Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ಭಾರತ ತಂಡಕ್ಕೆ ಸೂಪರ್ 12 ಹಂತದ ಇನ್ನು ನಾಲ್ಕು ಪಂದ್ಯಗಳು ಬಾಕಿ ಇದ್ದು ಒಮ್ಮೆ ಮೈ ಮರೆತರೂ ಕಳೆದ ವರ್ಷದಂತೆ ಸೆಮಿಫೈನಲ್ ಪ್ರವೇಶಿಸದೆ ಹೊರಬೀಳುವ ಆತಂಕವಿದೆ.

- Advertisement -
- Advertisement -

ಬಹು ನಿರೀಕ್ಷಿತ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕ್ ಎದುರು ಕೊನೆಯ ಎಸೆತದಲ್ಲಿ ರೋಚಕ ಗೆಲುವು ಪಡೆದಿದೆ. ವಿರಾಟ್ ಕೊಹ್ಲಿಯ ಅದ್ಭುತ ಇನ್ನಿಂಗ್ಸ್ (53 ಎಸೆತಗಳಲ್ಲಿ 82 ರನ್)  ಮೂಲಕ ಕಳೆದ ವರ್ಷದ ಮೊದಲ ಪಂದ್ಯದ ಸೋಲಿನ ಕಹಿ ಮರೆತಿದೆ. ಅಲ್ಲದೆ ಎರಡನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ದವೂ 56 ರನ್ ಗಳ ಜಯ ಕಂಡಿದೆ. ಆದರೆ ಇಷ್ಟಕ್ಕೆ ಭಾರತ ನಿಟ್ಟುಸಿರು ಬಿಡುವ ಪರಿಸ್ಥಿತಿ ಇಲ್ಲ. ಭಾರತ ತಂಡಕ್ಕೆ ಸೂಪರ್ 12 ಹಂತದ ಇನ್ನು ಮೂರು ಪಂದ್ಯಗಳು ಬಾಕಿ ಇದ್ದು ಒಮ್ಮೆ ಮೈ ಮರೆತರೂ ಕಳೆದ ವರ್ಷದಂತೆ ಸೆಮಿಫೈನಲ್ ಪ್ರವೇಶಿಸದೆ ಹೊರಬೀಳುವ ಆತಂಕವಿದೆ.

ಕಳೆದ ವರ್ಷದ ಸೂಪರ್ 12 ಹಂತದಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಪಾಕ್ ಮತ್ತು ನ್ಯೂಜಿಲೆಂಡ್ ಎದುರು ಪರಾಭವಗೊಂಡಿದ್ದ ಭಾರತ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಗ್ರೂಪ್ ಎರಡರಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಕ್ರಮವಾಗಿ 5 ಮತ್ತು 4 ಗೆಲುವುಗಳೊಂದಿಗೆ ಸೆಮಿಫೈನಲ್ ತಲುಪಿದ್ದವು. ಈ ಬಾರಿ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದು ವಿಶ್ವಾಸದಲ್ಲಿರುವ ಭಾರತ ತಂಡವು ಉಳಿದ ಪಂದ್ಯಗಳತ್ತ ದೃಷ್ಟಿ ನೆಟ್ಟಿದೆ.

ಗ್ರೂಪ್ ಎರಡರಲ್ಲಿ 6 ತಂಡಗಳಿದ್ದು, ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳಷ್ಟೇ ಸೆಮಿಗೆ ಹೋಗಲು ಸಾಧ್ಯ. ಭಾರತ ಮುಂದಿನ ಎದುರಾಳಿಗಳಾದ ದಕ್ಷಿಣ ಆಫ್ರಿಕಾ, ಮತ್ತು ಬಾಂಗ್ಲಾದೇಶ ತಂಡಗಳು ಸಹ ಬಲಿಷ್ಟವಾಗಿ ಕಾಣಿಸುತ್ತಿವೆ. ಅಲ್ಲದೆ ಪಾಕ್ ತಂಡ ಉಳಿದ ಪಂದ್ಯಗಳಲ್ಲಿ ಕಮ್ ಬ್ಯಾಕ್ ಮಾಡುವ ಉದ್ದೇಶ ಹೊಂದಿದೆ. ಹಾಗಾಗಿ ಭಾರತ ತಂಡ ಸತತ ಗೆಲುವುಗಳೊಂದಿಗೆ ಸೆಮಿಫೈನಲ್ ತಲುಪುವ ಸಾಧ್ಯತೆಗಳು ಈ ಕೆಳಗಿನಂತಿವೆ.

ಇದನ್ನೂ ಓದಿ; ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಸಾಧ್ಯತೆ 1: ಭಾರತ ತಂಡವು ತನ್ನ ಮುಂದಿನ ಪಂದ್ಯಗಳನ್ನು ಕ್ರಮವಾಗಿ ದಕ್ಷಿಣ ಆಫ್ರಿಕಾ (ಅಕ್ಟೋಬರ್ 30), ಬಾಂಗ್ಲಾದೇಶ (ನವೆಂಬರ್ 2) ಮತ್ತು ಜಿಂಬಾಬ್ವೆ (ನವೆಂಬರ್ 6) ವಿರುದ್ದ ಸೆಣಸಲಿದೆ. ಈ ಮೂರು ಪಂದ್ಯಗಳನ್ನು ಗೆದ್ದಲ್ಲಿ ಅದು 10 ಪಾಯಿಂಟ್‌ಗಳೊಂದಿಗೆ ನಿರಾಂತಕವಾಗಿ ಸೆಮಿಫೈನಲ್ ತಲುಪಲಿದೆ.

ಸಾಧ್ಯತೆ 2: ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ನಡುವಿನ ಪಂದ್ಯ ಮಳೆಯ ಕಾರಣದಿಂದ ಸ್ಥಗಿತಗೊಂಡಿತು. ಹಾಗಾಗಿ ಎರಡೂ ತಂಡಕ್ಕೂ ತಲಾ ಒಂದೊಂದು ಅಂಕ ನೀಡಲಾಗಿದೆ. ಹಾಗಾಗಿ ಸೆಮಿಫೈನಲ್ ತಲುಪುವ ಪ್ರಬಲ ತಂಡಗಳಾದ ಪಾಕ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುವ ನವೆಂಬರ್ 3ರ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ. ಆ ಪಂದ್ಯದಲ್ಲಿ ಸೋತ ತಂಡ ಹೊರನಡೆಯುವ ಸಾಧ್ಯತೆಯಿರುತ್ತದೆ. ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದಲ್ಲಿ ಸೆಮಿಫೈನಲ್ ದಾರಿ ಸುಲಭವಾಗಲಿದೆ.

ಒಂದು ಪಂದ್ಯ ಸೋತಿರುವ ಪಾಕಿಸ್ತಾನ ಮತ್ತು ಒಂದು ಟೈ ಮಾಡಿಕೊಂಡಿರುವ ದಕ್ಷಿಣ ಆಫ್ರಿಕಾ ತಂಡಗಳು ಒಂದು ಪಂದ್ಯ ಸೋತರೂ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಇದೆ. ಏಕೆಂದರೆ ಬಾಂಗ್ಲಾದೇಶ ತಂಡವು ಪರಿಣಾಮಕಾರಿ ಪ್ರದರ್ಶನ ನೀಡುತ್ತಿದೆ. ಭಾರತ ಬಾಂಗ್ಲಾದೇಶ ವಿರುದ್ಧ ಗೆದ್ದಲ್ಲಿ ಸೆಮಿಫೈನಲ್ ತಲುಪುವ ಸಾಧ್ಯತೆ ದಟ್ಟವಾಗುತ್ತದೆ.

ಕಳೆದ ವರ್ಷ ಗ್ರೂಪ್ ಒಂದರಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ನಾಲ್ಕು ಪಂದ್ಯ ಗೆದ್ದು ತಲಾ 08 ಅಂಕ ಗಳಿಸಿದ್ದರು. ಆದರೂ ರನ್‌ ರೇಟ್ ಆಧಾರದಲ್ಲಿ ಕಡಿಮೆಯಿದ್ದ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಿಂದ ಹೊರಬಿದ್ದರೆ ಉಳಿದ ತಂಡಗಳು ಸೆಮಿಫೈನಲ್‌ಗೇರಿದವು. ಅಂದರೆ ಸೂಪರ್ 12 ಹಂತದಲ್ಲಿ ಭಾರೀ ಪೈಪೋಟಿ ಇರುವುದರಿಂದ ಪ್ರತಿ ತಂಡಗಳು ಜಾಗರೂಕತೆಯಿಂದ ಕಣಕ್ಕಿಳಿಯುತ್ತಿವೆ. ಈ ಆಧಾರದಲ್ಲಿ ಭಾರತ ತಂಡ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಒತ್ತಡದಲ್ಲಿದೆ.

ಇದನ್ನೂ ಓದಿ: ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....