸಿಬಿಟ್ಟಿತು. ಆದರೆ ಪಾಕಿಸ್ತಾನ ತಂಡವು ಅದು ನೋಬಾಲ್ ಅಲ್ಲವೆಂದು ವಾದಿಸಿತು. ಅಷ್ಟು ಮಾತ್ರವಲ್ಲದೆ ನೋಬಾಲ್ ಕಾರಣಕ್ಕೆ ನೀಡಲಾದ ಫ್ರೀ ಹಿಟ್‌ನಲ್ಲಿ ಕೊಹ್ಲಿ ಬೌಲ್ಡ್ ಆದ ನಂತರ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಅದನ್ನು ಡೆಡ್ ಬಾಲ್ ಎಂದು ಪರಿಗಣಿಸಬೇಕು ಮತ್ತು ಬೈಸ್‌ ರನ್ ನೀಡಬಾರದು ಎಂದು ಪಾಕ್ ಆಟಗಾರರು ವಾದಿಸಿದರೂ ಅಂಪೈರ್ ಪುರಸ್ಕರಿಸಲಿಲ್ಲ. ಈ ಕುರಿತು ಚರ್ಚೆಗಳು ಮುಂದುವರೆದಿವೆ.

ನಿಯಮಗಳ ಪ್ರಕಾರ ಫ್ರಿಹಿಟ್ ಬಾಲ್‌ನಲ್ಲಿ ರನ್‌ ಔಟ್ ಹೊರತುಪಡಿಸಿ ಉಳಿದ ಔಟ್‌ಗಳಿಗೆ ಅವಕಾಶವಿಲ್ಲ. ಅದೇ ರೀತಿ ಬೌಲ್ಡ್ ಆದಾಗ ಬಾಲ್ ಚಲನೆಯಲ್ಲಿರುವವರೆಗೂ ರನ್ ಗಳಿಸುವ ಅವಕಾಶವಿದೆ ಎಂದು ಐಸಿಸಿ ನಿಯಮಗಳು ಹೇಳುತ್ತವೆ. ಈ ವಿಷಯದ ಕುರಿತು ತಜ್ಞ ಅಂಪೈರ್ ಎಂದು ಖ್ಯಾತಿ ಪಡೆದ ಸೈಮನ್ ಟಫೆಲ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ರಾತ್ರಿ ಎಂಸಿಜಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ರೋಚಕ ಕ್ಲೈಮ್ಯಾಕ್ಸ್ ನಂತರ “ಕೊಹ್ಲಿ ಫ್ರೀ ಹಿಟ್‌ನಲ್ಲಿ ಬೌಲ್ಡ್ ಆದಾಗ ಭಾರತ ಗಳಿಸಿದ ಬೈಸ್ ರನ್‌ಗಳ ಕುರಿತು ವಿವರಿಸಲು ಅನೇಕರು ನನ್ನನ್ನು ಕೇಳಿದ್ದಾರೆ” ಎಂದು ಸೈಮನ್ ಟೌಫೆಲ್ ಲಿಂಕ್ಡ್‌ಇನ್‌ನಲ್ಲಿ ಬರೆದಿದ್ದಾರೆ.

“ಐಸಿಸಿ ನಿಯಮಗಳ ಪ್ರಕಾರ ಆ ಪಂದ್ಯದಲ್ಲಿ ಸ್ಟಂಪ್‌ಗೆ ಬಡಿದ ಬಾಲ್ ಥರ್ಡ್ ಮ್ಯಾನ್‌ ಕಡೆ ಚಲಿಸಿತು. ಆಗ ಬ್ಯಾಟರ್‌ಗಳು ಮೂರು ರನ್ ಗಳಿಸಿದಾಗ ಬೈ ಸಿಗ್ನಲ್ ನೀಡಿದ ಅಂಪೈರ್ ನಿರ್ಧಾರ ಸರಿಯಾಗಿದೆ. ಫ್ರೀ ಹಿಟ್‌ ಬಾಲ್‌ನಲ್ಲಿ ಸ್ಟ್ರೈಕರ್ ಬೌಲ್ಡ್ ಆಗಲು ಸಾಧ್ಯವಿಲ್ಲ. ಆದ್ದರಿಂದ ಅದು ಡೆಡ್ ಬಾಲ್ ಅಲ್ಲ. ಬಾಲ್ ಇನ್ನೂ ಆಟದಲ್ಲಿದ್ದರಿಮದ ಬೈಸ್‌ ನೀಡುವುದು ನಿಯಮಗಳ ಅಡಿ ಸರಿಯಾದ ಕ್ರಮವಾಗಿದೆ” ಎಂದು ಅವರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಆ ಒಂದು ನೋಬಾಲ್‌ನಿಂದಾಗಿ ಸಾಕಷ್ಟು ಚರ್ಚೆಗಳು ನಡೆದವು ಮತ್ತು ಪಾಕ್ ಆ ಪಂದ್ಯವನ್ನು ಕಳೆದುಕೊಂಡಿತು. ಇಲ್ಲದಿದ್ದಲ್ಲಿ ವಿರಾಟ್ ಕೊಹ್ಲಿಯವರು ಬೌಲ್ಡ್ ಆದದ್ದು ಆನಂತರ ಮೂರು ರನ್ ಬೈಸ್ ರೂಪದಲ್ಲಿ ಸಿಕ್ಕಿದ್ದು ಸಾಧ್ಯವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಆ ಪಂದ್ಯ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಹಾಗಾಗಿಯೇ ಆಸ್ಟ್ರೇಲಿಯಾದ ಆಟಗಾರ ಮಿಷೆಲ್ ಮಾರ್ಶ್ “ಇಲ್ಲಿಗೆ ವಿಶ್ವಕಪ್ ಟೂರ್ನಿ ನಿಲ್ಲಿಸಿ ಬಿಡೋಣ. ಏಕೆಂದರೆ ಪಾಕ್-ಭಾರತ ಪಂದ್ಯಕ್ಕಿಂತ ಹೆಚ್ಚಿನ ಮನರಂಜನೆ ನೀಡಲು ಸಾಧ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ: ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...