Homeರಾಷ್ಟ್ರೀಯರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ...

ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಈ ರೀತಿಯ ಪದ್ದತಿಗಳು ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ವರದಿಯಾಗಿದೆ

- Advertisement -
- Advertisement -

ಹಣಕಾಸಿನ ವಹಿವಾಟುಗಳು, ಸಾಲಗಳ ಮರು ಪಾವತಿ ಸೇರಿದಂತೆ ತಮ್ಮ ವಿವಾದಗಳನ್ನು ಪರಿಹರಿಸುವ ಸಲುವಾಗಿ ಸ್ಟಾಂಪ್‌ ಪೇಪರ್‌‌ಗಳಲ್ಲಿ ಒಪ್ಪಂದ ನಡೆಸಿ 8 ರಿಂದ18 ವರ್ಷದೊಳಗಿನ ಹುಡುಗಿಯರನ್ನು ಮಾರಾಟ ಮಾಡುತ್ತಿರುವ ಅಘಾತಕಾರಿ ಘಟನೆ ರಾಜಸ್ಥಾನದ ಸುಮಾರು ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ದೈನಿಕ್ ಭಾಸ್ಕರ್‌ ದಿನಪತ್ರಿಕೆ ವರದಿ ಮಾಡಿದೆ.

ಹುಡುಗಿಯರ ಮಾರಾಟಕ್ಕೆ ನಿರಾಕರಿಸಿದರೆ ಗ್ರಾಮದ ಜಾತಿ ಮಂಡಳಿಗಳ ಆದೇಶದ ಮೇರೆಗೆ ಹುಡುಗಿಯರ ತಾಯಂದಿರ ಮೇಲೆ ಅತ್ಯಾಚಾರ ನಡೆಸಿ ಅದನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ವರದಿ ಹೇಳಿದೆ. ರಾಜ್ಯದ ಭಿಲ್ವಾರದಂತಹ ಸ್ಥಳಗಳಲ್ಲಿನ ಜನರು ತಮ್ಮ ವಿವಾದಗಳನ್ನು ಪೋಲೀಸರ ಬಳಿಗೆ ಹೋಗುವ ಬದಲು ಜಾತಿ ಮಂಡಳಿಗಳನ್ನು ಸಂಪರ್ಕಿಸುತ್ತಾರೆ ಎಂದು ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರಾಟವಾದ ಹುಡುಗಿಯರನ್ನು ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ದೆಹಲಿ ಮತ್ತು ವಿದೇಶಗಳಿಗೆ ಕಳುಹಿಸಲಾಗುತ್ತಿದೆ. ಗುಲಾಮಗಿರಿಗೆ ಒಳಗಾದ ಅವರ ಮೇಲೆ ದೈಹಿಕ ಕಿರುಕುಳ, ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗುತ್ತದೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ರಾಜಸ್ಥಾನ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ವ್ಯಕ್ತಿಯೊಬ್ಬ ತಾನು ಪಡೆದ 15 ಲಕ್ಷ ರೂ. ಸಾಲವನ್ನು ಮರು ಪಾವತಿಸಲು ತನ್ನ ಸಹೋದರಿಯನ್ನು ಮಾರಾಟ ಮಾಡುವಂತೆ ಜಾತಿ ಮಂಡಳಿ ಆದೇಶ ನೀಡಿತ್ತು. ಅಷ್ಟಾಗಿಯು ಅವರ ಸಾಲ ತೀರದೆ ಇದ್ದಾಗ ಅವರ 12 ವರ್ಷದ ಮಗಳನ್ನು ಕೂಡಾ ಮಾರಾಟ ಮಾಡುವಂತೆ ಜಾತಿ ಮಂಡಳಿ ಒತ್ತಾಯಿಸಿದೆ ಎಂದು ವರದಿ ಹೇಳಿದೆ.

ಅದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಚಿಕಿತ್ಸೆಗಾಗಿ ಪಡೆದಿದ್ದ 6 ಲಕ್ಷ ರೂ.ಗಳನ್ನು ಮರುಪಾವತಿ ಮಾಡಲು ತನ್ನ ಮನೆಯನ್ನು ಮಾರಿದ್ದರು. ಮನೆ ಮಾರಿಯು ಸಾಲ ತೀರದೆ ಇದ್ದಾಗ ತನ್ನ ಮಗಳನ್ನು ಮಾರಾಟ ಮಾಡಿದ್ದಾರೆ. ಈ ಬಾಲಕಿಯನ್ನು ಆಗ್ರಾಕ್ಕೆ ಕರೆದೊಯ್ಯಲಾಗಿತ್ತು, ಅಲ್ಲಿಂದ ಬಾಲಕಿಯನ್ನು ಮೂರು ಬಾರಿ ಮಾರಾಟ ಮಾಡಲಾಗಿದೆ ಜೊತೆಗೆ ಅವರು ನಾಲ್ಕು ಬಾರಿ ಗರ್ಭಿಣಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಪತ್ರಿಕೆಯು ವರದಿಯಲ್ಲಿ ಉಲ್ಲೇಖಿಸಿರುವ ವಿಷಯಗಳು ನಿಜವೇ ಆಗಿದ್ದಲ್ಲಿ ಅದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ. ನಾಲ್ಕು ವಾರಗಳಲ್ಲಿ ಕ್ರಮ ತೆಗೆದುಕೊಂಡ ವಿವರವಾದ ವರದಿಯನ್ನು ಸಲ್ಲಿಸುವಂತೆ ಅದು ರಾಜಸ್ಥಾನದ ಮುಖ್ಯ ಕಾರ್ಯದರ್ಶಿಗೆ ಕೇಳಿದೆ. ಅಲ್ಲದೆ ಆಯೋಗವು ಈಗಾಗಲೇ ಕೈಗೊಂಡಿರುವ ಕ್ರಮಗಳ ವಿವರಗಳನ್ನು ಕೇಳಿದ್ದು, ಅಂತಹ ಘಟನೆಗಳನ್ನು ತಡೆಗಟ್ಟಲು ಹೇಳಿದೆ.

ಇದನ್ನೂ ಓದಿ:  ಕೇಟ್ ಮಿಲ್ಲೆಟ್ ಅವರ ’ಸೆಕ್ಷುವಲ್ ಪಾಲಿಟಿಕ್ಸ್’ ಅನುವಾದದ ಒಂದು ಭಾಗ

ಮಾನವ ಹಕ್ಕುಗಳು ಹಾಗೂ ಹೆಣ್ಣು ಮತ್ತು ಮಹಿಳೆಯರ ಘನತೆಯ ಹಕ್ಕನ್ನು ತೊಡೆದುಹಾಕುವ ಜಾತಿ ಆಧಾರಿತ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು, ಸಂವಿಧಾನ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ ಗ್ರಾಮ ಸಭೆಗಳ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವರದಿಯಲ್ಲಿ ವಿವರಿಸಬೇಕು ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.

ಅಂತಹ ಅಪರಾಧಗಳಲ್ಲಿ ಭಾಗಿಯಾಗುವವರು, ಅವರಿಗೆ ಕುಮ್ಮಕ್ಕು ನೀಡುವವರು ಮತ್ತು ಅವರಿಗೆ ಸಹಾನುಭೂತಿ ಹೊಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ರಾಜಸ್ಥಾನ ಪೊಲೀಸ್ ಮುಖ್ಯಸ್ಥರಿಗೆ ಆಯೋಗ ನೋಟಿಸ್ ನೀಡಿದ್ದು, ಪ್ರಕರಣಗಳ ಸ್ಥಿತಿ, ಚಾರ್ಜ್ ಶೀಟ್‌ಗಳು, ಬಂಧನಗಳು ಇತ್ಯಾದಿಗಳ ವಿವರಗಳನ್ನು ಕೇಳಿದೆ.

ಇಂತಹ ಘಟನೆಗಳನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಅಥವಾ ಕೈಗೊಳ್ಳಲು ಉದ್ದೇಶಿಸಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡುವಂತೆ ಕೂಡಾ ಆಯೋಗವು ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ಇದನ್ನೂ ಓದಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿಶೇಷ ವರದಿಗಾರ ಉಮೇಶ್ ಕುಮಾರ್ ಶರ್ಮಾ ಕೂಡ ರಾಜಸ್ಥಾನಕ್ಕೆ ಭೇಟಿ ನೀಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...