Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ಭಾರತ ತಂಡಕ್ಕೆ ಸೂಪರ್ 12 ಹಂತದ ಇನ್ನು ನಾಲ್ಕು ಪಂದ್ಯಗಳು ಬಾಕಿ ಇದ್ದು ಒಮ್ಮೆ ಮೈ ಮರೆತರೂ ಕಳೆದ ವರ್ಷದಂತೆ ಸೆಮಿಫೈನಲ್ ಪ್ರವೇಶಿಸದೆ ಹೊರಬೀಳುವ ಆತಂಕವಿದೆ.

- Advertisement -
- Advertisement -

ಬಹು ನಿರೀಕ್ಷಿತ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕ್ ಎದುರು ಕೊನೆಯ ಎಸೆತದಲ್ಲಿ ರೋಚಕ ಗೆಲುವು ಪಡೆದಿದೆ. ವಿರಾಟ್ ಕೊಹ್ಲಿಯ ಅದ್ಭುತ ಇನ್ನಿಂಗ್ಸ್ (53 ಎಸೆತಗಳಲ್ಲಿ 82 ರನ್)  ಮೂಲಕ ಕಳೆದ ವರ್ಷದ ಮೊದಲ ಪಂದ್ಯದ ಸೋಲಿನ ಕಹಿ ಮರೆತಿದೆ. ಅಲ್ಲದೆ ಎರಡನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ದವೂ 56 ರನ್ ಗಳ ಜಯ ಕಂಡಿದೆ. ಆದರೆ ಇಷ್ಟಕ್ಕೆ ಭಾರತ ನಿಟ್ಟುಸಿರು ಬಿಡುವ ಪರಿಸ್ಥಿತಿ ಇಲ್ಲ. ಭಾರತ ತಂಡಕ್ಕೆ ಸೂಪರ್ 12 ಹಂತದ ಇನ್ನು ಮೂರು ಪಂದ್ಯಗಳು ಬಾಕಿ ಇದ್ದು ಒಮ್ಮೆ ಮೈ ಮರೆತರೂ ಕಳೆದ ವರ್ಷದಂತೆ ಸೆಮಿಫೈನಲ್ ಪ್ರವೇಶಿಸದೆ ಹೊರಬೀಳುವ ಆತಂಕವಿದೆ.

ಕಳೆದ ವರ್ಷದ ಸೂಪರ್ 12 ಹಂತದಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಪಾಕ್ ಮತ್ತು ನ್ಯೂಜಿಲೆಂಡ್ ಎದುರು ಪರಾಭವಗೊಂಡಿದ್ದ ಭಾರತ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಗ್ರೂಪ್ ಎರಡರಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಕ್ರಮವಾಗಿ 5 ಮತ್ತು 4 ಗೆಲುವುಗಳೊಂದಿಗೆ ಸೆಮಿಫೈನಲ್ ತಲುಪಿದ್ದವು. ಈ ಬಾರಿ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದು ವಿಶ್ವಾಸದಲ್ಲಿರುವ ಭಾರತ ತಂಡವು ಉಳಿದ ಪಂದ್ಯಗಳತ್ತ ದೃಷ್ಟಿ ನೆಟ್ಟಿದೆ.

ಗ್ರೂಪ್ ಎರಡರಲ್ಲಿ 6 ತಂಡಗಳಿದ್ದು, ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳಷ್ಟೇ ಸೆಮಿಗೆ ಹೋಗಲು ಸಾಧ್ಯ. ಭಾರತ ಮುಂದಿನ ಎದುರಾಳಿಗಳಾದ ದಕ್ಷಿಣ ಆಫ್ರಿಕಾ, ಮತ್ತು ಬಾಂಗ್ಲಾದೇಶ ತಂಡಗಳು ಸಹ ಬಲಿಷ್ಟವಾಗಿ ಕಾಣಿಸುತ್ತಿವೆ. ಅಲ್ಲದೆ ಪಾಕ್ ತಂಡ ಉಳಿದ ಪಂದ್ಯಗಳಲ್ಲಿ ಕಮ್ ಬ್ಯಾಕ್ ಮಾಡುವ ಉದ್ದೇಶ ಹೊಂದಿದೆ. ಹಾಗಾಗಿ ಭಾರತ ತಂಡ ಸತತ ಗೆಲುವುಗಳೊಂದಿಗೆ ಸೆಮಿಫೈನಲ್ ತಲುಪುವ ಸಾಧ್ಯತೆಗಳು ಈ ಕೆಳಗಿನಂತಿವೆ.

ಇದನ್ನೂ ಓದಿ; ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಸಾಧ್ಯತೆ 1: ಭಾರತ ತಂಡವು ತನ್ನ ಮುಂದಿನ ಪಂದ್ಯಗಳನ್ನು ಕ್ರಮವಾಗಿ ದಕ್ಷಿಣ ಆಫ್ರಿಕಾ (ಅಕ್ಟೋಬರ್ 30), ಬಾಂಗ್ಲಾದೇಶ (ನವೆಂಬರ್ 2) ಮತ್ತು ಜಿಂಬಾಬ್ವೆ (ನವೆಂಬರ್ 6) ವಿರುದ್ದ ಸೆಣಸಲಿದೆ. ಈ ಮೂರು ಪಂದ್ಯಗಳನ್ನು ಗೆದ್ದಲ್ಲಿ ಅದು 10 ಪಾಯಿಂಟ್‌ಗಳೊಂದಿಗೆ ನಿರಾಂತಕವಾಗಿ ಸೆಮಿಫೈನಲ್ ತಲುಪಲಿದೆ.

ಸಾಧ್ಯತೆ 2: ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ನಡುವಿನ ಪಂದ್ಯ ಮಳೆಯ ಕಾರಣದಿಂದ ಸ್ಥಗಿತಗೊಂಡಿತು. ಹಾಗಾಗಿ ಎರಡೂ ತಂಡಕ್ಕೂ ತಲಾ ಒಂದೊಂದು ಅಂಕ ನೀಡಲಾಗಿದೆ. ಹಾಗಾಗಿ ಸೆಮಿಫೈನಲ್ ತಲುಪುವ ಪ್ರಬಲ ತಂಡಗಳಾದ ಪಾಕ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುವ ನವೆಂಬರ್ 3ರ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ. ಆ ಪಂದ್ಯದಲ್ಲಿ ಸೋತ ತಂಡ ಹೊರನಡೆಯುವ ಸಾಧ್ಯತೆಯಿರುತ್ತದೆ. ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದಲ್ಲಿ ಸೆಮಿಫೈನಲ್ ದಾರಿ ಸುಲಭವಾಗಲಿದೆ.

ಒಂದು ಪಂದ್ಯ ಸೋತಿರುವ ಪಾಕಿಸ್ತಾನ ಮತ್ತು ಒಂದು ಟೈ ಮಾಡಿಕೊಂಡಿರುವ ದಕ್ಷಿಣ ಆಫ್ರಿಕಾ ತಂಡಗಳು ಒಂದು ಪಂದ್ಯ ಸೋತರೂ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಇದೆ. ಏಕೆಂದರೆ ಬಾಂಗ್ಲಾದೇಶ ತಂಡವು ಪರಿಣಾಮಕಾರಿ ಪ್ರದರ್ಶನ ನೀಡುತ್ತಿದೆ. ಭಾರತ ಬಾಂಗ್ಲಾದೇಶ ವಿರುದ್ಧ ಗೆದ್ದಲ್ಲಿ ಸೆಮಿಫೈನಲ್ ತಲುಪುವ ಸಾಧ್ಯತೆ ದಟ್ಟವಾಗುತ್ತದೆ.

ಕಳೆದ ವರ್ಷ ಗ್ರೂಪ್ ಒಂದರಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ನಾಲ್ಕು ಪಂದ್ಯ ಗೆದ್ದು ತಲಾ 08 ಅಂಕ ಗಳಿಸಿದ್ದರು. ಆದರೂ ರನ್‌ ರೇಟ್ ಆಧಾರದಲ್ಲಿ ಕಡಿಮೆಯಿದ್ದ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಿಂದ ಹೊರಬಿದ್ದರೆ ಉಳಿದ ತಂಡಗಳು ಸೆಮಿಫೈನಲ್‌ಗೇರಿದವು. ಅಂದರೆ ಸೂಪರ್ 12 ಹಂತದಲ್ಲಿ ಭಾರೀ ಪೈಪೋಟಿ ಇರುವುದರಿಂದ ಪ್ರತಿ ತಂಡಗಳು ಜಾಗರೂಕತೆಯಿಂದ ಕಣಕ್ಕಿಳಿಯುತ್ತಿವೆ. ಈ ಆಧಾರದಲ್ಲಿ ಭಾರತ ತಂಡ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಒತ್ತಡದಲ್ಲಿದೆ.

ಇದನ್ನೂ ಓದಿ: ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...