Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ಭಾರತ ತಂಡಕ್ಕೆ ಸೂಪರ್ 12 ಹಂತದ ಇನ್ನು ನಾಲ್ಕು ಪಂದ್ಯಗಳು ಬಾಕಿ ಇದ್ದು ಒಮ್ಮೆ ಮೈ ಮರೆತರೂ ಕಳೆದ ವರ್ಷದಂತೆ ಸೆಮಿಫೈನಲ್ ಪ್ರವೇಶಿಸದೆ ಹೊರಬೀಳುವ ಆತಂಕವಿದೆ.

- Advertisement -
- Advertisement -

ಬಹು ನಿರೀಕ್ಷಿತ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕ್ ಎದುರು ಕೊನೆಯ ಎಸೆತದಲ್ಲಿ ರೋಚಕ ಗೆಲುವು ಪಡೆದಿದೆ. ವಿರಾಟ್ ಕೊಹ್ಲಿಯ ಅದ್ಭುತ ಇನ್ನಿಂಗ್ಸ್ (53 ಎಸೆತಗಳಲ್ಲಿ 82 ರನ್)  ಮೂಲಕ ಕಳೆದ ವರ್ಷದ ಮೊದಲ ಪಂದ್ಯದ ಸೋಲಿನ ಕಹಿ ಮರೆತಿದೆ. ಅಲ್ಲದೆ ಎರಡನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ದವೂ 56 ರನ್ ಗಳ ಜಯ ಕಂಡಿದೆ. ಆದರೆ ಇಷ್ಟಕ್ಕೆ ಭಾರತ ನಿಟ್ಟುಸಿರು ಬಿಡುವ ಪರಿಸ್ಥಿತಿ ಇಲ್ಲ. ಭಾರತ ತಂಡಕ್ಕೆ ಸೂಪರ್ 12 ಹಂತದ ಇನ್ನು ಮೂರು ಪಂದ್ಯಗಳು ಬಾಕಿ ಇದ್ದು ಒಮ್ಮೆ ಮೈ ಮರೆತರೂ ಕಳೆದ ವರ್ಷದಂತೆ ಸೆಮಿಫೈನಲ್ ಪ್ರವೇಶಿಸದೆ ಹೊರಬೀಳುವ ಆತಂಕವಿದೆ.

ಕಳೆದ ವರ್ಷದ ಸೂಪರ್ 12 ಹಂತದಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಪಾಕ್ ಮತ್ತು ನ್ಯೂಜಿಲೆಂಡ್ ಎದುರು ಪರಾಭವಗೊಂಡಿದ್ದ ಭಾರತ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಗ್ರೂಪ್ ಎರಡರಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಕ್ರಮವಾಗಿ 5 ಮತ್ತು 4 ಗೆಲುವುಗಳೊಂದಿಗೆ ಸೆಮಿಫೈನಲ್ ತಲುಪಿದ್ದವು. ಈ ಬಾರಿ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದು ವಿಶ್ವಾಸದಲ್ಲಿರುವ ಭಾರತ ತಂಡವು ಉಳಿದ ಪಂದ್ಯಗಳತ್ತ ದೃಷ್ಟಿ ನೆಟ್ಟಿದೆ.

ಗ್ರೂಪ್ ಎರಡರಲ್ಲಿ 6 ತಂಡಗಳಿದ್ದು, ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳಷ್ಟೇ ಸೆಮಿಗೆ ಹೋಗಲು ಸಾಧ್ಯ. ಭಾರತ ಮುಂದಿನ ಎದುರಾಳಿಗಳಾದ ದಕ್ಷಿಣ ಆಫ್ರಿಕಾ, ಮತ್ತು ಬಾಂಗ್ಲಾದೇಶ ತಂಡಗಳು ಸಹ ಬಲಿಷ್ಟವಾಗಿ ಕಾಣಿಸುತ್ತಿವೆ. ಅಲ್ಲದೆ ಪಾಕ್ ತಂಡ ಉಳಿದ ಪಂದ್ಯಗಳಲ್ಲಿ ಕಮ್ ಬ್ಯಾಕ್ ಮಾಡುವ ಉದ್ದೇಶ ಹೊಂದಿದೆ. ಹಾಗಾಗಿ ಭಾರತ ತಂಡ ಸತತ ಗೆಲುವುಗಳೊಂದಿಗೆ ಸೆಮಿಫೈನಲ್ ತಲುಪುವ ಸಾಧ್ಯತೆಗಳು ಈ ಕೆಳಗಿನಂತಿವೆ.

ಇದನ್ನೂ ಓದಿ; ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಸಾಧ್ಯತೆ 1: ಭಾರತ ತಂಡವು ತನ್ನ ಮುಂದಿನ ಪಂದ್ಯಗಳನ್ನು ಕ್ರಮವಾಗಿ ದಕ್ಷಿಣ ಆಫ್ರಿಕಾ (ಅಕ್ಟೋಬರ್ 30), ಬಾಂಗ್ಲಾದೇಶ (ನವೆಂಬರ್ 2) ಮತ್ತು ಜಿಂಬಾಬ್ವೆ (ನವೆಂಬರ್ 6) ವಿರುದ್ದ ಸೆಣಸಲಿದೆ. ಈ ಮೂರು ಪಂದ್ಯಗಳನ್ನು ಗೆದ್ದಲ್ಲಿ ಅದು 10 ಪಾಯಿಂಟ್‌ಗಳೊಂದಿಗೆ ನಿರಾಂತಕವಾಗಿ ಸೆಮಿಫೈನಲ್ ತಲುಪಲಿದೆ.

ಸಾಧ್ಯತೆ 2: ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ನಡುವಿನ ಪಂದ್ಯ ಮಳೆಯ ಕಾರಣದಿಂದ ಸ್ಥಗಿತಗೊಂಡಿತು. ಹಾಗಾಗಿ ಎರಡೂ ತಂಡಕ್ಕೂ ತಲಾ ಒಂದೊಂದು ಅಂಕ ನೀಡಲಾಗಿದೆ. ಹಾಗಾಗಿ ಸೆಮಿಫೈನಲ್ ತಲುಪುವ ಪ್ರಬಲ ತಂಡಗಳಾದ ಪಾಕ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುವ ನವೆಂಬರ್ 3ರ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ. ಆ ಪಂದ್ಯದಲ್ಲಿ ಸೋತ ತಂಡ ಹೊರನಡೆಯುವ ಸಾಧ್ಯತೆಯಿರುತ್ತದೆ. ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದಲ್ಲಿ ಸೆಮಿಫೈನಲ್ ದಾರಿ ಸುಲಭವಾಗಲಿದೆ.

ಒಂದು ಪಂದ್ಯ ಸೋತಿರುವ ಪಾಕಿಸ್ತಾನ ಮತ್ತು ಒಂದು ಟೈ ಮಾಡಿಕೊಂಡಿರುವ ದಕ್ಷಿಣ ಆಫ್ರಿಕಾ ತಂಡಗಳು ಒಂದು ಪಂದ್ಯ ಸೋತರೂ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಇದೆ. ಏಕೆಂದರೆ ಬಾಂಗ್ಲಾದೇಶ ತಂಡವು ಪರಿಣಾಮಕಾರಿ ಪ್ರದರ್ಶನ ನೀಡುತ್ತಿದೆ. ಭಾರತ ಬಾಂಗ್ಲಾದೇಶ ವಿರುದ್ಧ ಗೆದ್ದಲ್ಲಿ ಸೆಮಿಫೈನಲ್ ತಲುಪುವ ಸಾಧ್ಯತೆ ದಟ್ಟವಾಗುತ್ತದೆ.

ಕಳೆದ ವರ್ಷ ಗ್ರೂಪ್ ಒಂದರಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ನಾಲ್ಕು ಪಂದ್ಯ ಗೆದ್ದು ತಲಾ 08 ಅಂಕ ಗಳಿಸಿದ್ದರು. ಆದರೂ ರನ್‌ ರೇಟ್ ಆಧಾರದಲ್ಲಿ ಕಡಿಮೆಯಿದ್ದ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಿಂದ ಹೊರಬಿದ್ದರೆ ಉಳಿದ ತಂಡಗಳು ಸೆಮಿಫೈನಲ್‌ಗೇರಿದವು. ಅಂದರೆ ಸೂಪರ್ 12 ಹಂತದಲ್ಲಿ ಭಾರೀ ಪೈಪೋಟಿ ಇರುವುದರಿಂದ ಪ್ರತಿ ತಂಡಗಳು ಜಾಗರೂಕತೆಯಿಂದ ಕಣಕ್ಕಿಳಿಯುತ್ತಿವೆ. ಈ ಆಧಾರದಲ್ಲಿ ಭಾರತ ತಂಡ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಒತ್ತಡದಲ್ಲಿದೆ.

ಇದನ್ನೂ ಓದಿ: ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...