Homeರಾಷ್ಟ್ರೀಯರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ...

ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಈ ರೀತಿಯ ಪದ್ದತಿಗಳು ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ವರದಿಯಾಗಿದೆ

- Advertisement -
- Advertisement -

ಹಣಕಾಸಿನ ವಹಿವಾಟುಗಳು, ಸಾಲಗಳ ಮರು ಪಾವತಿ ಸೇರಿದಂತೆ ತಮ್ಮ ವಿವಾದಗಳನ್ನು ಪರಿಹರಿಸುವ ಸಲುವಾಗಿ ಸ್ಟಾಂಪ್‌ ಪೇಪರ್‌‌ಗಳಲ್ಲಿ ಒಪ್ಪಂದ ನಡೆಸಿ 8 ರಿಂದ18 ವರ್ಷದೊಳಗಿನ ಹುಡುಗಿಯರನ್ನು ಮಾರಾಟ ಮಾಡುತ್ತಿರುವ ಅಘಾತಕಾರಿ ಘಟನೆ ರಾಜಸ್ಥಾನದ ಸುಮಾರು ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ದೈನಿಕ್ ಭಾಸ್ಕರ್‌ ದಿನಪತ್ರಿಕೆ ವರದಿ ಮಾಡಿದೆ.

ಹುಡುಗಿಯರ ಮಾರಾಟಕ್ಕೆ ನಿರಾಕರಿಸಿದರೆ ಗ್ರಾಮದ ಜಾತಿ ಮಂಡಳಿಗಳ ಆದೇಶದ ಮೇರೆಗೆ ಹುಡುಗಿಯರ ತಾಯಂದಿರ ಮೇಲೆ ಅತ್ಯಾಚಾರ ನಡೆಸಿ ಅದನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ವರದಿ ಹೇಳಿದೆ. ರಾಜ್ಯದ ಭಿಲ್ವಾರದಂತಹ ಸ್ಥಳಗಳಲ್ಲಿನ ಜನರು ತಮ್ಮ ವಿವಾದಗಳನ್ನು ಪೋಲೀಸರ ಬಳಿಗೆ ಹೋಗುವ ಬದಲು ಜಾತಿ ಮಂಡಳಿಗಳನ್ನು ಸಂಪರ್ಕಿಸುತ್ತಾರೆ ಎಂದು ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರಾಟವಾದ ಹುಡುಗಿಯರನ್ನು ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ದೆಹಲಿ ಮತ್ತು ವಿದೇಶಗಳಿಗೆ ಕಳುಹಿಸಲಾಗುತ್ತಿದೆ. ಗುಲಾಮಗಿರಿಗೆ ಒಳಗಾದ ಅವರ ಮೇಲೆ ದೈಹಿಕ ಕಿರುಕುಳ, ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗುತ್ತದೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ರಾಜಸ್ಥಾನ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ವ್ಯಕ್ತಿಯೊಬ್ಬ ತಾನು ಪಡೆದ 15 ಲಕ್ಷ ರೂ. ಸಾಲವನ್ನು ಮರು ಪಾವತಿಸಲು ತನ್ನ ಸಹೋದರಿಯನ್ನು ಮಾರಾಟ ಮಾಡುವಂತೆ ಜಾತಿ ಮಂಡಳಿ ಆದೇಶ ನೀಡಿತ್ತು. ಅಷ್ಟಾಗಿಯು ಅವರ ಸಾಲ ತೀರದೆ ಇದ್ದಾಗ ಅವರ 12 ವರ್ಷದ ಮಗಳನ್ನು ಕೂಡಾ ಮಾರಾಟ ಮಾಡುವಂತೆ ಜಾತಿ ಮಂಡಳಿ ಒತ್ತಾಯಿಸಿದೆ ಎಂದು ವರದಿ ಹೇಳಿದೆ.

ಅದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಚಿಕಿತ್ಸೆಗಾಗಿ ಪಡೆದಿದ್ದ 6 ಲಕ್ಷ ರೂ.ಗಳನ್ನು ಮರುಪಾವತಿ ಮಾಡಲು ತನ್ನ ಮನೆಯನ್ನು ಮಾರಿದ್ದರು. ಮನೆ ಮಾರಿಯು ಸಾಲ ತೀರದೆ ಇದ್ದಾಗ ತನ್ನ ಮಗಳನ್ನು ಮಾರಾಟ ಮಾಡಿದ್ದಾರೆ. ಈ ಬಾಲಕಿಯನ್ನು ಆಗ್ರಾಕ್ಕೆ ಕರೆದೊಯ್ಯಲಾಗಿತ್ತು, ಅಲ್ಲಿಂದ ಬಾಲಕಿಯನ್ನು ಮೂರು ಬಾರಿ ಮಾರಾಟ ಮಾಡಲಾಗಿದೆ ಜೊತೆಗೆ ಅವರು ನಾಲ್ಕು ಬಾರಿ ಗರ್ಭಿಣಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಪತ್ರಿಕೆಯು ವರದಿಯಲ್ಲಿ ಉಲ್ಲೇಖಿಸಿರುವ ವಿಷಯಗಳು ನಿಜವೇ ಆಗಿದ್ದಲ್ಲಿ ಅದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ. ನಾಲ್ಕು ವಾರಗಳಲ್ಲಿ ಕ್ರಮ ತೆಗೆದುಕೊಂಡ ವಿವರವಾದ ವರದಿಯನ್ನು ಸಲ್ಲಿಸುವಂತೆ ಅದು ರಾಜಸ್ಥಾನದ ಮುಖ್ಯ ಕಾರ್ಯದರ್ಶಿಗೆ ಕೇಳಿದೆ. ಅಲ್ಲದೆ ಆಯೋಗವು ಈಗಾಗಲೇ ಕೈಗೊಂಡಿರುವ ಕ್ರಮಗಳ ವಿವರಗಳನ್ನು ಕೇಳಿದ್ದು, ಅಂತಹ ಘಟನೆಗಳನ್ನು ತಡೆಗಟ್ಟಲು ಹೇಳಿದೆ.

ಇದನ್ನೂ ಓದಿ:  ಕೇಟ್ ಮಿಲ್ಲೆಟ್ ಅವರ ’ಸೆಕ್ಷುವಲ್ ಪಾಲಿಟಿಕ್ಸ್’ ಅನುವಾದದ ಒಂದು ಭಾಗ

ಮಾನವ ಹಕ್ಕುಗಳು ಹಾಗೂ ಹೆಣ್ಣು ಮತ್ತು ಮಹಿಳೆಯರ ಘನತೆಯ ಹಕ್ಕನ್ನು ತೊಡೆದುಹಾಕುವ ಜಾತಿ ಆಧಾರಿತ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು, ಸಂವಿಧಾನ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ ಗ್ರಾಮ ಸಭೆಗಳ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವರದಿಯಲ್ಲಿ ವಿವರಿಸಬೇಕು ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.

ಅಂತಹ ಅಪರಾಧಗಳಲ್ಲಿ ಭಾಗಿಯಾಗುವವರು, ಅವರಿಗೆ ಕುಮ್ಮಕ್ಕು ನೀಡುವವರು ಮತ್ತು ಅವರಿಗೆ ಸಹಾನುಭೂತಿ ಹೊಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ರಾಜಸ್ಥಾನ ಪೊಲೀಸ್ ಮುಖ್ಯಸ್ಥರಿಗೆ ಆಯೋಗ ನೋಟಿಸ್ ನೀಡಿದ್ದು, ಪ್ರಕರಣಗಳ ಸ್ಥಿತಿ, ಚಾರ್ಜ್ ಶೀಟ್‌ಗಳು, ಬಂಧನಗಳು ಇತ್ಯಾದಿಗಳ ವಿವರಗಳನ್ನು ಕೇಳಿದೆ.

ಇಂತಹ ಘಟನೆಗಳನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಅಥವಾ ಕೈಗೊಳ್ಳಲು ಉದ್ದೇಶಿಸಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡುವಂತೆ ಕೂಡಾ ಆಯೋಗವು ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ಇದನ್ನೂ ಓದಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿಶೇಷ ವರದಿಗಾರ ಉಮೇಶ್ ಕುಮಾರ್ ಶರ್ಮಾ ಕೂಡ ರಾಜಸ್ಥಾನಕ್ಕೆ ಭೇಟಿ ನೀಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...