Homeಮುಖಪುಟಹೆಣ್ಣನ್ನು ‘ಐಟಂ’ ಎಂದು ಕರೆಯುವುದು ಅವಹೇಳನಕಾರಿ: ಮುಂಬೈ ಹೈಕೋರ್ಟ್

ಹೆಣ್ಣನ್ನು ‘ಐಟಂ’ ಎಂದು ಕರೆಯುವುದು ಅವಹೇಳನಕಾರಿ: ಮುಂಬೈ ಹೈಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದಕ್ಕಾಗಿ ಒಬ್ಬ ವ್ಯಕ್ತಿಗೆ ಒಂದೂವರೆ ವರ್ಷಗಳ ಜೈಲು ಶಿಕ್ಷೆಯನ್ನು ಮುಂಬೈನ ವಿಶೇಷ ನ್ಯಾಯಾಲಯವು ವಿಧಿಸಿದೆ. ಹೆಣ್ಣನ್ನು ‘ಐಟಂ’ ಎಂದು ಕರೆಯುವುದು ಅವಹೇಳನಕಾರಿಯಾಗಿದ್ದು, ಆಕೆಯನ್ನು ಲೈಂಗಿಕ ದೃಷ್ಟಿಯಲ್ಲಿ ಚಿತ್ರಿಸುತ್ತದೆ ಎಂದು ಎಚ್ಚರಿಸಿದೆ.

ಅಕ್ಟೋಬರ್ 20ರಂದು ನೀಡಲಾದ ಆದೇಶದಲ್ಲಿ, ನ್ಯಾಯಾಲಯವು ಆರೋಪಿಗೆ ಕರುಣೆ ತೋರಿಸಲು ಕೋರ್ಟ್ ನಿರಾಕರಿಸಿತು. ಇಂತಹ ಅನೈತಿಕ ನಡವಳಿಕೆ‌ ತಪ್ಪಿಸಿ ಮಹಿಳೆಯರನ್ನು ರಕ್ಷಿಸಲು “ರೋಡ್‌ ರೋಮಿಯೊ”ಗಳಿಗೆ ಪಾಠ ಕಲಿಸುವ ಅಗತ್ಯವಿದೆ ಎಂದು ಕೋರ್ಟ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ಎ ಜೆ ಅನ್ಸಾರಿ, 2015ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಯುವತಿಯನ್ನು ‘ಐಟಂ’ ಎಂದ ಅಪರಾಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಆರೋಪಿಯು ಉದ್ದೇಶಪೂರ್ವಕವಾಗಿ ಸಂತ್ರಸ್ತೆಯ ಕೂದಲನ್ನು ಹಿಡಿದು ಎಳೆದು ಆಕೆಯನ್ನು ‘ಐಟಂ’ ಎಂದು ಕರೆದಿದ್ದಾನೆ. ನನ್ನ ಅಭಿಪ್ರಾಯದಲ್ಲಿ ಇದು ಸಂತ್ರಸ್ತೆಯ ಮೇಲಿನ ದೌರ್ಜನ್ಯವನ್ನು ಸಾಬೀತುಪಡಿಸುತ್ತದೆ” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಆರೋಪಿಯ ವರ್ತನೆಯು “ಸಂಪೂರ್ಣವಾಗಿ ಅನುಚಿತವಾಗಿದೆ” ಎಂದು ನ್ಯಾಯಾಲಯವು ಗಮನಿಸಿದೆ.

ಆರೋಪಿಯು ಸಂತ್ರಸ್ತೆಯನ್ನು ಉದ್ದೇಶಿಸಿ ‘ಐಟಂ’ ಎಂಬ ಪದವನ್ನು ಬಳಸಿದ್ದಾನೆ. ಇದು ಸಾಮಾನ್ಯವಾಗಿ ಹೆಣ್ಣನ್ನು ಅವಹೇಳನಕಾರಿ ಶೈಲಿಯಲ್ಲಿ ಸಂಬೋಧಿಸಲು ಬಳಸುವ ಪದವಾಗಿದೆ. ಜೊತೆಗೆ ಲೈಂಗಿಕ ದೃಷ್ಟಿಕೋನದ್ದಾಗಿದೆ. ಇದು ಆಕೆಯ ನಮ್ರತೆಯನ್ನು ಕೆರಳಿಸುವ ಉದ್ದೇಶವನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

“ಯಾವುದೇ ಹೆಣ್ಣನ್ನು ಸಂಬೋಧಿಸಲು ‘ಐಟಂ’ ಎಂಬ ಪದವನ್ನು ಬಳಸುವುದು ನಿಸ್ಸಂಶಯವಾಗಿ ಅವಮಾನಕರವಾಗಿದೆ” ಎಂದು ಕೋರ್ಟ್ ಎಚ್ಚರಿಸಿದೆ.

ಅಪ್ರಾಪ್ತ ಬಾಲಕಿಗೆ ಬೀದಿಯಲ್ಲಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿನಾಯಿತಿ ತೋರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಏಕೆಂದರೆ ರಸ್ತೆಬದಿಯ ರೋಮಿಯೋಗಳಿಗೆ ಪಾಠವನ್ನು ಕಲಿಸಬೇಕಾಗಿದೆ. ಇಂಥವರ ಅನೈತಿಕ ನಡವಳಿಕೆಯನ್ನು ತಪ್ಪಿಸಿ ಮಹಿಳೆಯರನ್ನು ರಕ್ಷಿಸಬೇಕಾಗಿದೆ” ಎಂದಿದೆ.

ಇದನ್ನೂ ಓದಿರಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಜುಲೈ 14, 2015ರಂದು ಸಂತ್ರಸ್ತೆ ಶಾಲೆಯಿಂದ ಹಿಂತಿರುಗುತ್ತಿದ್ದಾಗ, ಆರೋಪಿಯು ಆಕೆಯನ್ನು ‘ಐಟಂ’ ಎಂದು ಕರೆದಿದ್ದನು.

ತನಗೆ ಕಿರುಕುಳ ನೀಡಬೇಡಿ ಎಂದು ಬಾಲಕಿ ಕೋರಿದಾಗಲೂ, ಅವನು ಬಾಲಕಿಯನ್ನು ನಿಂದಿಸಲು ಪ್ರಾರಂಭಿಸಿದ್ದನು. ಜೊತೆಗೆ ಆಕೆಯ ತಲೆಗೂದಲನ್ನು ಎಳೆದಿದ್ದನು. ನಂತರ ಪೊಲೀಸ್ ಸಹಾಯವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಸಂತ್ರಸ್ತ ಬಾಲಕಿ ಸಹಾಯ ಕೋರಿದ್ದಳು.

ಪೊಲೀಸರು ಸ್ಥಳಕ್ಕೆ ಧಾವಿಸಿದರೂ ಆರೋಪಿ ಪರಾರಿಯಾಗಿದ್ದನು. ಬಾಲಕಿ ಮನೆಗೆ ತೆರಳಿ ತನ್ನ ತಂದೆಗೆ ವಿಷಯ ತಿಳಿಸಿದ್ದು, ಮುಂಬೈನ ಸಕಿನಾಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...