Homeಮುಖಪುಟಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

ಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

- Advertisement -
- Advertisement -

ಸೂರ್ಯಗ್ರಹಣವು ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮಂಗಳವಾರ ಸಂಭವಿಸಿದೆ. ಈಶಾನ್ಯ ಪ್ರದೇಶದ ಕೆಲವು ಭಾಗಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳು ಗ್ರಹಣಕ್ಕೆ ಸಾಕ್ಷಿಯಾದವು. ಈ ಬಾರಿಯ ಸೂರ್ಯಗ್ರಹಣವು ಭಾರತದ ಬಹುತೇಕ ಎಲ್ಲ ಭಾಗಗಳಲ್ಲೂ ಗೋಚರಿಸಿದ್ದು ವಿಶೇಷವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10% ದಷ್ಟು ಮಾತ್ರ ಸೂರ್ಯಗ್ರಹಣ ಗೋಚರಿಸಲಿದೆ ಎಂದು ತಜ್ಞರು ತಿಳಿಸಿದ್ದರು. ಅದೇ ರೀತಿ ಸಂಜೆ 5:12 ರಿಂದ ಪ್ರಾರಂಭವಾದ ಗ್ರಹಣ 5:55 ರವರೆಗೆ, ಸುಮಾರು 45 ನಿಮಿಷಗಳ ಕಾಲ ಗೋಚರಿಸಿದೆ. ಬೆಂಗಳೂರಿನಲ್ಲಿ ಸಂಜೆ 5:56 ಕ್ಕೆ ಸೂರ್ಯ ಅಸ್ತಮಿಸುವುದರಿಂದ ಗ್ರಹಣ ವೀಕ್ಷಣೆಗೆ ಸ್ವಲ್ಪ ಸಮಯವಷ್ಟೆ ಸಿಕ್ಕಿದ್ದು ಆಸಕ್ತರಿಗೆ ನಿರಾಸೆ ಕೂಡಾ ಮೂಡಿಸಿದೆ. 1995 ರಲ್ಲಿ ಸಂಭವಿಸಿದ ಸೂರ್ಯಗ್ರಹಣ ಕೂಡಾ ದೀಪಾವಳಿಯ ದಿನದಂದೆ ಗೋಚರಿಸಿತ್ತು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ, ಸೂರ್ಯಗ್ರಹಣದ ಹೆಸರಿನಲ್ಲಿ ಮೂಡನಂಬಿಕೆ ಬಿತ್ತುವುದನ್ನು ವಿರೋಧಿಸಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ವಿಜ್ಞಾನದ ಕಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ಕೂಡಾ ಜನಪರ ಸಂಘಟನೆಗಳು ಆಯೋಜಿಸಿದ್ದವು. ಈ ವೇಳೆ ಅಲ್ಲಿ ಸೇರಿದ್ದ ಜನರು ಆಹಾರವನ್ನು ಸೇವಿಸಿ ಮೂಡನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದರು.

ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಸುಮಾರು 55% ರಷ್ಟು ಸೂರ್ಯಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸಿದೆ. ಲೇಹ್‌ನಲ್ಲಿ 55%, ದೆಹಲಿಯಲ್ಲಿ 44%, ಮುಂಬೈನಲ್ಲಿ 25%, ಹೈದರಾಬಾದ್‌ನಲ್ಲಿ 19% ಮತ್ತು ಕಲ್ಕತ್ತಾದಲ್ಲಿ 4% ರಷ್ಟು ಗೋಚರಿಸಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣ ಗೋಚರಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ರಷ್ಯಾ ಮತ್ತು ಕಜಕಿಸ್ತಾನ್‌ನಲ್ಲಿ 80% ದಷ್ಟು ಗ್ರಹಣ ಗೋಚರಿಸಲಿದ್ದು, ಇದು ಗರಿಷ್ಠ ಪ್ರಮಾಣವಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದರು.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಗೋಚರಿಸಿದ ಭಾಗಶಃ ಸೂರ್ಯ ಗ್ರಹಣದ ಕೆಲವು ಝಲಕ್‌ಗಳು ಇಲ್ಲಿವೆ.

ಖ್ಯಾತ ಫೋಟೋಗ್ರಾಫರ್‌ ಮನೋಜ್ ಬೂಕನಕೆರೆ ಅವರು ಕ್ಲಿಕ್ ಮಾಡಿರುವ ಮೈಸೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಶಿಕ್ಷಕರಾದ ಉದಯ್ ಅವರು ಕ್ಲಿಕ್ ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಪತ್ರಕರ್ತ ಎಸ್‌. ಶ್ಯಾಮ್ ಪ್ರಸಾದ್ ಅವರು ಬೆಂಗಳೂರಿನಲ್ಲಿ ರೆಕಾರ್ಡ್ ಮಾಡಿರುವ ಸೂರ್ಯಗ್ರಹಣದ ದೃಶ್ಯ.

ಮಂಗಳೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ ಹೀಗಿತ್ತು.

ತಮಿಳುನಾಡಿನ ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಆಂಧ್ರಪ್ರದೇಶದ ವಿಶಾಕಪಟ್ಟಣಂ

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಕಂಡುಬಂದ ಸೂರ್ಯಗ್ರಹಣ

ಜಮ್ಮುಕಾಶ್ಮೀರದ ಲಡಾಖ್‌ನಲ್ಲಿ ಗೋಚರಿಸಿದ ಸೂರ್ಯಗ್ರಹಣ

ಬೆಂಗಳೂರು

ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಬಿಹಾರದಲ್ಲಿ ಕಂಡ ಸೂರ್ಯಗ್ರಹಣ

ಮುಂಬೈನಲ್ಲಿ ಗೋಚರಿಸಿದ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...