Homeರಾಷ್ಟ್ರೀಯತೆಲಂಗಾಣ: ಸಾಲ ನೀಡುವ ಆ್ಯಪ್ ಏಜೆಂಟ್‌‌ ಕಿರುಕುಳ; 4 ಸಾವಿರ ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

ತೆಲಂಗಾಣ: ಸಾಲ ನೀಡುವ ಆ್ಯಪ್ ಏಜೆಂಟ್‌‌ ಕಿರುಕುಳ; 4 ಸಾವಿರ ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಸಾಲ ವಾಪಸಾತಿ ಏಜೆಂಟರ ಕಿರುಕುಳದಿಂದಾಗಿ ತೆಲಂಗಾಣದ ವನಪಾರ್ಥಿಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ದಾಸರಿ ಶೇಖರ್ ಎಂದು ಗುರುತಿಸಲಾಗಿದ್ದು, ಕಳೆದ ತಿಂಗಳು ಅವರು ತಮ್ಮ ಫೋನಿನಲ್ಲಿ ಸಾಲ ನೀಡುವ ಅಪ್ಲಿಕೇಶನ್‌ನಿಂದ ಎರಡು ಕಂತಿನಂತೆ 4,000 ರೂ.ಗಳನ್ನು ಪಡೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ನಂತರ ಅಪ್ಲಿಕೇಶನ್‌ನ ಸಾಲ ವಾಪಾಸು ಪಡೆಯು ರಿಕವರಿ ಏಜೆಂಟರು ಶೇಖರ್‌ ಅವರು ಸಾಲ ಕಟ್ಟಿಲ್ಲ ಎಂದು ಆರೋಪಿಸಿ ಅವರ ಸಂಬಂಧಿಕರಿಗೆ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದಾರೆ. ಇದರ ನಂತರ ಅವರು ಶೇಖರ್‌ ಅವರ ಮೊಬೈಲ್‌ಗೆ ನಗ್ನ ಚಿತ್ರವನ್ನು ಕಳುಹಿಸಿದ್ದು, ಅದನ್ನು ಅವರ ಎಲ್ಲ ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಬೆದರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾನಸಿಕ ಒತ್ತಡದಿಂದ ಭಾನುವಾರ ರಾತ್ರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶೇಖರ್ ಅವರ ಹೆಂಡತಿಯಿಂದ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಸಾಲ ನೀಡುವ ಅಪ್ಲಿಕೇಷನ್‌ನ ಸುಳಿಯಲ್ಲಿ ಸಿಕ್ಕಿ ಹಲವರು ಪ್ರಾಣ ತೆತ್ತಿರುವ ಸರಣಿ ಘಟನೆಗಳು ನಡೆಯುತ್ತಿದ್ದು, ಶೇಖರ್‌ ಅವರ ಸಾವು ಇದಕ್ಕೆ ಹೊಸ ಸೇರ್ಪಡೆಯಾಗಿದೆ. ಕೊರೊನಾ ಸಾಂ‌ಕ್ರಮಿಕದ ವೇಳೆ ತ್ವರಿತ ಮತ್ತು ಸುಲಭವಾಗಿ ಸಾಲ ನೀಡುವುದಾಗಿ ಹೇಳಿ ಜನರಿಗೆ ಆಮಿಷವೊಡ್ಡುವ ಸಾಲ ನೀಡುವ ಅಪ್ಲಿಕೇಶನ್‌ಗಳಲ್ಲಿ ಏರಿಕೆ ಕಂಡುಬಂದಿದೆ.

ಈ ಅಪ್ಲಿಕೇಷನ್‌‌ಗಳು ನೀಡುವ ಸಾಲಗಳು ಸಾಮಾನ್ಯವಾಗಿ ಹೆಚ್ಚಿನ ಬಡ್ಡಿದರಗಳು ಮತ್ತು ಹಲವು ಶುಲ್ಕವನ್ನು ಒಳಗೊಂಡಿರುತ್ತವೆ. ಜೊತಗೆ ಸಾಲ ವಾಪಾಸಾತಿ ಏಜೆಂಟರು ಸಾಲಗಾರರ ಮೊಬೈಲ್‌ನಲ್ಲಿದ್ದ ಎಲ್ಲಾ ನಂಬರ್‌ಗಳನ್ನು ಕೂಡಾ ಪಡೆದು, ಅವರ ಸಾಲಗಾರರ ಸಂಪರ್ಕದಲ್ಲಿರುವ ಜನರಿಗೆ ಪೋನ್‌ ಮಾಡುವುದು ಸೇರಿದಂತೆ ವಿವಿಧ ರೀತಿಯ ಕಿರುಕುಳಗಳನ್ನು ನೀಡುತ್ತಾರೆ. ಇಷ್ಟೆ ಅಲ್ಲದೆ, ಸಾಲ ವಾಪಾಸಾತಿ ಏಜೆಂಟರು ಸಾಲ ಪಡೆದವರ ಚಿತ್ರಗಳನ್ನು ಪಡೆದು ಅದನ್ನು ನಗ್ನ ಚಿತ್ರಗಳೊಂದಿಗೆ ಎಡಿಟ್‌ ಮಾಡಿ ಅವರ ಕುಟುಂಬ ಸದಸ್ಯರು ಮತ್ತು ಸಂಪರ್ಕದಲ್ಲಿ ಇರುವ ಇತರರೊಂದಿಗೆ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ ಅನೇಕ ನಿದರ್ಶನಗಳಿವೆ.

ಜುಲೈನಲ್ಲಿ ಹೈದರಾಬಾದ್‌ನ ವ್ಯಕ್ತಿಯೊಬ್ಬರು ಸಾಲದ ಅಪ್ಲಿಕೇಶನ್ ಏಜೆಂಟರಿಂದ ಕಿರುಕುಳಕ್ಕೊಳಗಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದರು. ಸೆಪ್ಟೆಂಬರ್‌ನಲ್ಲಿ ಸಾಲ ಅಪ್ಲಿಕೇಶನ್ ಏಜೆಂಟರಿಂದ ಕಿರುಕುಳದಿಂದಾಗಿ ಆಂಧ್ರಪ್ರದೇಶದ ರಾಜಮಂಡ್ರಿಯ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ದುಷ್ಕರ್ಮಿಗಳು ದಂಪತಿಗಳ ಮಾರ್ಫೆಡ್ ವೀಡಿಯೊಗಳು ಮತ್ತು ಫೋಟೋಗಳನ್ನು ವೈರಲ್‌ ಮಾಡುವುದಾಗಿ ಬೆದರಿಸಿದ್ದರು.

ಇದನ್ನೂ ಓದಿ: ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ


ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...