Homeಕ್ರೀಡೆಕ್ರಿಕೆಟ್ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಸೂಪರ್ 12ರ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಪಾಕಿಸ್ತಾನಕ್ಕೆ ಆಘಾತಕಾರಿ ಸೋಲುಣಿಸಿದೆ. ಸತತ ಎರಡನೇ ಸೋಲು ಕಂಡಿರುವ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ದುರ್ಗಮವಾಗಿದೆ.

ಗೆಲ್ಲಲು 131 ರನ್‌ಗಳ ಸಾಧಾರಣ ಗುರಿ ಪಡೆದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 129 ರನ್‌ಗಳನ್ನಷ್ಟೆ ಗಳಿಸಲು ಸಾಧ್ಯವಾಯಿತು. ಆ ಮೂಲಕ 1 ರನ್‌ಗಳ ಸೋಲೊಪ್ಪಿಕೊಂಡಿತು.

ಕೊನೆಯ ಓವರ್‌ನಲ್ಲಿ ಗೆಲ್ಲಲು ಪಾಕಿಸ್ತಾನಕ್ಕೆ 11 ರನ್‌ಗಳ ಅಗತ್ಯವಿತ್ತು. ಬ್ರಾಡ್ ಇವನ್ ಎಸೆದ ಮೊದಲ ಎಸೆತದಲ್ಲಿ ಪಾಕಿಸ್ತಾನದ ಬ್ಯಾಟರ್ ಮೊಹಮ್ಮದ್ ನವಾಜ್ 3 ರನ್ ಗಳಿಸಿದರು. ಎರಡನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ ಬೌಂಡರಿ ಗಳಿಸಿದರು. ಅಲ್ಲಿಗೆ ನಾಲ್ಕು ಎಸೆತಗಳಲ್ಲಿ 4 ರನ್ ಮಾತ್ರ ಅಗತ್ಯವಿತ್ತು.

ಮೂರನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ 1 ರನ್ ಗಳಿಸಿದರು. ನಾಲ್ಕನೇ ಎಸೆತದಲ್ಲಿ ಮೊಹಮ್ಮದ್ ನವಾಜ್ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಐದನೇ ಎಸೆತದಲ್ಲಿ ಕ್ಯಾಚಿತ್ತು ಔಟಾದರು. ಕೊನೆ ಬಾಲ್‌ನಲ್ಲಿ ಪಾಕಿಸ್ತಾನ 3 ರನ್ ಗಳಿಸಬೇಕಿತ್ತು. ಶಾಹೀನ್ ಅಫ್ರಿದಿ ಸ್ಟ್ರೈಕರ್‌ನಲ್ಲಿದ್ದರು. ನೇರ ಹೊಡೆದ ಬಾಲ್ ಫೀಲ್ಡರ್ ಕೈ ತಲುಪಿತು. ಎರಡನೇ ರನ್ ಓಡುತ್ತಿದ್ದ ಶಾಹೀನ್ ಅಫ್ರಿದಿ ರನ್ ಔಟಾದರು. ಅಲ್ಲಿಗೆ ಜಿಂಬಾಬ್ವೆ 1 ರನ್‌ಗಳ ರೋಚಕ ಗೆಲುವು ದಾಖಲಿಸಿತು.

ಇದಕ್ಕೂ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು.

ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲನೇ ಗುಂಪಿನ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು  ಐರ್ಲೆಂಡ್ ಮಣಿಸಿತ್ತು. ಅದಕ್ಕೂ ಮೊದಲು ಅರ್ಹತಾ ಸುತ್ತಿನಲ್ಲಿ 2 ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳುಹಿಸಿತ್ತು. ಅದೇ ರೀತಿ ಇಂದು ಬಲಿಷ್ಠ ಪಾಕಿಸ್ತಾನವನ್ನು ಜಿಂಬಾಬ್ವೆ ಸೋಲಿಸಿದೆ. ಸಣ್ಣ ತಂಡಗಳು ಯಾವುದೇ ಒತ್ತಡವಿಲ್ಲದೆ ಆಡಿ ಬಲಿಷ್ಟ ತಂಡಗಳನ್ನು ಮಣಿಸುತ್ತಿವೆ.

ಇದನ್ನೂ ಓದಿ: ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಭಾರತದ ಎದುರು ಸೋಲು ಕಂಡಿದ್ದ ಪಾಕಿಸ್ತಾನ ಈಗ ಜಿಂಬಾಬ್ವೆ ವಿರುದ್ದವೂ ಸೋತಿದೆ. ಇನ್ನೊಂದೆಡೆ 2ನೇ ಗ್ರೂಪ್‌ನಲ್ಲಿ ಎರಡು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದೆ. ಭಾರತ ಎರಡು ಗೆಲುವಿನೊಂದಿಗೆ ಮುಂದಿದೆ. ದಕ್ಷಿಣ ಆಫ್ರಿಕಾ ತಂಡ ಒಂದು ಗೆಲುವು ಒಂದು ಟೈನೊಂದಿಗೆ 3 ಅಂಕ ಗಳಿಸಿದೆ. ಹಾಗಾಗಿ ಪಾಕಿಸ್ತಾನದ ಸೆಮಿಫೈನಲ್ ಹಾದಿ ದುರ್ಗಮ ಅಂತಲೇ ಹೇಳಬೇಕಿದೆ.

ಪಾಕಿಸ್ತಾನ ತಂಡ ಮೊದಲನೇ ಪಂದ್ಯದಲ್ಲಿಯೂ ಸಹ ಭಾರತದ ಎದುರು ಗೆಲುವಿನ ಸನಿಹಕ್ಕೆ ಬಂದು ಎಡವಿತ್ತು. ಕೊನೆಯ ಓವರ್‌ನಲ್ಲಿ 16 ರನ್ ಬಿಟ್ಟುಕೊಟ್ಟು ಕೊನೆಯ ಎಸೆತದಲ್ಲಿ ಸೋಲೊಪ್ಪಿಕೊಂಡರು. ಇಂದು ಅದೇ ಪುನಾರಾವರ್ತನೆ ಆಯಿತು. ಬ್ಯಾಟಿಂಗ್‌ನಲ್ಲಿ ಕೊನೆಯವರೆಗೂ ತಲುಪಿ ಒಂದು ರನ್‌ನಿಂದ ಸೋಲು ಕಂಡರು.

ಪಾಕಿಸ್ತಾನಕ್ಕೆ ಸೂಪರ್ 12 ಹಂತದಲ್ಲಿ ಕೊನೆಯ ಮೂರು ಪಂದ್ಯಗಳು ಬಾಕಿ ಇವೆ. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ವಿರುದ್ದ ಪಾಕ್ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸತತ ಸೋತರೆ ಮಾತ್ರ ಪಾಕಿಸ್ತಾನಕ್ಕೆ ಸೆಮಿಫೈನಲ್ ಅವಕಾಶವಿದೆ. ಅದರೆ ಅದು ಅಷ್ಟು ಸುಲಭವಲ್ಲ.

ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ 5ಕ್ಕೆ 5 ಪಂದ್ಯ ಗೆದ್ದು ಸೆಮಿಫೈನಲ್ ತಲುಪಿತ್ತು. ಆದರೆ ಅಲ್ಲಿ ಆಸ್ಟ್ರೇಲಿಯಾದ ಎದುರು ಸೋಲನ್ನು ಅನುಭವಿಸಿತ್ತು. ಆದರೆ ಈ ಬಾರಿ ಸೆಮಿಫೈನಲ್ ತಲುಪುವುದು ದುಸ್ತರವಾಗಿದೆ.

ಪಾಕಿಸ್ತಾನದ ಸೋಲಿನಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಸೆಮಿಫೈನಲ್ ಹಾದಿ ಮತ್ತಷ್ಟು ಸುಲಭವಾಗಲಿದೆ. ನವೆಂಬರ್ 03 ರಂದು ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕ ತಂಡದ ನಡುವಿನ ಪಂದ್ಯ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...