Homeಮುಖಪುಟಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

ಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

- Advertisement -
- Advertisement -

ಉದಯೋನ್ಮುಖ ನಟ ಡಾಲಿ ಧನಂಜಯ್ ನಿರ್ಮಿಸಿ ಅಭಿನಯಿಸಿರುವ ಹೆಡ್ ಬುಷ್ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿಯೂ ಕೂಡ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ ಎಂಬ ವರದಿಗಳಿವೆ. ಈ ಬೆನ್ನಲ್ಲೆ ಚಿತ್ರದಲ್ಲಿ ವೀರಗಾಸೆ ಕಲಾವಿದರ ಕಲಾವಿದರ ಮೇಲೆ ಹಲ್ಲೆ ನಡೆಸುವುದನ್ನು ತೋರಿಸಲಾಗಿದೆ ಮತ್ತು ಐತಿಹಾಸಿಕ ಕರಗಕ್ಕೆ ಅಪಮಾನ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ.

ಚಿತ್ರದುರ್ಗದ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ವೀರಭದ್ರಸ್ವಾಮಿಗೆ ಅಪಮಾನ ಮಾಡಲಾಗಿದೆ ಎಂದು ಹೆಡ್ ಬುಷ್ ಚಿತ್ರ ತಂಡದ ವಿರುದ್ಧ ದೂರು ಸಲ್ಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಾಲಿ ಧನಂಜಯ್, ಕರಗ ಮತ್ತು ವೀರಗಾಸೆ ಎರಡಕ್ಕೂ ಚಿತ್ರದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. “ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದೇನೆ. ನಮ್ಮ ಚಿತ್ರದಲ್ಲಿ ವೀರಗಾಸೆಗೆ ಎಲ್ಲಿಯೂ ಅವಮಾನ ಮಾಡಿಲ್ಲ. ಅಸಲಿ ವೀರಗಾಸೆ ಕಲಾವಿದರಿಗೂ, ಕಲಾವಿದರ ವೇಷ ತೊಟ್ಟು ಜಯರಾಜ್ ಮೇಲೆ ದಾಳಿ ಮಾಡುವ ದುಷ್ಕರ್ಮಿಗಳಿಗೂ ಸ್ಪಷ್ಟ ವ್ಯತ್ಯಾಸಗಳನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಕರಗವನ್ನು ಕೂಡ ತುಂಬಾ ಭಕ್ತಿಯಿಂದ ಚಿತ್ರಿಸುವ ಪ್ರಯತ್ನ ಮಾಡಿದ್ದೇವೆ. ನಮ್ಮ ಬೆಂಗಳೂರು ಕರಗವನ್ನು ವಿಜೃಂಭಣೆಯಿಂದ ತೋರಿಸುವ ಸಲುವಾಗಿ ಸಾಕಷ್ಟು ಶ್ರಮ ವಹಿಸಿದ್ದೇವೆ. ಬೇಕಂತಲೇ ನನ್ನನ್ನು ಗುರಿಯಾಗಿಸಿ ಈ ದಾಳಿಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಚಿತ್ರದ ವಿರುದ್ಧ ಅಪಸ್ವರ ಕೇಳಿಬಂದ ಕೂಡಲೇ ಹಲವಾರು ಸಿನಿಮಾ ನಿರ್ದೇಶಕರು, ತಂತ್ರಜ್ಞರು ಚಿತ್ರತಂಡದ ಪರ ನಿಂತಿದ್ದಾರೆ. IStanWithDhananjay ಹ್ಯಾಷ್‌ಟ್ಯಾಗ್ ಬಳಸಿ ಧನಂಜಯ್‌ರವರಿಗೆ ಬೆಂಬಲ ಘೋಷಿಸಿದ್ದಾರೆ.

ಯಶ್ , ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. ಇದೀಗ ಪ್ರದರ್ಶನ ಗೊಳ್ಳುತ್ತಿರುವ ಅವರ ಹೆಡ್ ಬುಷ್ ಚಿತ್ರವು ಉತ್ತಮವಾಗಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಒಂದು ಕಲೆ. ನಿರ್ದೇಶಕನ ಸೃಜನಶೀಲ ಅಭಿವ್ಯಕ್ತಿಯ ಮಾಧ್ಯಮ‌. ಬಣ, ಪಂಥಗಳ ಆಧಾರದ ದ್ವೇಷದಲ್ಲಿ ಭಾವನೆಗೆ ಧಕ್ಕೆ ಎಂಬ ಹುಸಿ ಆರೋಪದಡಿ ಸಿನಿಮಾವನ್ನು ವಿರೋಧಿಸುವುದು ತಪ್ಪು. ಜನರಲ್ ಆಗಿ‌, ಗೈಡ್ ಲೈನ್ಸ್ ಅನುಸಾರ ಅಸಮ್ಮತ ವಿಚಾರಗಳನ್ನು ಸಿನಿಮಾದಲ್ಲಿ ಸೇರಿಸದಂತೆ ತಡೆಯಲು ಸರ್ಕಾರವೇ ನೇಮಿಸಿರುವ ಸೆನ್ಸಾರ್ ಮಂಡಳಿ ಇದೆ” ಎಂದು ಗೀತರಚನೆಕಾರ ಕವಿರಾಜ್ ಅಭಿಪ್ರಾಯಪಟ್ಟಿದ್ದಾರೆ.

ವೀರಗಾಸೆ ಕುಣಿತದವರ ಮಾರುವೇಷದಲ್ಲಿ ಬಂದವರನ್ನು ಥಳಿಸುವ ದೃಶ್ಯಗಳ ಕುರಿತು ಧನಂಜಯ್ ಅವರ ವಿವರಣೆಯು ಸಮಂಜಸವಾಗಿದೆ. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ, ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ ಎಂದು ಅವು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನೆಲದ ಬಗ್ಗೆ ಅಪಾರವಾದ ಕಾಳಜಿ, ಮನುಷ್ಯತ್ವ, ಮಾನವೀಯ ಕಾಳಜಿ ಇರುವ ಧನಂಜಯ್‌ ರವರಂತಹ ನಟರು ಕನ್ನಡ ಚಿತ್ರರಂಗಕ್ಕೆ ಹೆಚ್ಚೇ ಅವಶ್ಯಕವಾಗಿದ್ದಾರೆ. ಅವರೊಂದಿಗೆ ಕನ್ನಡ ಚಿತ್ರರಂಗ ನಿಲ್ಲಬೇಕು.
#Amwithdhananjay ಎಂದು ಖ್ಯಾತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಹೆಡ್‌ ಬುಷ್‌’: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...