Homeಮುಖಪುಟಅಸ್ಸಾಂ: ಮಿಯಾ ಮುಸ್ಲಿಂ ಸಂಸ್ಕೃತಿ ಬಿಂಬಿಸುವ ಮ್ಯೂಸಿಯಂಗೆ ಬೀಗ ಜಡಿದು ಯುಎಪಿಎ ಪ್ರಕರಣ ದಾಖಲಿಸಿದ ಪೊಲೀಸರು

ಅಸ್ಸಾಂ: ಮಿಯಾ ಮುಸ್ಲಿಂ ಸಂಸ್ಕೃತಿ ಬಿಂಬಿಸುವ ಮ್ಯೂಸಿಯಂಗೆ ಬೀಗ ಜಡಿದು ಯುಎಪಿಎ ಪ್ರಕರಣ ದಾಖಲಿಸಿದ ಪೊಲೀಸರು

- Advertisement -
- Advertisement -

ಅಸ್ಸಾಂನ ಗೋಲ್‌ಪಾರಾ ಜಿಲ್ಲೆಯ ಅಧಿಕಾರಿಗಳು ಮಂಗಳವಾರ ಮಿಯಾ ಮುಸ್ಲಿಂ (ಬಂಗಾಳಿ ಮೂಲದ ಮುಸ್ಲಿಂ) ಸಮುದಾಯಕ್ಕೆ ಸೇರಿದ ವಸ್ತುಸಂಗ್ರಹಾಲಯವನ್ನು ಸೀಲ್ ಮಾಡಿದ್ದು, ಆವರಣವನ್ನು ತಪ್ಪಾಗಿ ಬಳಸಿದ ಆರೋಪದ ಮೇಲೆ ಸಮುದಾಯದ ಇಬ್ಬರು ನಾಯಕರನ್ನು ಬಂಧಿಸಿದ್ದಾರೆ.

ಮ್ಯೂಸಿಯಂ ಸ್ಥಾಪಿಸಿದ ವ್ಯಕ್ತಿ ಸೇರಿದಂತೆ ಸಮುದಾಯದ ಇಬ್ಬರು ನಾಯಕರನ್ನು ಮಂಗಳವಾರ ಸಂಜೆ ಬಂಧಿಸಲಾಯಿತು. ಕಾನೂನುಬಾಹಿರ ಚಟುವಟಿಕೆಗಳು-ತಡೆಗಟ್ಟುವಿಕೆ-ಕಾಯ್ದೆ(ಯುಎಪಿಎ) ಮತ್ತು ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳು ಮತ್ತು ಒಕ್ಕೂಟ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶದಿಂದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಯೋತ್ಪಾದಕ ಸಂಘಟನೆಗಳಾದ ಅನ್ಸರುಲ್ಲಾ ಬಾಂಗ್ಲಾ ಟೀಂ ಮತ್ತು ಅಲ್-ಖೈದಾದ ಚಟುವಟಿಕೆಗಳೊಂದಿಗೆ ಅವರ ಸಂಪರ್ಕದ ಬಗ್ಗೆ ಇಬ್ಬರು ನಾಯಕರನ್ನು ಪ್ರಶ್ನಿಸಲಾಗುವುದು ಎಂದು ಅಸ್ಸಾಂ ಪೊಲೀಸರ ವಿಶೇಷ ಮಹಾನಿರ್ದೇಶಕ ಜಿಪಿ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM’ ಚರ್ಚೆ ಮುನ್ನೆಲೆಗೆ

ಅಸ್ಸಾಂ ಪೊಲೀಸರು ಎರಡು ಭಯೋತ್ಪಾದಕ ಗುಂಪುಗಳ ಬಗ್ಗೆ ತನಿಖೆಯ ಭಾಗವಾಗಿ ಹಲವಾರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಮೂರು ಮದರಸಾಗಳನ್ನು ನೆಲಸಮಗೊಳಿಸಿದ್ದಾರೆ.

ಗೋಲ್ಪರಾದ ಲಖಿಪೂರ್ ಪ್ರದೇಶದ ಡಪ್ಕರ್ಭಿತಾದಲ್ಲಿರುವ ಮಿಯಾ ವಸ್ತುಸಂಗ್ರಹಾಲಯವನ್ನು ಸ್ಥಗಿತಗೊಳಿಸಬೇಕೆಂದು ಅಸ್ಸಾಂನ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ ಎಂದು ಹಿಂದೂ ವರದಿ ಮಾಡಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

ಮ್ಯೂಸಿಯಂ ಅನ್ನು ಮಿಯಾ ಅಸ್ಸಾಂ ಮಿಯಾ ಪರಿಷತ್‌ನ ಅಧ್ಯಕ್ಷರಾದ ಮಹರ್ ಅಲಿ ಅವರು ಸ್ಥಾಪಿಸಿದ್ದರು. ಇದನ್ನು ಅಕ್ಟೋಬರ್ 23 ರಂದು ಉದ್ಘಾಟಿಸಲಾಗಿತ್ತು ಎಂದು ಪಿಟಿಐ ವರದಿ ಮಾಡಿದೆ. ಮ್ಯೂಸಿಯಂ ಮಿಯಾ ಸಮುದಾಯದ ಪ್ರಾಚೀನ ವಸ್ತುಗಳನ್ನು ಒಳಗೊಂಡಿತ್ತು. ಬಂಗಾಳ ಪ್ರಾಂತ್ಯದ ಈ ಸಮುದಾಯವು 1890 ರ ದಶಕದ ಉತ್ತರಾರ್ಧದಲ್ಲಿ ಅಸ್ಸಾಂಗೆ ವಲಸೆ ಬಂದಿತ್ತು.

ಅಕ್ಟೋಬರ್ 24 ರ ದಿನಾಂಕದ ನೋಟಿಸ್‌ನಲ್ಲಿ, ಗೋಲ್‌ಪಾರಾದ ಜಿಲ್ಲಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಕೇಂದ್ರ ಸರ್ಕಾರದ ವಸತಿ ಯೋಜನೆಯಾದ ಪ್ರಧಾನ ಮಂತ್ರಿ ಅವಾಸ್ ಯೋಜನೆ ಭಾಗವಾಗಿ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಿದ ಮನೆಯನ್ನು ಹಸ್ತಾಂತರಿಸಲಾಯಿತು ಎಂದು ಹೇಳಿದೆ.

ಆದರೆ, ವಸ್ತುಸಂಗ್ರಹಾಲಯ ಸ್ಥಾಪಿಸುವುದು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉದ್ದೇಶ ಮತ್ತು ಮಾರ್ಗಸೂಚಿಗಳ ಅಡಿಯಲ್ಲಿ ಬರುವುದಿಲ್ಲ ಎಂದು ಜಿಲ್ಲಾ ಆಡಳಿತ ಹೇಳಿದೆ. ಜಿಲ್ಲಾಡಳಿತದ ನೋಟಿಸ್‌ಗೆ ತನ್ನ ಪ್ರತಿಕ್ರಿಯೆಯನ್ನು ಸ್ಥಳೀಯ ಬ್ಲಾಕ್ ಅಭಿವೃದ್ಧಿ ಅಧಿಕಾರಿಗೆ ತಕ್ಷಣ ಸಲ್ಲಿಸುವಂತೆ ಮ್ಯೂಸಿಯಂ ನಿರ್ವಹಣೆ ಮಾಡುವವರನ್ನು ಕೇಳಿದೆ.

ಇದನ್ನೂ ಓದಿ: ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ಇದರ ನಂತರ ಮಂಗಳವಾರ, ನಲ್ಬಾರಿ ಜಿಲ್ಲೆಯ ಘೋಗ್ರಾಪರ್ ಪೊಲೀಸ್ ಠಾಣೆಯಲ್ಲಿ ಕಳೆದ ವಾರ ಪ್ರಕರಣ ದಾಖಲಾಗಿದ್ದು, ಇದರ ಪ್ರಕಾರ ಮಹರ್‌‌‌ ಅಲಿ ಮತ್ತು ಅಬ್ದುಲ್ ಬ್ಯಾಟೆನ್ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಳೆದ ವಾರ ದಾಖಲಾದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಸ್ಕ್ರಾಲ್.ಇನ್‌ ವರದಿ ಮಾಡಿದೆ.

ಈ ಮಧ್ಯೆ, ಮಹರ್‌‌ ಅಲಿ ತನ್ನ ಇಬ್ಬರು ಸಣ್ಣ ಗಂಡುಮಕ್ಕಳೊಂದಿಗೆ, ವಸ್ತುಸಂಗ್ರಹಾಲಯದ ಹೊರಗೆ ಧರಣಿ ಪ್ರತಿಭಟನೆ ನಡೆಸಿ, ಮ್ಯೂಸಿಯಂ ಅನ್ನು ಮತ್ತೆ ತೆರೆಯಬೇಕೆಂದು ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಮಧ್ಯಪ್ರದೇಶ | ಧಾರ್ಮಿಕ ಗುರುತಿನ ಆಧಾರದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಗುಂಪು ಹಲ್ಲೆ: ಆರೋಪ

“ಸಮುದಾಯವು ತನ್ನನ್ನು ತಾನು ಗುರುತಿಸಿಕೊಳ್ಳುವ ಸಲುವಾಗಿ ನಾವು ವಸ್ತುಗಳನ್ನು ಪ್ರದರ್ಶಿಸುತ್ತಿದ್ದೇವೆ. ಈ ಮೂಲಕ ಇತರ ಸಮುದಾಯಗಳ ಜನರು ಮಿಯಾ ಸಮುದಾಯವು ಅವರಿಗಿಂತ ಭಿನ್ನವಾಗಿಲ್ಲ ಎಂದು ಅರಿತುಕೊಳ್ಳಬಹುದು” ಎಂದು ಮಹರ್‌‌ ಅಲಿ ಹೇಳಿದರು.

ಈ ಬಗ್ಗೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ, ಮ್ಯೂಸಿಯಂ ಸ್ಥಾಪಿಸುವ ಉದ್ದೇಶವನ್ನು ಪ್ರಶ್ನಿಸಿದ್ದಾರೆ. “ಮ್ಯೂಸಿಯಂ ಅಲ್ಲಿನ ಕಲಾಕೃತಿಗಳು ಸಾಮಾನ್ಯವಾಗಿ ಅಸ್ಸಾಮೀ ಸಂಸ್ಕೃತಿಯನ್ನು ಪ್ರತಿನಿಧಿಸುತ್ತವೆ. ಅದರಲ್ಲಿ ಮಿಯಾ ಸಮುದಾಯಕ್ಕೆ ಸೇರಿದರುವ ನಿರ್ದಿಷ್ಟವಾದ ವಸ್ತುಗಳು ಏನೂ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

“ನಂಗೋಲ್ [ನೇಗಿಲು] ಅನ್ನು ಮಿಯಾ ಸಮುದಾಯದ ಜನರು ಮಾತ್ರ ಬಳಸುತ್ತಾರೆ ಎಂಬುದನ್ನು ಮತ್ತು ಇತರರು ಬಳಸುವುದಿಲ್ಲ ಎಂಬುವುದು ಅವರು ಸರ್ಕಾರಕ್ಕೆ ಸಾಬೀತುಪಡಿಸಬೇಕು … ಇಲ್ಲದಿದ್ದರೆ ಪ್ರಕರಣವನ್ನು ನೋಂದಾಯಿಸಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಪೂರ್ವ ಅಸ್ಸಾಂನ ಡಿಬ್ರುಗರ ಕ್ಷೇತ್ರದ ಬಿಜೆಪಿ ಶಾಸಕ ಪ್ರಸಾಂ ಫುಕಾನ್, “ವಸ್ತುಸಂಗ್ರಹಾಲಯವನ್ನು ನೆಲಸಮಗೊಳಿಸಬೇಕು” ಎಂದು ಈ ಹಿಂದೆ ಹೇಳಿದ್ದಾರೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ.

ಮಾಜಿ ಬಿಜೆಪಿ ಶಾಸಕ ಶಿಲಾದಿತ್ಯ ದೇವ್ ವಸ್ತುಸಂಗ್ರಹಾಲಯವನ್ನು ತಕ್ಷಣವೇ ಮುಚ್ಚಬೇಕೆಂದು ಒತ್ತಾಯಿಸಿದ್ದು, ಈ ಮೂಲಕ ಅಸ್ಸಾಂ ಅನ್ನು “ಬಾಂಗ್ಲಾದೇಶದ ಮುಸ್ಲಿಮರಿಂದ” ಉಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ವಸ್ತುಸಂಗ್ರಹಾಲಯದ ಬಗ್ಗೆ ಕಾಂಗ್ರೆಸ್ ಶಾಸಕ ಶೆರ್ಮನ್ ಅಲಿ ಅಹ್ಮದ್ ಅವರು 2020 ರಲ್ಲಿ ಪ್ರಸ್ತಾಪಿಸಿದ್ದರು. ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುವ ಗುವಾಹತಿಯ ಕೇಂದ್ರವಾದ ಶ್ರೀಮಂತಾ ಶಂಕರ್‌ದೇವಾ ಕಲಾಕ್ಷತ್ರದಲ್ಲಿ ಇದನ್ನು ಸ್ಥಾಪಿಸುವಂತೆ ಅವರು ರಾಜ್ಯ ಸರ್ಕಾರವನ್ನು ಕೋರಿದ್ದರು.

ವಸ್ತುಸಂಗ್ರಹಾಲಯವು ಅಸ್ಸಾಂನ ಚಾರ್-ಚಾಪೊರಿಸ್ (ನದಿ ದ್ವೀಪಗಳು) ನಲ್ಲಿ ವಾಸಿಸುವ ಸಮುದಾಯಗಳ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.

ಆ ಸಮಯದಲ್ಲಿ ರಾಜ್ಯದ ಆರೋಗ್ಯ ಮತ್ತು ಶಿಕ್ಷಣ ಸಚಿವರಾಗಿದ್ದ ಹಿಮಾಂತ ಶರ್ಮಾ ಅವರು, “ಸಂಸ್ಕೃತಿಯನ್ನು ‘ವಿರೂಪ’ಗೊಳಿಸುವ ಇಂತಹ ಪ್ರಯತ್ನಗಳಿಗೆ ಅನುಮತಿ ನೀಡುವುದಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

“ನನ್ನ ತಿಳುವಳಿಕೆಯಲ್ಲಿ, ಹೆಚ್ಚಿನ ಜನರು ಬಾಂಗ್ಲಾದೇಶದಿಂದ ವಲಸೆ ಬಂದಿದ್ದರಿಂದ ಅಸ್ಸಾಂನ ಚಾರ್ ಆಂಕಲ್‌ನಲ್ಲಿ ಪ್ರತ್ಯೇಕ ಗುರುತಿನ ಸಂಸ್ಕೃತಿ ಇಲ್ಲ. ನಿಸ್ಸಂಶಯವಾಗಿ ಶ್ರಿಮಂತಾ ಶಂಕರ್‌ದೇವ ಕಲಾಕ್ಷೇತ್ರ ಅಸ್ಸಾಮಿ ಸಂಸ್ಕೃತಿಯ ಆಗರವಾಗಿದೆ, ಅಲ್ಲಿ ನಾವು ಯಾವುದೇ ಅಸ್ಪಷ್ಟತೆಯನ್ನು ಅನುಮತಿಸುವುದಿಲ್ಲ” ಎಂದು ಹಿಮಂತ ಶರ್ಮಾ 2020 ರಲ್ಲಿ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...