Homeಕ್ರೀಡೆಕ್ರಿಕೆಟ್ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ...

ದೇಶೀಯ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕು : ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿ ಅಭಿಮತ

ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ.

- Advertisement -
- Advertisement -

ಭಾರತದ ರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪುರುಷರ ತಂಡಕ್ಕೆ ನೀಡುತ್ತಿರುವಷ್ಟೇ ಸಮಾನ ವೇತನ ನೀಡುವುದಾಗಿ ಬಿಸಿಸಿಐ ತೀರ್ಮಾನ ತೆಗೆದುಕೊಂಡಿದೆ. ‘ಪೆ ಇಕ್ವಿಟಿ ಪಾಲಿಸಿ’ಯನ್ನು ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ಕೊನೆಗೂ ಫಲಿಸುತ್ತಿದೆ. ಈ ಯೋಜನೆಯು ದೇಶಿಯ ಮಹಿಳಾ ಆಟಗಾರ್ತಿಯರಿಗೂ ವಿಸ್ತರಿಸಬೇಕು ಎನ್ನುತ್ತಾರೆ ಭಾರತದ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತ ರಂಗಸ್ವಾಮಿಯವರು.

ಭಾರತ ಮಹಿಳಾ ಟೆಸ್ಟ್ ಕ್ರಿಕೆಟ್ ತಂಡದ ಮೊದಲ ನಾಯಕಿ, ಅರ್ಜುನ ಪ್ರಶಸ್ತಿ ಪಡೆದ ಮೊದಲ ಮಹಿಳೆ, ಬಿಸಿಸಿಐನಿಂದ ಜೀವಮಾನದ ಸಾಧನೆ ಪ್ರಶಸ್ತಿ ಪಡೆದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡ ಶಾಂತ ರಂಗಸ್ವಾಮಿಯವರು ಬಿಸಿಸಿಐ ನಿರ್ಧಾರದ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

“ಬಿಸಿಸಿಐ ಖಂಡಿತವಾಗಿಯೂ ಒಳ್ಳೆಯ ತೀರ್ಮಾನ ಕೈಗೊಂಡಿದೆ. ಇಂದಿನ ಸಭೆಯಲ್ಲಿ ನಾನು ಇದ್ದೆ. ಅದು ಬಿಸಿಸಿಐನಲ್ಲಿ ನನ್ನ ಕೊನೆಯ ಸಭೆಯಾಗಿತ್ತು. ಅಲ್ಲಿ ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ನೀಡುವ ತೀರ್ಮಾನ ತೆಗೆದುಕೊಂಡಿದ್ದು ನನಗೆ ಬಿಳ್ಕೊಡುಗೆ ಉಡುಗೊರೆಯಂತಿತ್ತು” ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಭಾರತಕ್ಕಿಂತ ಮುಂಚೆನೇ ಮಹಿಳಾ ಕ್ರಿಕೆಟ್ ತಂಡ ಕಟ್ಟಿದ್ದರು. ಆದರೂ ಅವರಿನ್ನು ಇಂತಹ ಸಮಾನ ವೇತನದ ತೀರ್ಮಾನ ತೆಗೆದುಕೊಂಡಿಲ್ಲ. ಆದರೆ ನ್ಯೂಜಿಲೆಂಡ್ ಮತ್ತು ಭಾರತ ಈ ನಿರ್ಧಾರ ತೆಗೆದುಕೊಂಡಿರುವುದು ನಾವು ಸರಿಯಾದ ದಿಕ್ಕಿನಲ್ಲಿ ಮುನ್ನಡೆಯುತ್ತಿರುವುದನ್ನು ತೋರಿಸುತ್ತದೆ ಎಂದರು.

ಆದರೆ ದೇಶೀಯ ಕ್ರಿಕೆಟ್ ಆಟಗಾರ್ತಿಯರಿಗೂ ಈ ಸೌಲಭ್ಯ ದೊರೆಯಬೇಕಿದೆ. ಏಕೆಂದರೆ ಇಂದಿನ ತೀರ್ಮಾನದಿಂದ ಬಿಸಿಸಿಐ ಜೊತೆ ಒಪ್ಪಂದ ಮಾಡಿಕೊಂಡಿರುವ 20-25 ಆಟಗಾರ್ತಿಯರಿಗೆ ಮಾತ್ರ ಸಮಾನ ವೇತನ ದೊರೆಯುತ್ತದೆ. ಆದರೆ ನಮ್ಮ ದೇಶೀಯ ಕ್ರಿಕೆಟ್‌ನಲ್ಲಿ ಆ ತೀರ್ಮಾನ ತೆಗೆದುಕೊಂಡರೆ ಸುಮಾರು 300-400 ಆಟಗಾರ್ತಿಯರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಇವತ್ತಿನ ಸಭೆಯಲ್ಲಿ ದೇಶೀಯ ಕ್ರಿಕೆಟ್‌ ಆಟಗಾರ್ತಿಯರಿಗೂ ಸಮಾನ ವೇತನ ಸಿಗಬೇಕೆಂದು ಪ್ರಸ್ತಾಪಿಸಿದ್ದೇನೆ. ಹಂತ ಹಂತವಾಗಿ ಜಾರಿಗೊಳಿಸುವ ಭರವಸೆ ಸಿಕ್ಕಿದೆ. ಸದ್ಯದ ತೀರ್ಮಾನದಿಂದ ಬಿಸಿಸಿಐಗೆ ವಾರ್ಷಿಕ 10 ಕೋಟಿ ರೂ ಹೆಚ್ಚು ಖರ್ಚು ಬರುತ್ತದೆ. ಆದರೆ ದೇಶೀಯ ಆಟಗಾರ್ತಿಯರಿಗೂ ವಿಸ್ತರಿಸಿದರೆ ಸುಮಾರು 50 ಕೋಟಿ ರೂವರೆಗೂ ಹೆಚ್ಚಿನ ಖರ್ಚು ಬರುತ್ತದೆ. ಅದಕ್ಕಾಗಿ ಬಿಸಿಸಿಐ ಹಣ ಒದಗಿಸುವ ಯೋಜನೆ ಮಾಡಬೇಕಿದೆ. ಒಟ್ಟಿನಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿಸಿಸಿಐ ಉತ್ತಮ ಹೆಜ್ಜೆ ಇಟ್ಟಿದೆ ಎಂದರು.

ಈ ತೀರ್ಮಾನದಿಂದ ಮತ್ತಷ್ಟು ಮಹಿಳೆಯರು ಭಾರತೀಯ ತಂಡಕ್ಕೆ ಆಡಬೇಕೆಂದು ಮುಂದೆ ಬರುತ್ತಾರೆ. ಬಿಸಿಸಿಐನಿಂದ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಷ್ಟು ಪೋಷಕರ ಹೊರೆ ಕಡಿಮೆಯಾಗುತ್ತದೆ. ಆಗ ಬಹಳಷ್ಟು ಆಟಗಾರ್ತಿಯರು ಹುಟ್ಟಿಕೊಳ್ಳುತ್ತಾರೆ. ಹಾಗಾಗಿ ಇದೊಂದು ಅದ್ಭುತವಾದ ತೀರ್ಮಾನ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಮಹಿಳಾ ಐಪಿಎಲ್ ಸ್ವಾಹತಾರ್ಹ ನಡೆ

2023ರಲ್ಲಿ ಮಹಿಳಾ ಐಪಿಎಲ್ ಆಯೋಜಿಸುತ್ತಿರುವುದು ಬಹಳ ಸ್ವಾಗತಾರ್ಹ ಕ್ರಮವಾಗಿದೆ. ಆರಂಭದಲ್ಲಿ 5 ತಂಡಗಳು ಇರುವುದರಿಂದ ಕನಿಷ್ಟ 50 ರಿಂದ 60 ಭಾರತೀಯ ಆಟಗಾರ್ತಿಯರ ಪ್ರತಿಭೆ ಗುರುತಿಸಲು ಅದು ವೇದಿಕೆಯಾಗುತ್ತದೆ. ಅವರೆಲ್ಲವರೂ ಅಂತರಾಷ್ಟ್ರೀಯ ಆಟಗಾರರ ಜೊತೆ ಆಡುವ ಅವಕಾಶ ಸಿಗುತ್ತದೆ ಮತ್ತು ಅಲ್ಲಿನ ವೇತನವೂ ಹೆಚ್ಚಿರುವುದು ಮಹಿಳಾ ಆಟಗಾರ್ತಿಯರಿಗೆ ಅತ್ಯುತ್ತಮ ಪ್ರೋತ್ಸಾಹವಾಗಿದೆ ಎಂದರು.

ದೇಶೀಯ ಕ್ರಿಕೆಟ್‌ನಲ್ಲಿ ಸೀನಿಯರ್ ಆಟಗಾರ್ತಿಯರಿಗೆ ದಿನಕ್ಕೆ 12,500 ರೂ ನಷ್ಟು ಮಾತ್ರ ವೇತನವಿದೆ. ಜೂನಿಯರ್‌ಗಳಿಗೆ ಅದರಲ್ಲಿ ಅರ್ಧ ಇದೆ. ಇಂತಹ ಪರಿಸ್ಥಿತಿಯಲ್ಲಿ ಅವರು ತಮ್ಮ ಸ್ವಂತ ಹಣ ಖರ್ಚು ಮಾಡಿ ತರಬೇತಿ ಪಡೆದು ಆಡುವುದು ಕಷ್ಟದ ಕೆಲಸ. ಹಾಗಾಗಿ ಐಪಿಎಲ್ ನಿಂದ ಅವರಿಗೆಲ್ಲ ಅನುಕೂಲವಾಗಲಿದೆ ಎಂದರು.

ಭಾರತೀಯ ಮಹಿಳಾ ತಂಡ 2005ರಲ್ಲಿಯೇ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿತ್ತು. ಬಿಸಿಸಿಐ ನೊಂದಿಗೆ ವಿಲೀನಗೊಂಡ ನಂತರ ಮಹಿಳಾ ತಂಡಕ್ಕೆ ಹೆಚ್ಚಿನ ಪ್ರಚಾರ ಸಿಗುತ್ತಿದೆ. 2020ರಲ್ಲಿ ಟಿ20 ಮಹಿಳಾ ವಿಶ್ವಕಪ್ ನಲ್ಲಿ ಫೈನಲ್ ತಲುಪಿತ್ತು. ಇತ್ತೀಚೆಗೆ ಏಷ್ಯಾ ಕಪ್ ಗೆದ್ದಿದೆ. ಹಾಗಾಗಿ ಮಹಿಳಾ ತಂಡ ಉತ್ತಮ ಪ್ರದರ್ಶನ ತೋರುತ್ತಿರುವಾಗಲೇ ಸಮಾನ ವೇತನ ಜಾರಿಯಾಗಿದ್ದು, ಮಹಿಳಾ ಐಪಿಎಲ್ ಘೋಷಣೆಯಾಗಿದ್ದು ಸಂತಸದ ವಿಚಾರ ಎನ್ನುತ್ತಾರೆ ಶಾಂತ ರಂಗಸ್ವಾಮಿಯವರು.

ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡ ಮಹಿಳಾ ಆಟಗಾರ್ತಿಯರು ಸಹ ಇನ್ನು ಮುಂದೆ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ, ಏಕದಿನ ಪಂದ್ಯಕ್ಕೆ 6 ಲಕ್ಷ ರೂ ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ ಪಡೆಯಲಿದ್ದಾರೆ. ಈ ನಿಯಮವೂ ದೇಶೀಯ ಕ್ರಿಕೆಟ್‌ನಲ್ಲಿಯೂ ಜಾರಿಯಾದರೆ ಭಾರತದಂತಹ ದೊಡ್ಡ ದೇಶದಲ್ಲಿ ಮತ್ತಷ್ಟು ಕ್ರಿಕೆಟ್ ಪ್ರತಿಭೆಗಳು ಹೊರಬರುವುದು ಖಚಿತ.

ಇದನ್ನೂ ಓದಿ: ಪುರುಷ-ಮಹಿಳಾ ಕ್ರಿಕೆಟರ್‌ಗಳಿಬ್ಬರಿಗೂ ಸಮಾನ ವೇತನ: ಬಿಸಿಸಿಐ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....