Homeಕರ್ನಾಟಕಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ನಾಲ್ಕು ದಿನಗಳ ಕಾಲ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ; ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ

- Advertisement -
- Advertisement -

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಕೈಗೊಂಡಿರುವ ಕಾಮಗಾರಿಗಳ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ನಾಲ್ಕು ದಿನಗಳ ಕಾಲ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 27ರ ಗುರುವಾರದಿಂದ ಅಕ್ಟೋಬರ್ 31 ರ ಸೋಮವಾರದ ನಡುವೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಒಟ್ಟು ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯುತ್ ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಅಕ್ಟೋಬರ್ 27, ಗುರುವಾರ

ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆ ಬಸ್ ನಿಲ್ದಾಣ, ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಪಿಡಬ್ಲ್ಯುಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌‌ 1 ಮತ್ತು 2ನೇ ಮೈನ್, ರಾಮ್ ಆಂಡ್‌ ಕಂ. ವೃತ್ತ, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಗುರುವಾರದಂದು ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಅಕ್ಟೋಬರ್ 28, ಶುಕ್ರವಾರ

DCM ಟೌನ್‌ಶಿಪ್ ಮತ್ತು MCC B ಬ್ಲಾಕ್ 2ನೇ ಮೈನ್ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್ ವ್ಯತ್ಯಯವಾಲಿದೆ.

ಅಕ್ಟೋಬರ್ 29, ಶನಿವಾರ

ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಗುಂಡಿ ಚೌಲ್ಟ್ರಿ ಹಿಂಭಾಗ, ಎಂಸಿಸಿಬಿ ಬ್ಲಾಕ್, ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹೊಸ್ಟೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆಯ ಬಸ್ ನಿಲ್ದಾಣ, ಪಿಡಬ್ಲ್ಯೂಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ಎಕ್ಸ್‌ಟೆನ್ಸನ್‌ 1ನೇ ಮತ್ತು 2ನೇ ಮೈನ್, ರಾಮ್ ಆಂಡ್‌ ಕೋ ಸರ್ಕಲ್, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇಷ್ಟೆ ಅಲ್ಲದೆ, ಶಂಕರ್ ವಿಹಾರ್‌ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್ಎನ್ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು, 6ನೇ ಮುಖ್ಯರಸ್ತೆ ಎಂಸಿಸಿ ಬಿ ಬ್ಲಾಕ್, ಲಕ್ಷ್ಮೀ ಫ್ಲೋರ್ ಮಿಲ್, ಕುವೆಂಪು ನಗರ, ಎಸ್‌ಎಸ್ ಲೇಔಟ್ ಎ ಬ್ಲಾಕ್, ಎಸ್‌ಎಸ್ ಮಹಲ್, ಮಾವಿಂತೋಪು ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳು, ಕರ್ನಾಟಕ ಬ್ಯಾಂಕ್ ಬಲಭಾಗ, ಅಂಗವಿಕಲ ಹಾಸ್ಟೆಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಶನಿವಾರ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಅಕ್ಟೋಬರ್ 30, ಭಾನುವಾರ

ದಾವಣಗೆರೆ ಬೆಸ್ಕಾಂ ವೃತ್ತದ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶ ಮತ್ತು ದಾವಣಗೆರೆ 220/66/11 ಕಿಲೋವೋಲ್ಟ್ ರಸೀವಿಂಗ್‌ ಸ್ಟೇಷನ್‌ಗಳಲ್ಲಿ ಭಾನುವಾರ ವಿದ್ಯುತ್ ಕಡಿತಗೊಳ್ಳಲಿದೆ.

ಅಕ್ಟೋಬರ್ 31, ಸೋಮವಾರ

ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಪ್ರದೇಶಗಳಲ್ಲಿ ಸೋಮವಾರ ವಿದ್ಯುತ್‌ ವ್ಯತ್ಯಯಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...