Homeಮುಖಪುಟಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

ಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

- Advertisement -
- Advertisement -

ಸೂರ್ಯಗ್ರಹಣವು ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮಂಗಳವಾರ ಸಂಭವಿಸಿದೆ. ಈಶಾನ್ಯ ಪ್ರದೇಶದ ಕೆಲವು ಭಾಗಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳು ಗ್ರಹಣಕ್ಕೆ ಸಾಕ್ಷಿಯಾದವು. ಈ ಬಾರಿಯ ಸೂರ್ಯಗ್ರಹಣವು ಭಾರತದ ಬಹುತೇಕ ಎಲ್ಲ ಭಾಗಗಳಲ್ಲೂ ಗೋಚರಿಸಿದ್ದು ವಿಶೇಷವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10% ದಷ್ಟು ಮಾತ್ರ ಸೂರ್ಯಗ್ರಹಣ ಗೋಚರಿಸಲಿದೆ ಎಂದು ತಜ್ಞರು ತಿಳಿಸಿದ್ದರು. ಅದೇ ರೀತಿ ಸಂಜೆ 5:12 ರಿಂದ ಪ್ರಾರಂಭವಾದ ಗ್ರಹಣ 5:55 ರವರೆಗೆ, ಸುಮಾರು 45 ನಿಮಿಷಗಳ ಕಾಲ ಗೋಚರಿಸಿದೆ. ಬೆಂಗಳೂರಿನಲ್ಲಿ ಸಂಜೆ 5:56 ಕ್ಕೆ ಸೂರ್ಯ ಅಸ್ತಮಿಸುವುದರಿಂದ ಗ್ರಹಣ ವೀಕ್ಷಣೆಗೆ ಸ್ವಲ್ಪ ಸಮಯವಷ್ಟೆ ಸಿಕ್ಕಿದ್ದು ಆಸಕ್ತರಿಗೆ ನಿರಾಸೆ ಕೂಡಾ ಮೂಡಿಸಿದೆ. 1995 ರಲ್ಲಿ ಸಂಭವಿಸಿದ ಸೂರ್ಯಗ್ರಹಣ ಕೂಡಾ ದೀಪಾವಳಿಯ ದಿನದಂದೆ ಗೋಚರಿಸಿತ್ತು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ, ಸೂರ್ಯಗ್ರಹಣದ ಹೆಸರಿನಲ್ಲಿ ಮೂಡನಂಬಿಕೆ ಬಿತ್ತುವುದನ್ನು ವಿರೋಧಿಸಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ವಿಜ್ಞಾನದ ಕಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ಕೂಡಾ ಜನಪರ ಸಂಘಟನೆಗಳು ಆಯೋಜಿಸಿದ್ದವು. ಈ ವೇಳೆ ಅಲ್ಲಿ ಸೇರಿದ್ದ ಜನರು ಆಹಾರವನ್ನು ಸೇವಿಸಿ ಮೂಡನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದರು.

ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಸುಮಾರು 55% ರಷ್ಟು ಸೂರ್ಯಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸಿದೆ. ಲೇಹ್‌ನಲ್ಲಿ 55%, ದೆಹಲಿಯಲ್ಲಿ 44%, ಮುಂಬೈನಲ್ಲಿ 25%, ಹೈದರಾಬಾದ್‌ನಲ್ಲಿ 19% ಮತ್ತು ಕಲ್ಕತ್ತಾದಲ್ಲಿ 4% ರಷ್ಟು ಗೋಚರಿಸಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣ ಗೋಚರಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ರಷ್ಯಾ ಮತ್ತು ಕಜಕಿಸ್ತಾನ್‌ನಲ್ಲಿ 80% ದಷ್ಟು ಗ್ರಹಣ ಗೋಚರಿಸಲಿದ್ದು, ಇದು ಗರಿಷ್ಠ ಪ್ರಮಾಣವಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದರು.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಗೋಚರಿಸಿದ ಭಾಗಶಃ ಸೂರ್ಯ ಗ್ರಹಣದ ಕೆಲವು ಝಲಕ್‌ಗಳು ಇಲ್ಲಿವೆ.

ಖ್ಯಾತ ಫೋಟೋಗ್ರಾಫರ್‌ ಮನೋಜ್ ಬೂಕನಕೆರೆ ಅವರು ಕ್ಲಿಕ್ ಮಾಡಿರುವ ಮೈಸೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಶಿಕ್ಷಕರಾದ ಉದಯ್ ಅವರು ಕ್ಲಿಕ್ ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಪತ್ರಕರ್ತ ಎಸ್‌. ಶ್ಯಾಮ್ ಪ್ರಸಾದ್ ಅವರು ಬೆಂಗಳೂರಿನಲ್ಲಿ ರೆಕಾರ್ಡ್ ಮಾಡಿರುವ ಸೂರ್ಯಗ್ರಹಣದ ದೃಶ್ಯ.

ಮಂಗಳೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ ಹೀಗಿತ್ತು.

ತಮಿಳುನಾಡಿನ ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಆಂಧ್ರಪ್ರದೇಶದ ವಿಶಾಕಪಟ್ಟಣಂ

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಕಂಡುಬಂದ ಸೂರ್ಯಗ್ರಹಣ

ಜಮ್ಮುಕಾಶ್ಮೀರದ ಲಡಾಖ್‌ನಲ್ಲಿ ಗೋಚರಿಸಿದ ಸೂರ್ಯಗ್ರಹಣ

ಬೆಂಗಳೂರು

ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಬಿಹಾರದಲ್ಲಿ ಕಂಡ ಸೂರ್ಯಗ್ರಹಣ

ಮುಂಬೈನಲ್ಲಿ ಗೋಚರಿಸಿದ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...