Homeಕ್ರೀಡೆಕ್ರಿಕೆಟ್ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಸೂಪರ್ 12ರ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಪಾಕಿಸ್ತಾನಕ್ಕೆ ಆಘಾತಕಾರಿ ಸೋಲುಣಿಸಿದೆ. ಸತತ ಎರಡನೇ ಸೋಲು ಕಂಡಿರುವ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ದುರ್ಗಮವಾಗಿದೆ.

ಗೆಲ್ಲಲು 131 ರನ್‌ಗಳ ಸಾಧಾರಣ ಗುರಿ ಪಡೆದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 129 ರನ್‌ಗಳನ್ನಷ್ಟೆ ಗಳಿಸಲು ಸಾಧ್ಯವಾಯಿತು. ಆ ಮೂಲಕ 1 ರನ್‌ಗಳ ಸೋಲೊಪ್ಪಿಕೊಂಡಿತು.

ಕೊನೆಯ ಓವರ್‌ನಲ್ಲಿ ಗೆಲ್ಲಲು ಪಾಕಿಸ್ತಾನಕ್ಕೆ 11 ರನ್‌ಗಳ ಅಗತ್ಯವಿತ್ತು. ಬ್ರಾಡ್ ಇವನ್ ಎಸೆದ ಮೊದಲ ಎಸೆತದಲ್ಲಿ ಪಾಕಿಸ್ತಾನದ ಬ್ಯಾಟರ್ ಮೊಹಮ್ಮದ್ ನವಾಜ್ 3 ರನ್ ಗಳಿಸಿದರು. ಎರಡನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ ಬೌಂಡರಿ ಗಳಿಸಿದರು. ಅಲ್ಲಿಗೆ ನಾಲ್ಕು ಎಸೆತಗಳಲ್ಲಿ 4 ರನ್ ಮಾತ್ರ ಅಗತ್ಯವಿತ್ತು.

ಮೂರನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ 1 ರನ್ ಗಳಿಸಿದರು. ನಾಲ್ಕನೇ ಎಸೆತದಲ್ಲಿ ಮೊಹಮ್ಮದ್ ನವಾಜ್ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಐದನೇ ಎಸೆತದಲ್ಲಿ ಕ್ಯಾಚಿತ್ತು ಔಟಾದರು. ಕೊನೆ ಬಾಲ್‌ನಲ್ಲಿ ಪಾಕಿಸ್ತಾನ 3 ರನ್ ಗಳಿಸಬೇಕಿತ್ತು. ಶಾಹೀನ್ ಅಫ್ರಿದಿ ಸ್ಟ್ರೈಕರ್‌ನಲ್ಲಿದ್ದರು. ನೇರ ಹೊಡೆದ ಬಾಲ್ ಫೀಲ್ಡರ್ ಕೈ ತಲುಪಿತು. ಎರಡನೇ ರನ್ ಓಡುತ್ತಿದ್ದ ಶಾಹೀನ್ ಅಫ್ರಿದಿ ರನ್ ಔಟಾದರು. ಅಲ್ಲಿಗೆ ಜಿಂಬಾಬ್ವೆ 1 ರನ್‌ಗಳ ರೋಚಕ ಗೆಲುವು ದಾಖಲಿಸಿತು.

ಇದಕ್ಕೂ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು.

ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲನೇ ಗುಂಪಿನ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು  ಐರ್ಲೆಂಡ್ ಮಣಿಸಿತ್ತು. ಅದಕ್ಕೂ ಮೊದಲು ಅರ್ಹತಾ ಸುತ್ತಿನಲ್ಲಿ 2 ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳುಹಿಸಿತ್ತು. ಅದೇ ರೀತಿ ಇಂದು ಬಲಿಷ್ಠ ಪಾಕಿಸ್ತಾನವನ್ನು ಜಿಂಬಾಬ್ವೆ ಸೋಲಿಸಿದೆ. ಸಣ್ಣ ತಂಡಗಳು ಯಾವುದೇ ಒತ್ತಡವಿಲ್ಲದೆ ಆಡಿ ಬಲಿಷ್ಟ ತಂಡಗಳನ್ನು ಮಣಿಸುತ್ತಿವೆ.

ಇದನ್ನೂ ಓದಿ: ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಭಾರತದ ಎದುರು ಸೋಲು ಕಂಡಿದ್ದ ಪಾಕಿಸ್ತಾನ ಈಗ ಜಿಂಬಾಬ್ವೆ ವಿರುದ್ದವೂ ಸೋತಿದೆ. ಇನ್ನೊಂದೆಡೆ 2ನೇ ಗ್ರೂಪ್‌ನಲ್ಲಿ ಎರಡು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದೆ. ಭಾರತ ಎರಡು ಗೆಲುವಿನೊಂದಿಗೆ ಮುಂದಿದೆ. ದಕ್ಷಿಣ ಆಫ್ರಿಕಾ ತಂಡ ಒಂದು ಗೆಲುವು ಒಂದು ಟೈನೊಂದಿಗೆ 3 ಅಂಕ ಗಳಿಸಿದೆ. ಹಾಗಾಗಿ ಪಾಕಿಸ್ತಾನದ ಸೆಮಿಫೈನಲ್ ಹಾದಿ ದುರ್ಗಮ ಅಂತಲೇ ಹೇಳಬೇಕಿದೆ.

ಪಾಕಿಸ್ತಾನ ತಂಡ ಮೊದಲನೇ ಪಂದ್ಯದಲ್ಲಿಯೂ ಸಹ ಭಾರತದ ಎದುರು ಗೆಲುವಿನ ಸನಿಹಕ್ಕೆ ಬಂದು ಎಡವಿತ್ತು. ಕೊನೆಯ ಓವರ್‌ನಲ್ಲಿ 16 ರನ್ ಬಿಟ್ಟುಕೊಟ್ಟು ಕೊನೆಯ ಎಸೆತದಲ್ಲಿ ಸೋಲೊಪ್ಪಿಕೊಂಡರು. ಇಂದು ಅದೇ ಪುನಾರಾವರ್ತನೆ ಆಯಿತು. ಬ್ಯಾಟಿಂಗ್‌ನಲ್ಲಿ ಕೊನೆಯವರೆಗೂ ತಲುಪಿ ಒಂದು ರನ್‌ನಿಂದ ಸೋಲು ಕಂಡರು.

ಪಾಕಿಸ್ತಾನಕ್ಕೆ ಸೂಪರ್ 12 ಹಂತದಲ್ಲಿ ಕೊನೆಯ ಮೂರು ಪಂದ್ಯಗಳು ಬಾಕಿ ಇವೆ. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ವಿರುದ್ದ ಪಾಕ್ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸತತ ಸೋತರೆ ಮಾತ್ರ ಪಾಕಿಸ್ತಾನಕ್ಕೆ ಸೆಮಿಫೈನಲ್ ಅವಕಾಶವಿದೆ. ಅದರೆ ಅದು ಅಷ್ಟು ಸುಲಭವಲ್ಲ.

ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ 5ಕ್ಕೆ 5 ಪಂದ್ಯ ಗೆದ್ದು ಸೆಮಿಫೈನಲ್ ತಲುಪಿತ್ತು. ಆದರೆ ಅಲ್ಲಿ ಆಸ್ಟ್ರೇಲಿಯಾದ ಎದುರು ಸೋಲನ್ನು ಅನುಭವಿಸಿತ್ತು. ಆದರೆ ಈ ಬಾರಿ ಸೆಮಿಫೈನಲ್ ತಲುಪುವುದು ದುಸ್ತರವಾಗಿದೆ.

ಪಾಕಿಸ್ತಾನದ ಸೋಲಿನಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಸೆಮಿಫೈನಲ್ ಹಾದಿ ಮತ್ತಷ್ಟು ಸುಲಭವಾಗಲಿದೆ. ನವೆಂಬರ್ 03 ರಂದು ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕ ತಂಡದ ನಡುವಿನ ಪಂದ್ಯ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....