Homeಅಂತರಾಷ್ಟ್ರೀಯ ‘ಹಸಿವಾದಾಗ ಹೆಂಡತಿಯನ್ನು ತಿನ್ನಬಹುದು...’! ಸೌದಿಯಲ್ಲಿ ಹೀಗೊಂದು ಫತ್ವಾ ಹೊರಬಿದ್ದಿದೆಯಾ?

 ‘ಹಸಿವಾದಾಗ ಹೆಂಡತಿಯನ್ನು ತಿನ್ನಬಹುದು…’! ಸೌದಿಯಲ್ಲಿ ಹೀಗೊಂದು ಫತ್ವಾ ಹೊರಬಿದ್ದಿದೆಯಾ?

- Advertisement -
- Advertisement -

ಕಳೆದ ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇಂಥದ್ದೊಂದು ಸುದ್ದಿ ವೈರಲ್ ಆಗುತ್ತಿದೆ. 2015ರಿಂದ ಇದು ಆಗಾಗ ಕಾಣಿಸಿಕೊಂಡು ‘ಮುಸ್ಲಿಮ ಜಗತ್ತು ಕ್ರೂರ’ ಎಂಬ ಹುಳವನ್ನು ತಲೆಗೆ ಬಿಟ್ಟು ಮರೆಯಾಗುತ್ತ ಬಂದಿದೆ.

ಏನಿದರ ಮರ್ಮ?

ಮಿಥ್ಯ: ಸೌದಿಯ ಪ್ರಮುಖ ಧರ್ಮಗುರುವೊಬ್ಬರು ಫತ್ವಾ ಹೊರಡಿಸಿದ್ದು, ಹಸಿವಾದಾಗ ಹೆಂಡತಿಯನ್ನು ತಿಂದರೆ ತಪ್ಪೇನಿಲ್ಲ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಈ ಕುರಿತು  ಆರಂಭದಲ್ಲಿ ಟ್ವೀಟ್ ಮಾಡಿದವರ ಪೈಕಿ ಖುಷಿ ಸಿಂಗ್ ಎನ್ನುವವರು, ‘ಸೌದಿಯ ಧರ್ಮಗುರು ಅಜೀಜ್ ಅಬ್ದುಲ್ ಈ ರೀತಿಯ ಫತ್ವಾ ಹೊರಡಿಸಿದ್ದಾನೆ. ಭಾರತದ ಸ್ತ್ರೀವಾದಿಗಳಿಗೆ ಅಜೀಜ್ ಅಬ್ದುಲ್‍ನಂತಹ ಪತಿಯರು ಸಿಗಲಿ’ ಎಂದು ವ್ಯಂಗ್ಯವಾಡಿದ್ದಾರೆ. ಇದೇ ಬಗೆಯ ಟ್ವೀಟ್‍ಗಳನ್ನು ಸಾಕಷ್ಟು ಜನ ಮಾಡುತ್ತಿದ್ದು, ಅವರೆಲ್ಲರ ಸಿಟ್ಟು ಭಾರತದ ಸ್ತ್ರೀವಾದಿಗಳು ಮತ್ತು ‘ಇಸ್ಲಾಂ ಪ್ರಿಯರ’ ಮೇಲಿರುವುದು ವಿಚಿತ್ರವಾಗಿದೆ.

ಸತ್ಯ: ಸೌದಿಯಲ್ಲಿ ಮಹಿಳೆಯರನ್ನು ತುಂಬ ಕೀಳಾಗಿ ಪರಿಗಣಿಸಲಾಗುತ್ತದೆ ಎಂಬ ಅನಿಸಿಕೆಯನ್ನು ಹರಡಲು ಹೀಗೆ ಸಾಹಸ ಮಾಡುತ್ತಿರುವವರ ಪೈಕಿ ಬಹುಪಾಲು ಜನರು ಬಲಪಂಥೀಯ ಸಿದ್ದಾಂತಗಳ ಆರಾಧಕರೇ ಆಗಿದ್ದಾರೆ. ಸೌದಿಯಲ್ಲಿ ಅಂತಹ ಯಾವ ಫತ್ವಾವನ್ನೂ ಹೊರಡಿಸಿಲ್ಲ. ಅಷ್ಟಕ್ಕೂ ಇದು 2015ರಲ್ಲಿ ಹರಿದಾಡಿದ್ದ ಫೇಕ್ ನೈಸ್ ಆಗಿದ್ದು ಈಗ ಮತ್ತೆ ಅದಕ್ಕೆ ಜೀವ ಕೊಡಲಾಗಿದೆ ಅಷ್ಟೇ. ಇದೊಂದು ಫೇಕ್ ಸುದ್ದಿ ಎಂದು ಹಲವಾರು ಪೋರ್ಟಲ್‍ಗಳು ಸಾಬೀತು ಮಾಡುತ್ತ ಬಂದಿದ್ದರೂ ಮತ್ತೆ ಈ ವಾರ ಈ ಫೇಕ್ ನ್ಯೂಸ್ ಓಡಾಡುತ್ತಿದೆ.

ಸೌದಿಯಲ್ಲಿ ಭೀಕರ ಹಸಿವಿನ ಸಮಸ್ಯೆಯೇ? 

ಕಾಮನ್‍ಸೆನ್ಸ್ ಇದ್ದವರಿಗೆ ಗೊತ್ತು, ಸೌದಿಯಲ್ಲೇನೂ ಭೀಕರ ಹಸಿವಿನ ಸಮಸ್ಯೆ ಇಲ್ಲವೆಂದು. ಹಾಗೆಯೇ ಇಂತಹ ಫತ್ವಾ ಹೊರಡಿಸಿದರೆ ಅಲ್ಲೂ ಕ್ರಮ ಕೈಗೊಳ್ಳುತ್ತಾರೆ. ಮೊದಲಿಗೆ ಇದು ಮಿರರ್ ಪತ್ರಿಕೆಯಲ್ಲಿ ಕಾಣಿಸಿಕೊಂಡಿತ್ತು. ಅದನ್ನೇ ನೆಟ್ಟಿಗರು ಸತ್ಯ ಎಂಬಂತೆ ಹರಡುತ್ತಿದ್ದಾರೆ. ಹಾಗಂತ ಯಾವ ಫತ್ವಾವನ್ನು ಹೊರಡಿಸಿಲ್ಲ ಎಂದು ಅಲ್ಲಿನ ಧರ್ಮಗುರುಗಳು ಪದೇ ಪದೇ ಹೇಳಿದ್ದಾರೆ.

ಸುಳ್ಳನ್ನು ಹರಡುವುದೂ ಒಂದು ಮಾನಸಿಕ ಕಾಯಿಲೆ ಆಗುತ್ತಿದೆಯಾ? ಎಂಬ ಪ್ರಶ್ನೆ ಈಗ ಮತ್ತಷ್ಟು ಮುಖ್ಯವೆನಿಸುತ್ತದೆ.

ಕೃಪೆ: ಆಲ್ಟ್ ನ್ಯೂಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...