Homeಮುಖಪುಟಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

ಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

- Advertisement -
- Advertisement -

ಉದಯೋನ್ಮುಖ ನಟ ಡಾಲಿ ಧನಂಜಯ್ ನಿರ್ಮಿಸಿ ಅಭಿನಯಿಸಿರುವ ಹೆಡ್ ಬುಷ್ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿಯೂ ಕೂಡ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ ಎಂಬ ವರದಿಗಳಿವೆ. ಈ ಬೆನ್ನಲ್ಲೆ ಚಿತ್ರದಲ್ಲಿ ವೀರಗಾಸೆ ಕಲಾವಿದರ ಕಲಾವಿದರ ಮೇಲೆ ಹಲ್ಲೆ ನಡೆಸುವುದನ್ನು ತೋರಿಸಲಾಗಿದೆ ಮತ್ತು ಐತಿಹಾಸಿಕ ಕರಗಕ್ಕೆ ಅಪಮಾನ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ.

ಚಿತ್ರದುರ್ಗದ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ವೀರಭದ್ರಸ್ವಾಮಿಗೆ ಅಪಮಾನ ಮಾಡಲಾಗಿದೆ ಎಂದು ಹೆಡ್ ಬುಷ್ ಚಿತ್ರ ತಂಡದ ವಿರುದ್ಧ ದೂರು ಸಲ್ಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಾಲಿ ಧನಂಜಯ್, ಕರಗ ಮತ್ತು ವೀರಗಾಸೆ ಎರಡಕ್ಕೂ ಚಿತ್ರದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. “ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದೇನೆ. ನಮ್ಮ ಚಿತ್ರದಲ್ಲಿ ವೀರಗಾಸೆಗೆ ಎಲ್ಲಿಯೂ ಅವಮಾನ ಮಾಡಿಲ್ಲ. ಅಸಲಿ ವೀರಗಾಸೆ ಕಲಾವಿದರಿಗೂ, ಕಲಾವಿದರ ವೇಷ ತೊಟ್ಟು ಜಯರಾಜ್ ಮೇಲೆ ದಾಳಿ ಮಾಡುವ ದುಷ್ಕರ್ಮಿಗಳಿಗೂ ಸ್ಪಷ್ಟ ವ್ಯತ್ಯಾಸಗಳನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಕರಗವನ್ನು ಕೂಡ ತುಂಬಾ ಭಕ್ತಿಯಿಂದ ಚಿತ್ರಿಸುವ ಪ್ರಯತ್ನ ಮಾಡಿದ್ದೇವೆ. ನಮ್ಮ ಬೆಂಗಳೂರು ಕರಗವನ್ನು ವಿಜೃಂಭಣೆಯಿಂದ ತೋರಿಸುವ ಸಲುವಾಗಿ ಸಾಕಷ್ಟು ಶ್ರಮ ವಹಿಸಿದ್ದೇವೆ. ಬೇಕಂತಲೇ ನನ್ನನ್ನು ಗುರಿಯಾಗಿಸಿ ಈ ದಾಳಿಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಚಿತ್ರದ ವಿರುದ್ಧ ಅಪಸ್ವರ ಕೇಳಿಬಂದ ಕೂಡಲೇ ಹಲವಾರು ಸಿನಿಮಾ ನಿರ್ದೇಶಕರು, ತಂತ್ರಜ್ಞರು ಚಿತ್ರತಂಡದ ಪರ ನಿಂತಿದ್ದಾರೆ. IStanWithDhananjay ಹ್ಯಾಷ್‌ಟ್ಯಾಗ್ ಬಳಸಿ ಧನಂಜಯ್‌ರವರಿಗೆ ಬೆಂಬಲ ಘೋಷಿಸಿದ್ದಾರೆ.

ಯಶ್ , ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. ಇದೀಗ ಪ್ರದರ್ಶನ ಗೊಳ್ಳುತ್ತಿರುವ ಅವರ ಹೆಡ್ ಬುಷ್ ಚಿತ್ರವು ಉತ್ತಮವಾಗಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಒಂದು ಕಲೆ. ನಿರ್ದೇಶಕನ ಸೃಜನಶೀಲ ಅಭಿವ್ಯಕ್ತಿಯ ಮಾಧ್ಯಮ‌. ಬಣ, ಪಂಥಗಳ ಆಧಾರದ ದ್ವೇಷದಲ್ಲಿ ಭಾವನೆಗೆ ಧಕ್ಕೆ ಎಂಬ ಹುಸಿ ಆರೋಪದಡಿ ಸಿನಿಮಾವನ್ನು ವಿರೋಧಿಸುವುದು ತಪ್ಪು. ಜನರಲ್ ಆಗಿ‌, ಗೈಡ್ ಲೈನ್ಸ್ ಅನುಸಾರ ಅಸಮ್ಮತ ವಿಚಾರಗಳನ್ನು ಸಿನಿಮಾದಲ್ಲಿ ಸೇರಿಸದಂತೆ ತಡೆಯಲು ಸರ್ಕಾರವೇ ನೇಮಿಸಿರುವ ಸೆನ್ಸಾರ್ ಮಂಡಳಿ ಇದೆ” ಎಂದು ಗೀತರಚನೆಕಾರ ಕವಿರಾಜ್ ಅಭಿಪ್ರಾಯಪಟ್ಟಿದ್ದಾರೆ.

ವೀರಗಾಸೆ ಕುಣಿತದವರ ಮಾರುವೇಷದಲ್ಲಿ ಬಂದವರನ್ನು ಥಳಿಸುವ ದೃಶ್ಯಗಳ ಕುರಿತು ಧನಂಜಯ್ ಅವರ ವಿವರಣೆಯು ಸಮಂಜಸವಾಗಿದೆ. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ, ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ ಎಂದು ಅವು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನೆಲದ ಬಗ್ಗೆ ಅಪಾರವಾದ ಕಾಳಜಿ, ಮನುಷ್ಯತ್ವ, ಮಾನವೀಯ ಕಾಳಜಿ ಇರುವ ಧನಂಜಯ್‌ ರವರಂತಹ ನಟರು ಕನ್ನಡ ಚಿತ್ರರಂಗಕ್ಕೆ ಹೆಚ್ಚೇ ಅವಶ್ಯಕವಾಗಿದ್ದಾರೆ. ಅವರೊಂದಿಗೆ ಕನ್ನಡ ಚಿತ್ರರಂಗ ನಿಲ್ಲಬೇಕು.
#Amwithdhananjay ಎಂದು ಖ್ಯಾತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಹೆಡ್‌ ಬುಷ್‌’: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...