Homeಕರ್ನಾಟಕ‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

‘ಬಡವರ ಮಕ್ಳು ಬೆಳೀಬೇಕ್‌ ಕಣ್ರಯ್ಯ’ ಹೇಳಿಕೆ ವೈರಲ್‌ ಆಗುತ್ತಿತ್ತು, ಇದೇ ಹೇಳಿಕೆಯ ಪ್ರೊಫೈಲ್‌ ಫೋಟೋ ಈಗ ಟ್ರೆಂಡ್ ಆಗಿದೆ.

- Advertisement -
- Advertisement -

ನಟ ರಾಕ್ಷಸ ಖ್ಯಾತಿಯ ಧನಂಜಯ ಅವರು ಅಭಿನಯಿಸಿ, ನಿರ್ಮಾಣ ಮಾಡಿರುವ ‘ಹೆಡ್‌ ಬುಷ್‌’ ಸಿನಿಮಾದಲ್ಲಿ ‘ವೀರಗಾಸೆ ಕಲೆಗೆ ಅಪಮಾನ ಎಸಗಲಾಗಿದೆ’ ಎಂದು ಹಿಂದುತ್ವವಾದಿಗಳು ದೂರು ನೀಡಿರುವ ಬೆನ್ನಲ್ಲೇ, ಹಳೆಯ ಸಿನಿಮಾ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗತೊಡಗಿವೆ.

‘ಹೆಡ್‌ ಬುಷ್‌’ನಲ್ಲಿ ವಿವಾದ ಸೃಷ್ಟಿಸಲಾಗಿದೆ ಎನ್ನುವವರು ‌ಈ ದೃಶ್ಯಗಳಿಗೆ ಹಿಂದೇಕೆ ಆಕ್ಷೇಪಗಳನ್ನು ವ್ಯಕ್ತಪಡಿಸಲಿಲ್ಲ. ಇಲ್ಲಿ ಯಾರು ಯಾವ ಸಿನಿಮಾವನ್ನು ಮಾಡಿದ್ದಾರೆ, ಸಿನಿಮಾ ಮಾಡಿದವರ ಸಾಮಾಜಿಕ ಹಿನ್ನೆಲೆ ಏನು ಮುಖ್ಯವಾಗುತ್ತಿದೆ ಎಂಬ ಟೀಕೆಗಳನ್ನು ಸಿನಿಮಾ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.

‘ನಟ ಉಪೇಂದ್ರ ಅವರ ಸಿನಿಮಾಗಳಲ್ಲಿ ಹಿಂದೂ ದೇವರುಗಳಿಗೆ ಅವಹೇಳನ ಮಾಡಲಾಗಿದೆ’ ಎಂಬ ಚರ್ಚೆಯ ಜೊತೆಗೆ ಹಲವು ಸಿನಿಮಾಗಳ ದೃಶ್ಯಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ. ಡಾಲಿ ಧನಂಜಯ ಅವರು ಇತ್ತೀಚೆಗೆ ನೀಡಿದ್ದ ‘ಬಡವರ ಮಕ್ಳು ಬೆಳೀಬೇಕ್‌ ಕಣ್ರಯ್ಯ’ ಹೇಳಿಕೆ ವೈರಲ್‌ ಆಗುತ್ತಿತ್ತು, ಇದೇ ಹೇಳಿಕೆಯ ಪ್ರೊಫೈಲ್‌ ಫೋಟೋ ಈಗ ಟ್ರೆಂಡ್ ಆಗಿದೆ. ಆ ಮೂಲಕ ಡಾಲಿ ಧನಂಜಯ ಅವರಿಗೆ ಬೆಂಬಲ ಸೂಚಿಸುತ್ತಿದ್ದಾರೆ.

“ಮೊದಲು ಮಾನವನಾಗು” ಎಂದು ಡಾಲಿ ಧನಂಜಯ ಅವರು ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರಿಗೆ ಬುದ್ಧಿ ಹೇಳಿದ್ದರಿಂದ ಒಂದು ವರ್ಗದ ಜನರು ಧನಂಜಯ ವಿರುದ್ಧ ಹಗೆ ಸಾಧಿಸುತ್ತಿದ್ದಾರೆಂಬ ಪೋಸ್ಟ್‌ಗಳು ಹರಿದಾಡಿವೆ. ಅದರ ಜೊತೆಗೆ ಹಳೆಯ ಸಿನಿಮಾ  ದೃಶ್ಯಗಳು ಗಮನ ಸೆಳೆಯುತ್ತಿವೆ.

“ಉಪೇಂದ್ರ ‘ಗಣೇಶ’ನಿಗೆ ಗನ್‌ ಹಿಡಿದಾಗ ಧರ್ಮಕ್ಕೆ ಅಪಚಾರ ಆಗಲಿಲ್ಲ. ಡೈರೆಕ್ಟರ್‌ ಗುರುಪ್ರಸಾದ್‌ ಮಠದೊಳಗೇ ಕಾವಿಧಾರಿಗಳು ಎಣ್ಣೆ ಹೊಡಿತಾರೆ ಅಂದಾಗ ಧರ್ಮಕ್ಕೆ ಅಪಚಾರ ಆಗಲಿಲ್ಲ. ಧನಂಜಯ್‌ ಅವರಿಂದ ಅಪಚಾರಿ ಆಗ್ಬಿಟ್ಟಿದೆ ನೋಡಿ” ಎಂಬ ಪೋಸ್ಟರ್‌ ವೈರಲ್ ಆಗುತ್ತಿದೆ.

“ಇದು ಹಿಂದು ಧರ್ಮಕ್ಕೆ ಮಾಡಿದ ಅವಮಾನ ಅಲ್ವಾ?” ಎಂಬ ಮತ್ತೊಂದು ದೃಶ್ಯವನ್ನು ಉಪೇಂದ್ರ ಅವರ ಸಿನಿಮಾದಿಂದ ಆಯ್ದು ಹಂಚಿಕೊಳ್ಳಲಾಗುತ್ತಿದೆ.

ತುಳಸಿಕೃಷ್ಣ ಎಂಬವರು ಹಲವು ಸಿನಿಮಾ ದೃಶ್ಯಗಳನ್ನು ಪಟ್ಟಿ ಮಾಡಿದ್ದಾರೆ.

ಬೇಡರ ಕಣ್ಣಪ್ಪ: ಅಣ್ಣಾವ್ರು ಬೇಡರ ಕಣ್ಣಪ್ಪ ಪಾತ್ರಧಾರಿಯಾಗಿ ಶಿವಲಿಂಗದ ಮೇಲೆ ಕಾಲಿಡ್ತಾರೆ.
ಉಪೇಂದ್ರ: ಉಪೇಂದ್ರರವರು ಪುರೋಹಿತರಿಗೆ ಎಣ್ಣೆ ಕುಡಿಸಿ, ಗಣೇಶನನ್ನು ನೀರಿಗೆ ಎಸೀತಾರೆ.
A: ಉಪೇಂದ್ರ, I am God, God is great ಅಂತ ತಮ್ಮನ್ನು ತಾವೇ ದೇವರು ಅಂತಾರೆ.
ಅಪ್ಪಾಜಿ: ವೀರಗಾಸೆ ವೇಷಧಾರಿಯಾಗಿ ವಿಲನ್‌ಗಳು ಗೋವಿಂದ, ಗೋವಿಂದ ಅಂತ ಕ್ಯಾಪ್ಟನ್‌ರನ್ನು ಸಾಯಿಸುತ್ತಾರೆ.
ಉಳಿದವರು ಕಂಡಂತೆ: ಹುಲಿ ವೇಷಧಾರಿಯನ್ನು ರಕ್ಷಿತ್ ಶೆಟ್ಟಿ ಹೊಡೆಯುತ್ತಾರೆ.
ಗರುಡ ಗಮನ ವೃಷಭ ವಾಹನ: ಮಾದೇವನ ಹಾಡು ಬರುವಾಗ ರಾಜ್.ಬಿ.ಶೆಟ್ಟಿ ಕೊಲೆ ಮಾಡಿ ಕುಣಿಯುತ್ತಾರೆ.
ಕಾಂತಾರ: ವಿಲನ್ ದೈವದ ಕುತ್ತಿಗೆ ಹಿಸುಕಿ ಮೇಲಕ್ಕೆ ಎತ್ತುತ್ತಾನೆ.
ಜನುಮದ ಜೋಡಿ: ಓ ಊರ ದ್ಯಾವ್ರೆ ಹಾಡು.. ದೇವರಿಗೆ, ನೀ ಎಕ್ಕುಟ್ಟೋಗ, ನಿನ್ ಮನೆ ಕಾಯ್ವೋಗ, ನಿನ್ ತಲೆ ಹೊಡೆಯ, ಹಾಳಾದೋನೆ, ನೀನ್ ನೆಗುದ್ ಬೀಳ, ನಿಂಗ್ ಉಳ ಬೀಳ.

“ಇಂತಹ ಸಾವಿರ ಉದಾಹರಣೆಗಳು ಸಿಗುತ್ತವೆ. ನೀವು ಯಾವುದೇ ಚಿತ್ರ ಹೆಸರಿಸಿ, ಅದರಲ್ಲಿ ತಪ್ಪು ಹುಡುಕಬಹುದು. ಇವೆಲ್ಲವನ್ನು ಆ ಸಂದರ್ಭಕ್ಕೆ ಆ ಪಾತ್ರದ ರಿಯಾಕ್ಷನ್ ಅಂತ ಒಪ್ಪಿಕೊಂಡಿದ್ದೇವೆ. ಈಗ ಡಾಲಿ ವೀರಗಾಸೆ ವೇಷದಲ್ಲಿರುವ ವಿಲನ್‌ಗಳನ್ನು ಹೊಡೆದರೆ, ವೀರಗಾಸೆಗೆ ಅಪಮಾನ ಮಾಡುತ್ತಿರುವವರನ್ನು ಹೊಡೆದಂತೆ ಎಂದುಕೊಳ್ಳಬಹುದಲ್ಲವೆ. ಇಲ್ಲ, ಇಲ್ಲಿ ವಿರೋಧಿಸುತ್ತಿರುವವರಿಗೆ ವೀರಗಾಸೆ ಮುಖ್ಯವಲ್ಲ, ಅದರ ಮೇಲೆ ಪ್ರೀತಿಯು ಇಲ್ಲ, ಡಾಲಿ ಮೇಲಿನ ದ್ವೇಷ ಅಷ್ಟೆ” ಎಂದು ತುಳಸಿ ಕೃಷ್ಣ ತಿಳಿಸಿದ್ದಾರೆ.

May be an image of 3 people and text that says "'ಕಠಾರಿವೀರ ಸುರಸುಂದರಾಂಗಿ' ಸಿನಿಮಾದಲ್ಲಿ ಉಪೇಂದ್ರ ಹಿಂದೂ ದೇವರ ಪಾತ್ರಧಾರಿಗಳನ್ನು ಬೂಟುಕಾಲಲ್ಲಿ ಒದ್ದು ಫೈಟ್ ಮಾಡುವಾಗ.. ಈ ಧರ್ಮರಕ್ಷಕ ಪಡೆಗಳ ವೀರಾಧಿವೀರರು ಯಾವ ಇಲಿ ಬಿಲದೊಳಗೆ ಬೆಚ್ಚಗೆ ಮಲಗಿದ್ರು? 'ಬಡವರಮನೆ ಯಿಂದ ಬಂದ ಡಾಲಿ ಧನಂಜಯ್ ಮೇಲೆ ನಿಮ್ಮ ಪ್ರತಾಪ ತೋರಿಸ್ತ ಇದೀರ? ಯಾಕೆ ಬಡವರ ಮನೆ ಮಕ್ಳು HERO ಆಗ್ಬಾರ್ದ?"‘ಕಠಾರಿವೀರ ಸುರಸುಂದರಾಂಗ’ ಸಿನಿಮಾದ ಸಿನಿಮಾ ದೃಶ್ಯದ ಕುರಿತು ಚರ್ಚೆಯಾಗುತ್ತಿದೆ. ಉಪೇಂದ್ರ ಅವರು ಹಿಂದೂ ದೇವರುಗಳಿಗೆ ಬೂಟು ಕಾಲಲ್ಲಿ ಒದ್ದು ಫೈಟ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

May be an image of 6 people, people standing, fire and text that says 'ಶೂದ್ರರ ಹುಲಿವೇಷಧಾರಿಗೆ ಹೊಡೆದಾಗ ಧರ್ಮಕ್ಕೆ ಅಪಚಾರವಾಗಲಿಲ್ಲ!! ದಲಿತರ ಗುಳಿಗದೈವಕ್ಕೆ ಧಣಿಯ ಗುಲಾಮರು ಹೊಡೆದಾಗ ಧರ್ಮಕ್ಕೆ ಅಪಮಾನವಾಗಲಿಲ್ಲ. ವೀರಗಾಸೆ ವೇಷ ಧರಿಸಿ ಜಯರಾಜ್ ಕೊಲ್ಲಲು ಬಂದ ಖಳರಿಗೆ ನಾಯಕ ಹೊಡೆದಾಗ ಧರ್ಮಕ್ಕೆ ಅಪಮಾನವಾಗಿದೆ ನೋಡಿ. ಬಡವರ ಮಕ್ಕಳನ್ನ ಬೆಳೆಯೋಕೆಲ್ಲಿ ಬಿಡ್ತೀರ?'May be an image of 2 people and text that says 'ವಿಕ್ರಾಂತ್ ರೋಣ ಸಿನಿಮದಲ್ಲಿ ಕೋಲ ದೈವ ಪಾತ್ರಗಳಿಗೆ ನಾಮರ್ದ'ರು ಅಂದು, ನಾಯಕ ಬಡಿದು ಕೊಲ್ಲುತ್ತಾನೆ.. ಧರ್ಮರಕ್ಷಕ ಪುಡುಂಗಿಗಳು ಆವತ್ತು ಎಲ್ಲಿ ದನ ಮೇಯ್ಸೋಕೆ ಹೋಗಿದ್ರು? 'ಡಾಲಿ' ಬಡವರ ಮನೆಯಿಂದ ಬಂದ ಹುಡುಗ.. ಅದೇ ಉರಿ ನಿಮಗೆ.'‘ಉಳಿದವರು ಕಂಡಂತೆ’ ಸಿನಿಮಾದಲ್ಲಿ ‘ಹುಲಿ ವೇಷಧಾರಿ’ಗೆ ಹೊಡೆಯುವ ದೃಶ್ಯವನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

ಹೋರಾಟಗಾರ್ತಿ ನಜ್ಮಾ ಅವರು ಬರೆದಿರುವ ಟಿಪ್ಪಣಿಯನ್ನು ಅನೇಕರು ಶೇರ್‌ ಮಾಡಿದ್ದಾರೆ.

“ನಾನು ಹುಟ್ಟಿರದೆ ಆರಾಮಾಗಿರಕ್ಕೆ ಅನ್ಲಿಲ್ಲ ನಮ್ ಧನಂಜಯ,
ರಿಸ್ಕ್ ಎಷ್ಟಾದ್ರೂ ತಗೊಂಡು ಮುಂದುಕ್ ಹೋಗ್ಬೇಕು ಅಂದ;
ಕಾಸಿರೋರೆ ಜಗತ್ ಆಳ್ಬೇಕು ಅನ್ಲಿಲ್ಲ ನಮ್ ಧನಂಜಯ,
ಬಡವರ್ ಮನೆ ಮಕ್ಳು ಬೆಳೇಬೇಕು ಅಂದ,
ಜಾತಿ ಧರ್ಮ ಅಂತ ಕಿತ್ತಾಡಿ ಸಾಯ್ರಿ ಅನ್ಲಿಲ್ಲ ನಮ್ ಧನಂಜಯ,
ಏನಾದರೂ ಆಗು ಮೊದಲು ಮಾನವನಾಗು ಅಂದ,
ಕಂಡೋರ್ ಹೊಟ್ಟೆ ಮ್ಯಾಲೆ ಹೊಡೆದು ಸಂಪಾದ್ನೇ ಮಾಡು ಅನ್ಲಿಲ್ಲ ನಮ್ ಧನಂಜಯ,
ಕಷ್ಟ ಪಟ್ಟು ದುಡ್ಡು ಮುಂದೆ ಬನ್ನಿ ಅಂದ,
ಮೇಲು-ಕೀಳು, ದೊಡ್ಡೋರು-ಚಿಕ್ಕೋರು ಅನ್ಲಿಲ್ಲ ನಮ್ ಧನಂಜಯ,
ಎಲ್ರು ನಮ್ಮವ್ರು ಕಂತೆ ಒಟ್ಟಿಗೆ ನಡೀರ್ಲಾ ಅಂದ,
ಸಿನೆಮಾ ಅಂದ್ರೆ ಬರಿ ಬಣ್ಣ ಹಚ್ಚೋದಲ್ಲ ಅಂದ ನಮ್ಮ ಧನಂಜಯ,
ಸಿನ್ಮಾ ಅಂದ್ರೆ ಬದ್ಕು-ಬವಣೆ ಕನ್ರಲಾ ಅಂದ” ಎಂಬ ಸಾಲುಗಳನ್ನು ನಜ್ಮಾ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...