Homeಮುಖಪುಟಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM' ಚರ್ಚೆ ಮುನ್ನೆಲೆಗೆ

ಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM’ ಚರ್ಚೆ ಮುನ್ನೆಲೆಗೆ

- Advertisement -
- Advertisement -

ಯುಕೆಯ ಕನ್ಸರ್‌ವೇಟಿವ್‌ ಪಕ್ಷದಲ್ಲಿ ಭಾರತ ಮೂಲದ ಬ್ರಿಟಿಷ್ ನಾಯಕ ರಿಷಿ ಸುನಕ್ ಪ್ರಧಾನಿಯಾದ ಬಳಿಕ ಭಾರತದಲ್ಲಿ ವಿವಾದಾತ್ಮಕ ಕಾನೂನುಗಳಾದ ಪೌರತ್ವ (ತಿದ್ದುಪಡಿ) ಕಾಯಿದೆ, ಎನ್‌ಆರ್‌ಸಿ ಕುರಿತು ಚರ್ಚೆಯಾಗುತ್ತಿದೆ. ಜೊತೆಗೆ ದಲಿತ ಪಿಎಂ, ಮುಸ್ಲಿಂ ಪಿಎಂ ಚರ್ಚೆ ಮುನ್ನೆಲೆಗೆ ಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿ, “ಭಾರತೀಯ ಮೂಲದವರು ಯುಕೆ ಪ್ರಧಾನಿಯಾಗಿರುವುದು ಹೆಮ್ಮೆಯ ಕ್ಷಣವಾಗಿದೆ. ಆದರೆ ಭಾರತವು ಎನ್‌ಆರ್‌ಸಿ, ಸಿಎಎಯಂತಹ ವಿಭಜಕ ಮತ್ತು ತಾರತಮ್ಯ ಕಾನೂನುಗಳಿಂದ ಇನ್ನೂ ಸಂಕೋಲೆಯಲ್ಲಿದೆ” ಎಂದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಟ್ವೀಟ್ ಮಾಡಿ, “ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರನ್ನು ಒಪ್ಪಿಕೊಳ್ಳುತ್ತೀರಾ?” ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥರನ್ನು ಪ್ರಶ್ನಿಸಿದ್ದಾರೆ.

ರಿಷಿ ಸುನಕ್‌ ಪ್ರಧಾನಿಯಾದ ಬೆನ್ನಲ್ಲೇ ಭಾರತದಲ್ಲಿ ಸಂಭ್ರಮಾಚರಣೆಗಳು ನಡೆಯುತ್ತಿವೆ. ಇದರ ನಡುವೆ ಗಂಭೀರ ಚರ್ಚೆಗಳು ಶುರುವಾಗಿವೆ. ಭಾರತದಲ್ಲಿ ಇದುವರೆಗೆ ಒಬ್ಬರೇ ಒಬ್ಬರು ಮುಸ್ಲಿಂ ಮತ್ತು ದಲಿತ ವ್ಯಕ್ತಿ ಪ್ರಧಾನಿ ಯಾಕೆ ಆಗಿಲ್ಲ ಎಂದು ಹಲವು ಟ್ವಿಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

#MuslimPM ಹ್ಯಾಶ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಸದ್ಯ ಸ್ವೀಡನ್‌ನಲ್ಲಿರುವ ಖ್ಯಾತ ಅಂಕಣಕಾರ ಅಶೋಕ್‌ ಸ್ವೈನ್‌, “ಓರ್ವ ಹಿಂದೂ ಇಂಗ್ಲೆಂಡ್‌ ದೇಶದ ಪ್ರಧಾನಿಯಾಗುವುದಾದರೆ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್‌ ಅಥವಾ ದಲಿತರೊಬ್ಬರು ದೇಶದ ಪ್ರಧಾನಿ ಯಾಕಾಗಬಾರದು?” ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟನ್ನು ಸುಮಾರು 45,000ಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದು, 7000ಕ್ಕೂ ಹೆಚ್ಚು ಮಂದಿ ರೀಟ್ವೀಟ್‌ ಮಾಡಿದ್ದಾರೆ.

“ಜಾಸ್ಮಿನ್‌ ಫೆರ್ನಾಂಡೋ ಎಂಬುವವರು ಈ ಕುರಿತು ಟ್ವೀಟ್‌ ಮಾಡಿದ್ದು, ನಾವು ಮುಸ್ಲಿಂ ಪ್ರಧಾನಿಯ ಬೇಡಿಕೆ ಇಡೋದಿಲ್ಲ. ಯಾಕೆಂದರೆ ನಿಮ್ಮ ಮೈಂಡ್‌ ಸೆಟ್‌ ಅದಕ್ಕೆ ಒಪ್ಪಿಗೆ ನೀಡುವುದಿಲ್ಲ. ದಯವಿಟ್ಟು ಭಾರತದಲ್ಲಿ ಅಲ್ಪಸಂಖ್ಯಾತರನ್ನು ನೆಮ್ಮದಿಯಾಗಿ ಬದುಕಲು ಬಿಡಿ. ಭಾರತದಲ್ಲಿ ಒಬ್ಬ ದಲಿತ ಪ್ರಧಾನಿಯೂ ಆಗುವ ಸಾಧ್ಯತೆ ಇಲ್ಲ. ಯಾಕೆಂದರೆ ಹಿಂದೂ ಧಾರ್ಮಿಕ ಪುಸ್ತಕಗಳು ದಲಿತರನ್ನು ಆಡಳಿತಗಾರನ್ನಾಗಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇಂಗ್ಲೆಂಡ್‌ ನಲ್ಲಿ ಕೇವಲ 1.5% ಹಿಂದೂಗಳಿದ್ದಾರೆ. ಕ್ರಿಶ್ಚಿಯನ್‌ ಮೆಜಾರಿಟಿ ಇರುವ ಆ ದೇಶದಲ್ಲಿ ಒಬ್ಬ ಹಿಂದೂ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಮಾಡಲಾಗುತ್ತಿದೆ. ಭಾರತದಲ್ಲಿ ಶೇ.15ರಷ್ಟು ಮಂದಿ ಮುಸ್ಲಿಮರಿದ್ದಾರೆ. ಮುಸ್ಲಿಂ ಪ್ರಧಾನಿಯ ವಿಷಯ ಹಾಗಿರಲಿ, ಲೋಕಸಭೆಯ 543 ಸದಸ್ಯ ಸ್ಥಾನ ಗಳಲ್ಲಿ ಮುಸ್ಲಿಮರ ಸಂಖ್ಯೆ ಕೇವಲ 27. (ಶೇ.5) ಎಂದು ಪತ್ರಕರ್ತ ಸಂದೀಪ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

“ನಮ್ಮ ಭಾರತವು ಮುಸ್ಲಿಂ ಪ್ರಧಾನಿಯನ್ನು ಆಯ್ಕೆ ಮಾಡಬೇಕೇ? ಪ್ರಧಾನಿಯ ಧರ್ಮ ಅಥವಾ ಲಿಂಗವನ್ನು ಲೆಕ್ಕಿಸದೆ ಭಾರತವು ಸಮರ್ಥ ಪ್ರಧಾನಿಯನ್ನು ಆಯ್ಕೆ ಮಾಡಬೇಕಾಗಿದೆ! ನಮ್ಮ ಪ್ರಧಾನಿ ಹಿಂದೂ, ಮುಸ್ಲಿಂ, ಜೈನ, ನಾಸ್ತಿಕ, ಉಭಯಲಿಂಗಿ, ಸಲಿಂಗಿ, ಅಲೈಂಗಿಕ, ಪುರುಷ, ಮಹಿಳೆ, ಟ್ಯಾನ್ಸ್ಜೆಂಡರ್ ಆಗಿದ್ದರೂ ಪರವಾಗಿಲ್ಲ ನಮ್ಮ ಭಾರತೀಯ ಪ್ರಧಾನಿಗೆ ದೂರದೃಷ್ಟಿ ಇರಬೇಕು” ಎಂದು ರಾಜಕೀಯ ವಿಶ್ಲೇಷಕ ತಹಸೀನ್‌ ಪೂನಾವಾಲ್ಲಾ ಅಭಿಪ್ರಾಯಪಟ್ಟಿದ್ದಾರೆ.

“ಮುಸ್ಲಿಂ ಪ್ರಧಾನಿ ಆಯ್ಕೆ ವಿಚಾರ ಅಪ್ರಸ್ತುತವಾಗಿದೆ. ಏಕೆಂದರೆ ನಮ್ಮ ಭಾರತವು ಸಂಸದೀಯ ಪ್ರಜಾಪ್ರಭುತ್ವವನ್ನು ಹೊಂದಿದೆ ಹೊರತು ಅಧ್ಯಕ್ಷೀಯ ಮಾದರಿಯಲ್ಲ. ಜನರು ರಾಜಕೀಯ ಪಕ್ಷವನ್ನು ಆಯ್ಕೆ ಮಾಡುತ್ತಾರೆ. ಅದರ ಸಂಸದರು ನಂತರ ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ. ಯಾರಿಗಾದರೂ ಬಹುಪಾಲು ಸಂಸದರ ಬೆಂಬಲವಿದ್ದರೆ, ಪ್ರಧಾನಿಯಾಗಲು ಯಾವುದೇ ಸಾಂವಿಧಾನಿಕ ಅಡ್ಡಿಯಿಲ್ಲ! ಉದಾ: ಡಾ ಎಂಎಂಎಸ್!” ಎಂದು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...