Homeಮುಖಪುಟಹೆಣ್ಣನ್ನು ‘ಐಟಂ’ ಎಂದು ಕರೆಯುವುದು ಅವಹೇಳನಕಾರಿ: ಮುಂಬೈ ಹೈಕೋರ್ಟ್

ಹೆಣ್ಣನ್ನು ‘ಐಟಂ’ ಎಂದು ಕರೆಯುವುದು ಅವಹೇಳನಕಾರಿ: ಮುಂಬೈ ಹೈಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದಕ್ಕಾಗಿ ಒಬ್ಬ ವ್ಯಕ್ತಿಗೆ ಒಂದೂವರೆ ವರ್ಷಗಳ ಜೈಲು ಶಿಕ್ಷೆಯನ್ನು ಮುಂಬೈನ ವಿಶೇಷ ನ್ಯಾಯಾಲಯವು ವಿಧಿಸಿದೆ. ಹೆಣ್ಣನ್ನು ‘ಐಟಂ’ ಎಂದು ಕರೆಯುವುದು ಅವಹೇಳನಕಾರಿಯಾಗಿದ್ದು, ಆಕೆಯನ್ನು ಲೈಂಗಿಕ ದೃಷ್ಟಿಯಲ್ಲಿ ಚಿತ್ರಿಸುತ್ತದೆ ಎಂದು ಎಚ್ಚರಿಸಿದೆ.

ಅಕ್ಟೋಬರ್ 20ರಂದು ನೀಡಲಾದ ಆದೇಶದಲ್ಲಿ, ನ್ಯಾಯಾಲಯವು ಆರೋಪಿಗೆ ಕರುಣೆ ತೋರಿಸಲು ಕೋರ್ಟ್ ನಿರಾಕರಿಸಿತು. ಇಂತಹ ಅನೈತಿಕ ನಡವಳಿಕೆ‌ ತಪ್ಪಿಸಿ ಮಹಿಳೆಯರನ್ನು ರಕ್ಷಿಸಲು “ರೋಡ್‌ ರೋಮಿಯೊ”ಗಳಿಗೆ ಪಾಠ ಕಲಿಸುವ ಅಗತ್ಯವಿದೆ ಎಂದು ಕೋರ್ಟ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ಎ ಜೆ ಅನ್ಸಾರಿ, 2015ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಯುವತಿಯನ್ನು ‘ಐಟಂ’ ಎಂದ ಅಪರಾಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಆರೋಪಿಯು ಉದ್ದೇಶಪೂರ್ವಕವಾಗಿ ಸಂತ್ರಸ್ತೆಯ ಕೂದಲನ್ನು ಹಿಡಿದು ಎಳೆದು ಆಕೆಯನ್ನು ‘ಐಟಂ’ ಎಂದು ಕರೆದಿದ್ದಾನೆ. ನನ್ನ ಅಭಿಪ್ರಾಯದಲ್ಲಿ ಇದು ಸಂತ್ರಸ್ತೆಯ ಮೇಲಿನ ದೌರ್ಜನ್ಯವನ್ನು ಸಾಬೀತುಪಡಿಸುತ್ತದೆ” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಆರೋಪಿಯ ವರ್ತನೆಯು “ಸಂಪೂರ್ಣವಾಗಿ ಅನುಚಿತವಾಗಿದೆ” ಎಂದು ನ್ಯಾಯಾಲಯವು ಗಮನಿಸಿದೆ.

ಆರೋಪಿಯು ಸಂತ್ರಸ್ತೆಯನ್ನು ಉದ್ದೇಶಿಸಿ ‘ಐಟಂ’ ಎಂಬ ಪದವನ್ನು ಬಳಸಿದ್ದಾನೆ. ಇದು ಸಾಮಾನ್ಯವಾಗಿ ಹೆಣ್ಣನ್ನು ಅವಹೇಳನಕಾರಿ ಶೈಲಿಯಲ್ಲಿ ಸಂಬೋಧಿಸಲು ಬಳಸುವ ಪದವಾಗಿದೆ. ಜೊತೆಗೆ ಲೈಂಗಿಕ ದೃಷ್ಟಿಕೋನದ್ದಾಗಿದೆ. ಇದು ಆಕೆಯ ನಮ್ರತೆಯನ್ನು ಕೆರಳಿಸುವ ಉದ್ದೇಶವನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

“ಯಾವುದೇ ಹೆಣ್ಣನ್ನು ಸಂಬೋಧಿಸಲು ‘ಐಟಂ’ ಎಂಬ ಪದವನ್ನು ಬಳಸುವುದು ನಿಸ್ಸಂಶಯವಾಗಿ ಅವಮಾನಕರವಾಗಿದೆ” ಎಂದು ಕೋರ್ಟ್ ಎಚ್ಚರಿಸಿದೆ.

ಅಪ್ರಾಪ್ತ ಬಾಲಕಿಗೆ ಬೀದಿಯಲ್ಲಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿನಾಯಿತಿ ತೋರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಏಕೆಂದರೆ ರಸ್ತೆಬದಿಯ ರೋಮಿಯೋಗಳಿಗೆ ಪಾಠವನ್ನು ಕಲಿಸಬೇಕಾಗಿದೆ. ಇಂಥವರ ಅನೈತಿಕ ನಡವಳಿಕೆಯನ್ನು ತಪ್ಪಿಸಿ ಮಹಿಳೆಯರನ್ನು ರಕ್ಷಿಸಬೇಕಾಗಿದೆ” ಎಂದಿದೆ.

ಇದನ್ನೂ ಓದಿರಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಜುಲೈ 14, 2015ರಂದು ಸಂತ್ರಸ್ತೆ ಶಾಲೆಯಿಂದ ಹಿಂತಿರುಗುತ್ತಿದ್ದಾಗ, ಆರೋಪಿಯು ಆಕೆಯನ್ನು ‘ಐಟಂ’ ಎಂದು ಕರೆದಿದ್ದನು.

ತನಗೆ ಕಿರುಕುಳ ನೀಡಬೇಡಿ ಎಂದು ಬಾಲಕಿ ಕೋರಿದಾಗಲೂ, ಅವನು ಬಾಲಕಿಯನ್ನು ನಿಂದಿಸಲು ಪ್ರಾರಂಭಿಸಿದ್ದನು. ಜೊತೆಗೆ ಆಕೆಯ ತಲೆಗೂದಲನ್ನು ಎಳೆದಿದ್ದನು. ನಂತರ ಪೊಲೀಸ್ ಸಹಾಯವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಸಂತ್ರಸ್ತ ಬಾಲಕಿ ಸಹಾಯ ಕೋರಿದ್ದಳು.

ಪೊಲೀಸರು ಸ್ಥಳಕ್ಕೆ ಧಾವಿಸಿದರೂ ಆರೋಪಿ ಪರಾರಿಯಾಗಿದ್ದನು. ಬಾಲಕಿ ಮನೆಗೆ ತೆರಳಿ ತನ್ನ ತಂದೆಗೆ ವಿಷಯ ತಿಳಿಸಿದ್ದು, ಮುಂಬೈನ ಸಕಿನಾಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...