Homeಕರ್ನಾಟಕಬೆಂಗಳೂರಿನ ಗುಂಡಿಗಳನ್ನು ತುಂಬುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ: ರಾಜ್ಯ ಹೈಕೋರ್ಟ್ ಕಿಡಿ

ಬೆಂಗಳೂರಿನ ಗುಂಡಿಗಳನ್ನು ತುಂಬುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ: ರಾಜ್ಯ ಹೈಕೋರ್ಟ್ ಕಿಡಿ

- Advertisement -
- Advertisement -

ಬೆಂಗಳೂರಿನ ರಸ್ತೆ ಗುಂಡಿ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ತ್ರೀವ್ರ ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿದೆ.

ರಸ್ತೆ ಗುಂಡಿಗಳ ಸಮಸ್ಯೆಗೆ ಸಂಬಂಧಿಸಿದಂತೆ ವಿಜಯ್ ಮೆನನ್ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳ ಪರಿಶೀಲನೆ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠವು ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಬೆಂಗಳೂರಿನ ಗುಂಡಿಗಳಿಂದ ಕೂಡಿದ ರಸ್ತೆಗಳಿಂದಾಗಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಗುಂಡಿಗಳನ್ನು ತುಂಬಲು ಬಿಬಿಎಂಪಿ ಸೂಕ್ತ ತಂತ್ರಜ್ಞಾನವನ್ನು ಬಳಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಅಕ್ಟೋಬರ್ 31’: ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಿದ ಬಿಬಿಎಂಪಿ

ರಸ್ತೆ ಗುಂಡಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವಿಭಾಗೀಯ ಪೀಠವು ಗುಂಡಿ ಮುಚ್ಚುವ ವಿಚಾರದಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಮತ್ತು ಎಷ್ಟು ಗುಂಡಿಗಳನ್ನು ತುಂಬಲಾಗಿದೆ ಎಂಬುದರ ಕುರಿತು ವಿವರವಾದ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿದೆ.

ಬಿಬಿಎಂಪಿ ಪರ ವಾದ ಮಂಡಿಸಿದ ವಕೀಲರು ಮಧ್ಯಪ್ರವೇಶಿಸಿ, ಬೆಂಗಳೂರಿನಲ್ಲಿ ಗುಂಡಿಗಳನ್ನು ತುಂಬುವ ಕುರಿತು ಕ್ರಮ ಕೈಗೊಂಡಿರುವ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ಈ ವಿಷಯದ ಬಗ್ಗೆ ವಾದ ಮಾಡಲು ಸಮಯಾವಕಾಶವನ್ನೂ ವಕೀಲರು ಕೋರಿದ್ದು, ವಿಚಾರಣೆಗೆ ಒಪ್ಪಿಗೆ ಸೂಚಿಸಿದ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದೆ.

ಈ ಹಿಂದೆ ಸೆಪ್ಟೆಂಬರ್ 19 ರಂದು, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠವು ಬಿಬಿಎಂಪಿಯಿಂದ ಗುರುತಿಸಲಾದ ಪ್ರಮುಖ ರಸ್ತೆಗಳಲ್ಲಿನ 221 ಗುಂಡಿಗಳನ್ನು ಸರಿಪಡಿಸಲು ಅಥವಾ ಭರ್ತಿ ಮಾಡಲು ಬಿಬಿಎಂಪಿಗೆ 10 ದಿನಗಳ ಗಡುವು ನೀಡಿತ್ತು.

ಇದನ್ನೂ ಓದಿ: ಬಿಬಿಎಂಪಿ: ಡಿಸೆಂಬರ್ 31ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್‌ ಗಡುವು

ಅರ್ಜಿದಾರ ವಿಜಯ್ ಮೆನನ್ ಅವರು 2015ರಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಮತ್ತು ಮಳೆನೀರು ಚರಂಡಿಗಳ ಅತಿಕ್ರಮಣಗಳನ್ನು ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ಕೋರಿ ಪೀಠವು ಹೇಳಿತ್ತು. ಮುಂದಿನ ವಿಚಾರಣೆಗೆ ಮುನ್ನ ಛಾಯಾಚಿತ್ರಗಳ ಸಹಿತ ಗುಂಡಿಗಳನ್ನು ತುಂಬಿರುವ ಬಗ್ಗೆ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ಪೀಠವು ಬಿಬಿಎಂಪಿಗೆ ಆದೇಶಿಸಿದೆ.

“ಬಿಬಿಎಂಪಿ ಶಾಸನಬದ್ಧ ಸಂಸ್ಥೆಯಾಗಿದ್ದು, ರಸ್ತೆಗಳ ನಿರ್ವಹಣೆ ಮತ್ತು ದುರಸ್ತಿ ಮಾಡುವ ಜವಾಬ್ದಾರಿಯನ್ನು ಹೊಂದಿದೆ. ಹೊಂಡಗಳಿಲ್ಲದ ರಸ್ತೆಗಳನ್ನು ಹೊಂದಲು ನಾಗರಿಕರಿಗೆ ಹಕ್ಕಿದೆ” ಎಂದು ಪೀಠವು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...