Homeಕ್ರೀಡೆಕ್ರಿಕೆಟ್ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ...

ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿ ಅಭಿಮತ

ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ.

- Advertisement -
- Advertisement -

ಭಾರತದ ರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪುರುಷರ ತಂಡಕ್ಕೆ ನೀಡುತ್ತಿರುವಷ್ಟೇ ಸಮಾನ ವೇತನ ನೀಡುವುದಾಗಿ ಬಿಸಿಸಿಐ ತೀರ್ಮಾನ ತೆಗೆದುಕೊಂಡಿದೆ. ‘ಪೆ ಇಕ್ವಿಟಿ ಪಾಲಿಸಿ’ಯನ್ನು ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ಕೊನೆಗೂ ಫಲಿಸುತ್ತಿದೆ. ಈ ಯೋಜನೆಯು ದೇಶಿಯ ಮಹಿಳಾ ಆಟಗಾರ್ತಿಯರಿಗೂ ವಿಸ್ತರಿಸಬೇಕು ಎನ್ನುತ್ತಾರೆ ಭಾರತದ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿಯವರು.

ಭಾರತ ಮಹಿಳಾ ಟೆಸ್ಟ್ ಕ್ರಿಕೆಟ್ ತಂಡದ ಮೊದಲ ನಾಯಕಿ, ಅರ್ಜುನ ಪ್ರಶಸ್ತಿ ಪಡೆದ ಮೊದಲ ಮಹಿಳೆ, ಬಿಸಿಸಿಐನಿಂದ ಜೀವಮಾನದ ಸಾಧನೆ ಪ್ರಶಸ್ತಿ ಪಡೆದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡ ಶಾಂತ ರಂಗಸ್ವಾಮಿಯವರು ಬಿಸಿಸಿಐ ನಿರ್ಧಾರದ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

“ಬಿಸಿಸಿಐ ಖಂಡಿತವಾಗಿಯೂ ಒಳ್ಳೆಯ ತೀರ್ಮಾನ ಕೈಗೊಂಡಿದೆ. ಇಂದಿನ ಸಭೆಯಲ್ಲಿ ನಾನು ಇದ್ದೆ. ಅದು ಬಿಸಿಸಿಐನಲ್ಲಿ ನನ್ನ ಕೊನೆಯ ಸಭೆಯಾಗಿತ್ತು. ಅಲ್ಲಿ ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ನೀಡುವ ತೀರ್ಮಾನ ತೆಗೆದುಕೊಂಡಿದ್ದು ನನಗೆ ಬಿಳ್ಕೊಡುಗೆ ಉಡುಗೊರೆಯಂತಿತ್ತು” ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಭಾರತಕ್ಕಿಂತ ಮುಂಚೆನೇ ಮಹಿಳಾ ಕ್ರಿಕೆಟ್ ತಂಡ ಕಟ್ಟಿದ್ದರು. ಆದರೂ ಅವರಿನ್ನು ಇಂತಹ ಸಮಾನ ವೇತನದ ತೀರ್ಮಾನ ತೆಗೆದುಕೊಂಡಿಲ್ಲ. ಆದರೆ ನ್ಯೂಜಿಲೆಂಡ್ ಮತ್ತು ಭಾರತ ಈ ನಿರ್ಧಾರ ತೆಗೆದುಕೊಂಡಿರುವುದು ನಾವು ಸರಿಯಾದ ದಿಕ್ಕಿನಲ್ಲಿ ಮುನ್ನಡೆಯುತ್ತಿರುವುದನ್ನು ತೋರಿಸುತ್ತದೆ ಎಂದರು.

ಆದರೆ ದೇಶೀಯ ಕ್ರಿಕೆಟ್ ಆಟಗಾರ್ತಿಯರಿಗೂ ಈ ಸೌಲಭ್ಯ ದೊರೆಯಬೇಕಿದೆ. ಏಕೆಂದರೆ ಇಂದಿನ ತೀರ್ಮಾನದಿಂದ ಬಿಸಿಸಿಐ ಜೊತೆ ಒಪ್ಪಂದ ಮಾಡಿಕೊಂಡಿರುವ 20-25 ಆಟಗಾರ್ತಿಯರಿಗೆ ಮಾತ್ರ ಸಮಾನ ವೇತನ ದೊರೆಯುತ್ತದೆ. ಆದರೆ ನಮ್ಮ ದೇಶೀಯ ಕ್ರಿಕೆಟ್‌ನಲ್ಲಿ ಆ ತೀರ್ಮಾನ ತೆಗೆದುಕೊಂಡರೆ ಸುಮಾರು 300-400 ಆಟಗಾರ್ತಿಯರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಇವತ್ತಿನ ಸಭೆಯಲ್ಲಿ ದೇಶೀಯ ಕ್ರಿಕೆಟ್‌ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕೆಂದು ಪ್ರಸ್ತಾಪಿಸಿದ್ದೇನೆ. ಹಂತ ಹಂತವಾಗಿ ಜಾರಿಗೊಳಿಸುವ ಭರವಸೆ ಸಿಕ್ಕಿದೆ. ಸದ್ಯದ ತೀರ್ಮಾನದಿಂದ ಬಿಸಿಸಿಐಗೆ ವಾರ್ಷಿಕ 10 ಕೋಟಿ ರೂ ಹೆಚ್ಚು ಖರ್ಚು ಬರುತ್ತದೆ. ಆದರೆ ದೇಶೀಯ ಆಟಗಾರ್ತಿಯರಿಗೂ ವಿಸ್ತರಿಸಿದರೆ ಸುಮಾರು 50 ಕೋಟಿ ರೂವರೆಗೂ ಹೆಚ್ಚಿನ ಖರ್ಚು ಬರುತ್ತದೆ. ಅದಕ್ಕಾಗಿ ಬಿಸಿಸಿಐ ಹಣ ಒದಗಿಸುವ ಯೋಜನೆ ಮಾಡಬೇಕಿದೆ. ಒಟ್ಟಿನಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿಸಿಸಿಐ ಉತ್ತಮ ಹೆಜ್ಜೆ ಇಟ್ಟಿದೆ ಎಂದರು.

ಈ ತೀರ್ಮಾನದಿಂದ ಮತ್ತಷ್ಟು ಮಹಿಳೆಯರು ಭಾರತೀಯ ತಂಡಕ್ಕೆ ಆಡಬೇಕೆಂದು ಮುಂದೆ ಬರುತ್ತಾರೆ. ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಮಹಿಳಾ ಐಪಿಎಲ್ ಸ್ವಾಹತಾರ್ಹ ನಡೆ

2023ರಲ್ಲಿ ಮಹಿಳಾ ಐಪಿಎಲ್ ಆಯೋಜಿಸುತ್ತಿರುವುದು ಬಹಳ ಸ್ವಾಗತಾರ್ಹ ಕ್ರಮವಾಗಿದೆ. ಆರಂಭದಲ್ಲಿ 5 ತಂಡಗಳು ಇರುವುದರಿಂದ ಕನಿಷ್ಟ 50 ರಿಂದ 60 ಭಾರತೀಯ ಆಟಗಾರ್ತಿಯರ ಪ್ರತಿಭೆ ಗುರುತಿಸಲು ಅದು ವೇದಿಕೆಯಾಗುತ್ತದೆ. ಅವರೆಲ್ಲವರೂ ಅಂತರಾಷ್ಟ್ರೀಯ ಆಟಗಾರರ ಜೊತೆ ಆಡುವ ಅವಕಾಶ ಸಿಗುತ್ತದೆ ಮತ್ತು ಅಲ್ಲಿನ ವೇತನವೂ ಹೆಚ್ಚಿರುವುದು ಮಹಿಳಾ ಆಟಗಾರ್ತಿಯರಿಗೆ ಅತ್ಯುತ್ತಮ ಪ್ರೋತ್ಸಾಹವಾಗಿದೆ ಎಂದರು.

ದೇಶೀಯ ಕ್ರಿಕೆಟ್‌ನಲ್ಲಿ ಸೀನಿಯರ್ ಆಟಗಾರ್ತಿಯರಿಗೆ ದಿನಕ್ಕೆ 12,500 ರೂ ನಷ್ಟು ಮಾತ್ರ ವೇತನವಿದೆ. ಜೂನಿಯರ್‌ಗಳಿಗೆ ಅದರಲ್ಲಿ ಅರ್ಧ ಇದೆ. ಇಂತಹ ಪರಿಸ್ಥಿತಿಯಲ್ಲಿ ಅವರು ತಮ್ಮ ಸ್ವಂತ ಹಣ ಖರ್ಚು ಮಾಡಿ ತರಬೇತಿ ಪಡೆದು ಆಡುವುದು ಕಷ್ಟದ ಕೆಲಸ. ಹಾಗಾಗಿ ಐಪಿಎಲ್ ನಿಂದ ಅವರಿಗೆಲ್ಲ ಅನುಕೂಲವಾಗಲಿದೆ ಎಂದರು.

ಭಾರತೀಯ ಮಹಿಳಾ ತಂಡ 2005ರಲ್ಲಿಯೇ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿತ್ತು. ಬಿಸಿಸಿಐ ನೊಂದಿಗೆ ವಿಲೀನಗೊಂಡ ನಂತರ ಮಹಿಳಾ ತಂಡಕ್ಕೆ ಹೆಚ್ಚಿನ ಪ್ರಚಾರ ಸಿಗುತ್ತಿದೆ. 2020ರಲ್ಲಿ ಟಿ20 ಮಹಿಳಾ ವಿಶ್ವಕಪ್ ನಲ್ಲಿ ಫೈನಲ್ ತಲುಪಿತ್ತು. ಇತ್ತೀಚೆಗೆ ಏಷ್ಯಾ ಕಪ್ ಗೆದ್ದಿದೆ. ಹಾಗಾಗಿ ಮಹಿಳಾ ತಂಡ ಉತ್ತಮ ಪ್ರದರ್ಶನ ತೋರುತ್ತಿರುವಾಗಲೇ ಸಮಾನ ವೇತನ ಜಾರಿಯಾಗಿದ್ದು, ಮಹಿಳಾ ಐಪಿಎಲ್ ಘೋಷಣೆಯಾಗಿದ್ದು ಸಂತಸದ ವಿಚಾರ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡ ಮಹಿಳಾ ಆಟಗಾರ್ತಿಯರು ಸಹ ಇನ್ನು ಮುಂದೆ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ, ಏಕದಿನ ಪಂದ್ಯಕ್ಕೆ 6 ಲಕ್ಷ ರೂ ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ ಪಡೆಯಲಿದ್ದಾರೆ. ಈ ನಿಯಮವೂ ದೇಶೀಯ ಕ್ರಿಕೆಟ್‌ನಲ್ಲಿಯೂ ಜಾರಿಯಾದರೆ ಭಾರತದಂತಹ ದೊಡ್ಡ ದೇಶದಲ್ಲಿ ಮತ್ತಷ್ಟು ಕ್ರಿಕೆಟ್ ಪ್ರತಿಭೆಗಳು ಹೊರಬರುವುದು ಖಚಿತ.

ಇದನ್ನೂ ಓದಿ: ಪುರುಷ-ಮಹಿಳಾ ಕ್ರಿಕೆಟರ್‌ಗಳಿಬ್ಬರಿಗೂ ಸಮಾನ ವೇತನ: ಬಿಸಿಸಿಐ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...