Homeದಲಿತ್ ಫೈಲ್ಸ್ಮಧ್ಯಪ್ರದೇಶ: ಸವರ್ಣೀಯ ಮಹಿಳೆಯನ್ನು ದಿಟ್ಟಿಸಿದ ಆರೋಪದ ಮೇಲೆ ಗುಂಡು ಹಾರಿಸಿ ದಲಿತ ಯುವಕನ ಕುಟುಂಬದ ಮೂವರ...

ಮಧ್ಯಪ್ರದೇಶ: ಸವರ್ಣೀಯ ಮಹಿಳೆಯನ್ನು ದಿಟ್ಟಿಸಿದ ಆರೋಪದ ಮೇಲೆ ಗುಂಡು ಹಾರಿಸಿ ದಲಿತ ಯುವಕನ ಕುಟುಂಬದ ಮೂವರ ಹತ್ಯೆ

- Advertisement -
- Advertisement -

ಸವರ್ಣೀಯ ಮಹಿಳೆಯನ್ನು ದಿಟ್ಟಿಸಿದ ಎಂಬ ಕ್ಷುಲ್ಲಕ ಆರೋಪದ ಮೇಲೆ ಗುಂಡು ಹಾರಿಸಿ ದಲಿತ ಯುವಕನ ಕುಟುಂಬದ ಮೂವರು ಸದಸ್ಯರನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ದೇವರಾನ್ ಗ್ರಾಮದಲ್ಲಿ ಜರುಗಿದೆ.

ಮನಾಕ್ ಅಹಿರ್‌ವಾರ್ ಎಂಬ ದಲಿತ ಯುವಕ ತಮ್ಮ ನೆರಮನೆಯ ಸವರ್ಣೀಯ ಜಗದೀಶ್ ಪಾಟೀಲ್‌ ಎಂಬಾತನ ಪತ್ನಿಯನ್ನು ದಿಟ್ಟಿಸಿ ನೋಡಿದ ಎಂದು ಆರೋಪಿಸಿ ಸೋಮವಾರ ಸಂಜೆ ಎರಡೂ ಕುಟುಂಬದ ನಡುವೆ ಜಗಳ ನಡೆದಿತ್ತು. ಗ್ರಾಮಸ್ಥರು ಬಂದು ಎರಡೂ ಕುಟುಂಬಗಳನ್ನು ಸಮಾಧಾನಪಡಿಸಿದ್ದರು ಎನ್ನಲಾಗಿದೆ.

ಆದರೆ ಮಂಗಳವಾರ ಬೆಳಿಗ್ಗೆ ಜಗದೀಶ್ ಪಾಟೀಲ್ ಮತ್ತು ಇತರ ಐವರು ಬಂದೂಕುಗಳ ಸಹಿತ ಮನಾಕ್ ಅಹಿರ್‌ವಾರ್ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದಾಗ ಮನಾಕ್ ಅಹಿರ್‌ವಾರ್, ಆತನ ತಮ್ಮ ಮಹೇಶ್ ಅಹಿರ್‌ವಾರ್ ಮತ್ತು ಅವರ ತಂದೆ-ತಾಯಿಗಳ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡೇಟಿನಿಂದ ಮನಾಕ್ ಅಹಿರ್‌ವಾರ್ ಮತ್ತು ಅವರ ತಂದೆ – ತಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸಹೋದರ ಮಹೇಶ್ ಅಹಿರ್‌ವಾರ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಹೇಶ್ ಅಹಿರ್‌ವಾರ್ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ, ಕೊಲೆಯ ಯತ್ನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಲಾಗಿದೆ. ಜಗದೀಶ್ ಪಟೇಲ್‌ನನ್ನು ಬಂಧಿಸಲಾಗಿದೆ ಮತ್ತು ನಾಪತ್ತೆಯಾಗಿರುವ ಇನ್ನೂ ಐವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ಡಿಆರ್ ತೆನಿವಾರ್ ಹೇಳಿದ್ದಾರೆ.

ದಲಿತರ ಹತ್ಯೆಯನ್ನು ವಿರೋಧಿಸಿ ದಾಮೋಹ್‌ನಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ. ಮಧ್ಯಪ್ರದೇಶ ರಾಜ್ಯದಲ್ಲಿ ದಲಿತರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಹೋರಾಟಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

ದಾಮೋಹ್ ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಅದೇ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಈ ಘಟನೆಯನ್ನು ಕರಾಳ ಎಂದು ಕರೆದಿದ್ದಾರೆ. ಅಲ್ಲದೆ “ರಾಜ್ಯದಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ನಡೆದ ದೌರ್ಜನ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ” ಎಂದು ಆರೋಪಿಸಿದ್ದಾರೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...