Homeಕರ್ನಾಟಕಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

- Advertisement -
- Advertisement -

ಪತ್ರಕರ್ತರಿಗೆ ಲಂಚ ನೀಡಿದ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಲೋಕಾಯುಕ್ತ ಮತ್ತು ಲೋಕಾಯುಕ್ತ ಪೊಲೀಸ್ ವಿಭಾಗದ ಎಡಿಜಿಪಿಗೆ ದೂರು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿಯ ಪ್ರಧಾನ/ಮುಖ್ಯ ವರದಿಗಾರರಿಬ್ಬರಿಗೆ ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್ ಬಾಕ್ಸ್‌ನೊಂದಿಗೆ 1 ಲಕ್ಷ ರೂ. ನಗದನ್ನಿರಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ ಎಂಬುವರು ನಗದು ನೀಡಿದ್ದಾರೆ ಎಂದು ದೂರಿರುವ ಜನಾಧಿಕಾರ ಸಂಘರ್ಷ ಪರಿಷತ್‌, ಮುಖ್ಯಮಂತ್ರಿ ಮತ್ತು ಮಾಧ್ಯಮ ಸಂಯೋಜಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮದ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವುದಾಗಿ ‘ದಿ ಫೈಲ್‌’ ವರದಿ ಮಾಡಿದೆ.

“ವಿಶ್ವಾಸನೀಯ ಮೂಲಗಳ ಪ್ರಕಾರ ಡೆಕ್ಕನ್ ಹೆರಾಲ್ಡ್‌ನ ಮುಖ್ಯ ವರದಿಗಾರ ಭರತ್‌ ಜೋಷಿ ಅವರಿಗೆ ತಲುಪಿಸಿದ್ದ ಸ್ವೀಟ್ ಬಾಕ್ಸ್‌ನಲ್ಲಿಯೇ 1 ಲಕ್ಷ ರೂ. ನಗದನ್ನು ತಲುಪಿಸಲಾಗಿತ್ತು. ಇದು ಅವರ ಗಮನಕ್ಕೆ ಬಂದ ನಂತರ ಡೆಕ್ಕನ್ ಹೆರಾಲ್ಡ್‌ನ ಸಂಪಾದಕರು ಮತ್ತು ಸಿಇಒ ಅವರ ಗಮನಕ್ಕೆ ತಂದು ಅವರ ಸೂಚನೆಯಂತೆ ಹಣವನ್ನು ಹಿಂದಿರುಗಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಪ್ರಜಾವಾಣಿಯ ಮುಖ್ಯ ವರದಿಗಾರ ವೈ.ಗ.ಜಗದೀಶ್ ಅವರಿಗೂ ಹಣ ತಲುಪಿಸಲಾಗಿತ್ತು. ಈ ಬಗ್ಗೆ ಖುದ್ದು ಜಗದೀಶ್‌ ಅವರೇ ಹಣ ಪಡೆದಿದ್ದನ್ನು ಖಚಿತಪಡಿಸಿ ಒಪ್ಪಿಕೊಂಡಿದ್ದರು. ಇವರೂ ಸಹ ಸಂಸ್ಥೆಯ ಸಿಇಒ ಮತ್ತು ಸಂಪಾದಕರ ಗಮನಕ್ಕೆ ತಂದು ಹಣವನ್ನು ಹಿಂದಿರುಗಿಸಿದ್ದರು. ಅಲ್ಲದೇ ಜಗದೀಶ್ ಅವರೇ ಒಪ್ಪಿಕೊಂಡಿರುವಂತೆ ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸಂಸ್ಥೆಯಿಂದ ಖಂಡನಾ ಪತ್ರವನ್ನು ಬರೆಯಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಅವರು ಕ್ಷಮೆಯನ್ನೂ ಯಾಚಿಸಿದ್ದಾರೆ.”

“ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪ, ಕೆಟ್ಟ ಆಡಳಿತದ ಕುರಿತು ಪತ್ರಿಕೆಯಲ್ಲಿ ಪ್ರಕಟಿಸದಂತೆ ಹಣ ನೀಡಲಾಗಿದೆ ಎಂಬುದಕ್ಕೆ ಪುಷ್ಠಿ ನೀಡಿದಂತಾಗಿದೆ. ಮುಖ್ಯಮಂತ್ರಿ ಕಚೇರಿಯೇ ನೇರವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಂಚ ನೀಡಿರುವುದು ಅನೈತಿಕವಾದದ್ದಾಗಿದೆ. ಅಲ್ಲದೇ ಮಾಧ್ಯಮ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ಸರ್ಕಾರದ ಪರವಾಗಿ ಇರುವಂತೆ ನೋಡಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪೋಸ್ಟ್‌ ಹಾಕಿರುವ ಹಿರಿಯ ಪತ್ರಕರ್ತರಾದ ರಾಜಾರಾಮ್‌ ತಲ್ಲೂರು, “ಇಂದು ಬೆಳಗ್ಗಿನಿಂದ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ, ಸಚಿವರ ಕಚೇರಿಗಳಿಂದ ರಾಜ್ಯದ ಹಲವು ಪತ್ರಕರ್ತರಿಗೆ ದೀಪಾವಳಿ ಇನಾಮಿನ ಜೊತೆಯಲ್ಲಿ ನಗದು ಹಣವನ್ನು ನೀಡಲಾಗಿದೆ ಎಂಬ ವದಂತಿಗಳು ಹಬ್ಬಿವೆ. ಇದು ಹೌದೆಂದಾಗಿದ್ದಲ್ಲಿ, ಚುನಾವಣಾ ಪೂರ್ವ ಭ್ರಷ್ಟಾಚಾರ ಎಂದು ಇದನ್ನು ಪರಿಗಣಿಸುವುದು ಕರ್ನಾಟಕದ ಸಾರ್ವಜನಿಕ ಸ್ವಾಸ್ಥ್ಯದ ದೃಷ್ಟಿಯಿಂದ ಅತ್ಯಗತ್ಯ” ಎಂದಿದ್ದಾರೆ.

“ತಾವು ತಕ್ಷಣ ಈಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಮತ್ತು ಭ್ರಷ್ಟಾಚಾರ ನಡೆದಿರುವುದು ಹೌದೆಂದಾದರೆ, ಆ ಬಗ್ಗೆ ತಕ್ಷಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಕರ್ನಾಟಕದ ಜನತೆಯ ಪರವಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ #SayCM ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ. “ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿರಿ: ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

“ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು” ಎಂದು ಕಾಂಗ್ರೆಸ್ ಒತ್ತಾಯಿಸಿದೆ.

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?” ಎಂದು ಖಾರವಾಗಿ ಪ್ರಶ್ನೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...