Homeಕರ್ನಾಟಕಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ

- Advertisement -
- Advertisement -

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಕೈಗೊಂಡಿರುವ ಕಾಮಗಾರಿಗಳ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ನಾಲ್ಕು ದಿನಗಳ ಕಾಲ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 27ರ ಗುರುವಾರದಿಂದ ಅಕ್ಟೋಬರ್ 31 ರ ಸೋಮವಾರದ ನಡುವೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯುತ್ ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಅಕ್ಟೋಬರ್ 27, ಗುರುವಾರ

ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆ ಬಸ್ ನಿಲ್ದಾಣ, ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಪಿಡಬ್ಲ್ಯುಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌‌ 1 ಮತ್ತು 2ನೇ ಮೈನ್, ರಾಮ್ ಆಂಡ್‌ ಕಂ. ವೃತ್ತ, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಗುರುವಾರದಂದು ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಅಕ್ಟೋಬರ್ 28, ಶುಕ್ರವಾರ

DCM ಟೌನ್‌ಶಿಪ್ ಮತ್ತು MCC B ಬ್ಲಾಕ್ 2ನೇ ಮೈನ್ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್ ವ್ಯತ್ಯಯವಾಲಿದೆ.

ಅಕ್ಟೋಬರ್ 29, ಶನಿವಾರ

ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಗುಂಡಿ ಚೌಲ್ಟ್ರಿ ಹಿಂಭಾಗ, ಎಂಸಿಸಿಬಿ ಬ್ಲಾಕ್, ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸ್ಟೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆಯ ಬಸ್ ನಿಲ್ದಾಣ, ಪಿಡಬ್ಲ್ಯೂಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌ 1ನೇ ಮತ್ತು 2ನೇ ಮೈನ್, ರಾಮ್ ಆಂಡ್‌ ಕೋ ಸರ್ಕಲ್, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇಷ್ಟೆ ಅಲ್ಲದೆ, ಶಂಕರ್ ವಿಹಾರ್‌ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್ಎನ್ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು, 6ನೇ ಮುಖ್ಯರಸ್ತೆ ಎಂಸಿಸಿ ಬಿ ಬ್ಲಾಕ್, ಲಕ್ಷ್ಮೀ ಫ್ಲೋರ್ ಮಿಲ್, ಕುವೆಂಪು ನಗರ, ಎಸ್‌ಎಸ್ ಲೇಔಟ್ ಎ ಬ್ಲಾಕ್, ಎಸ್‌ಎಸ್ ಮಹಲ್, ಮಾವಿಂತೋಪು ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳು, ಕರ್ನಾಟಕ ಬ್ಯಾಂಕ್ ಬಲಭಾಗ, ಅಂಗವಿಕಲ ಹಾಸ್ಟೆಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಅಕ್ಟೋಬರ್ 30, ಭಾನುವಾರ

ದಾವಣಗೆರೆ ಬೆಸ್ಕಾಂ ವೃತ್ತದ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶ ಮತ್ತು ದಾವಣಗೆರೆ 220/66/11 ಕಿಲೋವೋಲ್ಟ್ ರಸೀವಿಂಗ್‌ ಸ್ಟೇಷನ್‌ಗಳಲ್ಲಿ ಭಾನುವಾರ ವಿದ್ಯುತ್ ಕಡಿತಗೊಳ್ಳಲಿದೆ.

ಅಕ್ಟೋಬರ್ 31, ಸೋಮವಾರ

ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಪ್ರದೇಶಗಳಲ್ಲಿ ಸೋಮವಾರ ವಿದ್ಯುತ್‌ ವ್ಯತ್ಯಯಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...