Homeಮುಖಪುಟಆಡಳಿತದಲ್ಲಿ ಧರ್ಮ ಬೆರೆಸುವ ಯಾರೊಂದಿಗೂ ನನಗೆ ಸಂಬಂಧವಿರುವುದಿಲ್ಲ: ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ

ಆಡಳಿತದಲ್ಲಿ ಧರ್ಮ ಬೆರೆಸುವ ಯಾರೊಂದಿಗೂ ನನಗೆ ಸಂಬಂಧವಿರುವುದಿಲ್ಲ: ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ

ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ, ಆಪ್ ರೀತಿಯ ಇನ್ನೊಂದರ ಅಗತ್ಯವಿಲ್ಲ - ನಟ ಚೇತನ್ ಅಭಿಮತ

- Advertisement -
- Advertisement -

ಆಡಳಿತದಲ್ಲಿ ಧರ್ಮ ಬೆರೆಸುವ ಯಾರೊಂದಿಗೂ ನನಗೆ ಯಾವುದೇ ರೀತಿಯ ಸಂಬಂಧವಿರುವುದಿಲ್ಲ ಎಂದು ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ ಸ್ಪಷ್ಟಪಡಿಸಿದ್ದಾರೆ.

ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಹಿಂದೆ ಆಮ್ ಆದ್ಮಿ ಪಕ್ಷದ ಬೆಂಬಲಿಗರಾಗಿದ್ದ ವಿಶಾಲ್ ದದ್ಲಾನಿಯವರ ಹೇಳಿಕೆಗಳು ಬಂದಿದೆ.

ತಮ್ಮ ಟ್ವೀಟ್‌ನಲ್ಲಿ ಅರವಿಂದ್ ಕೇಜ್ರಿವಾಲ್ ಅಥವಾ ನೋಟಿನ ವಿಷಯವನ್ನು ಪ್ರಸ್ತಾಪಿಸದ ವಿಶಾಲ್ ದದ್ಲಾನಿಯವರು ಬಹಳ ಸ್ಪಷ್ಟವಾಗಿ ಇನ್ನು ಮುಂದೆ ಆಪ್‌ ಪಕ್ಷದೊಂದಿಗೆ ಯಾವುದೇ ಸಂಬಂಧ ಹೊಂದುವುದಿಲ್ಲ ಎಂದು ತಿಳಿಸಿದ್ದಾರೆ.

“ನಾವು ಜಾತ್ಯಾತೀತ, ಸಮಾಜವಾದಿ ಗಣರಾಜ್ಯ ಎಂದು ನಮ್ಮ ಭಾರತದ ಸಂವಿಧಾನ ಹೇಳುತ್ತದೆ. ಆದ್ದರಿಂದ, ಆಡಳಿತದಲ್ಲಿ ಧರ್ಮಕ್ಕೆ ಯಾವುದೇ ಸ್ಥಾನವಿರುವಂತಿಲ್ಲ. ಇನ್ನೂ ಸ್ಪಷ್ಟವಾಗಿ ಹೇಳಬೇಕೆಂದರೆ, ಸರ್ಕಾರದ ಆಡಳಿತದಲ್ಲಿ ಯಾವುದೇ ಧರ್ಮದ ಯಾವುದೇ ಭಾಗವನ್ನು ತರುವ ಯಾರೊಂದಿಗೂ ನನಗೆ ಯಾವುದೇ ಸಂಬಂಧವಿರುವುದಿಲ್ಲ” ಎಂದು ದದ್ಲಾನಿ ಟ್ವೀಟ್ ಮಾಡಿದ್ದಾರೆ.

ಕನ್ನಡ ಚಿತ್ರನಟ ಚೇತನ್ ಕೂಡ ಕೇಜ್ರಿವಾಲ್ ಮನವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. “ಎಎಪಿ ಪಕ್ಷದ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ಅವರು ಬ್ಯಾಂಕ್ ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮಿ ಫೋಟೋಗಳನ್ನು ಮುದ್ರಿಸಿ ಎಂದು ಆಗ್ರಹ ನೀಡಿದ್ದಾರೆ, ಇದರಿಂದ ದೇಶದ ಆರ್ಥಿಕತೆ ಸುಧಾರಿಸುತ್ತದೆ ಎಂದು ಕೂಡ ವಾದಿಸಿದ್ದಾರೆ. ಎಷ್ಟು ಅಸಂಬದ್ಧವಾದ ಹೇಳಿಕೆ! ಇಂತಹ ಅಸಾಂವಿಧಾನಿಕ ಮೂಢನಂಬಿಕೆಯ ಮೌಢ್ಯಗಳ ಹೇರಿಕೆಯನ್ನು ಕೇಜ್ರಿವಾಲ್ ಅವರು ನಿಲ್ಲಿಸಬೇಕು. ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ, ಆಪ್ ರೀತಿಯ ಇನ್ನೊಂದರ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್‌ರವರು ನೋಟುಗಳಲ್ಲಿ ದೇವರ ಚಿತ್ರವಿರಬೇಕೆಂದು ಬುಧವಾರ ಪ್ರತಿಪಾದಿಸಿದ್ದರು. “ಲಕ್ಷ್ಮಿ ಸಮೃದ್ಧಿಯ ದೇವತೆ ಮತ್ತು ಗಣೇಶನು ತೊಂದರೆಗಳನ್ನು ದೂರವಿಡುವ ದೇವರಾಗಿದ್ದು, ಈ ದೇವರುಗಳ ಚಿತ್ರ ನೋಟುಗಳ ಮೇಲೆ ಇದ್ದರೆ, ಇಡೀ ದೇಶವು ಅವರ ಆಶೀರ್ವಾದವನ್ನು ಪಡೆಯುತ್ತದೆ” ಎಂದು ಅವರು ಹೇಳಿದರು.

ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರು, “ಆರ್ಥಿಕತೆ ಸುಧಾರಿಸುವುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಹಂತಗಳಿವೆ. ಇದರಲ್ಲಿ ಹೆಚ್ಚಿನ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ” ಎಂದು ಅವರು ಹೇಳಿದರು.

ಆದರೆ, ನಾವು ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ, ಅದಕ್ಕಾಗಿ ನಮಗೆ ದೇವರ ಆಶೀರ್ವಾದ ಬೇಕು. ಉದ್ಯಮಿಗಳು ತಮ್ಮ ಕೆಲಸದ ಸ್ಥಳದಲ್ಲಿ ಗಣೇಶ ಮತ್ತು ಲಕ್ಷ್ಮಿ ವಿಗ್ರಹಗಳನ್ನು ಇಟ್ಟುಕೊಂಡು, ದಿನದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರತಿದಿನ ಪೂಜೆ ಮಾಡುತ್ತಾರೆ. ಅದೇ ರೀತಿ ಕರೆನ್ಸಿ ನೋಟುಗಳಲ್ಲಿ ದೇವರ ಫೋಟೋ ಹಾಕಿದರೆ ದೇಶದ ಆರ್ಥಿಕತೆ ಸುಧಾರಣೆಗೆ ಕೈಗೊಂಡಿರುವ ಪ್ರಯತ್ನ ಫಲ ನೀಡುವುದು ಖಚಿತ ಎಂದು ಮುಖ್ಯಮಂತ್ರಿ ಹೇಳಿದರು.

ಅರವಿಂದ್ ಕೇಜ್ರಿವಾಲ್‌ರವರ ಹೇಳಿಕೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅರವಿಂದ ಕೇಜ್ರಿವಾಲ್ ಈ ಹಿಂದೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿ ಆಗಿದ್ದವರು ಮತ್ತು, ಈಗ ಒಂದು ಸರ್ಕಾರದ ಮುಖ್ಯಸ್ಥ. ಅವರಿದ್ದ ಮತ್ತು ಈಗಿರುವ ಸ್ಥಾನ, ಧರ್ಮ ನಿರಪೇಕ್ಷ ಮನಸ್ಥಿತಿಯನ್ನು ಅನಿವಾರ್ಯವಾಗಿ ಬಯಸುವತ್ತದೆ. ನೋಟಿನ ಮೇಲೆ ಗಣೇಶ ಮತ್ತು ಲಕ್ಷ್ಮಿ ಚಿತ್ರ ಹಾಕಿದರೆ, ಇಂದಿನ ಭಾರತದ ಸಮಸ್ಯೆಗಳಿಗೆ ಪರಿಹಾರ ಸಿಕ್ಕುತ್ತದೆ ಎಂದು ಹೇಳುವ ಇವರು, ತಮ್ಮ ಹಿಂದಿನ ಮತ್ತು ಈಗಿನ ಕೆಲಸಗಳನ್ನು ತರ್ಕಬದ್ಧವಾಗಿ ಮಾಡಿರುವ ಬಗ್ಗೆ ಹಾಗೂ, ಮುಂದೆ ಮಾಡುವ ಬಗ್ಗೆ ಕೂಡಾ ಗಂಭೀರ ಅನುಮಾನಕ್ಕೆ ಎಡೆ ಮಾಡಿಕೊಡುತ್ತದೆ. ಇದು ಖೇದಕರ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...