Homeರಾಷ್ಟ್ರೀಯಯುಪಿ: 400 ಜನರ ಮತಾಂತರಕ್ಕೆ ಒತ್ತಾಯ ಮಾಡಿದ್ದಾರೆಂದು 9 ಮಂದಿಯ ವಿರುದ್ಧ ಪ್ರಕರಣ ದಾಖಲು

ಯುಪಿ: 400 ಜನರ ಮತಾಂತರಕ್ಕೆ ಒತ್ತಾಯ ಮಾಡಿದ್ದಾರೆಂದು 9 ಮಂದಿಯ ವಿರುದ್ಧ ಪ್ರಕರಣ ದಾಖಲು

ಕೇವಲ ಒಂಬತ್ತು ಮಂದಿ ಬೇರೊಂದು ಊರಿಗೆ ಬಂದು, ದಾಂದಲೆ ನಡೆಸಿ 400 ಜನರನ್ನು ಬಲವಂತವಾಗಿ ಮತಾಂತರ ಮಾಡಲು ಸಾಧ್ಯವೆ ಎಂದು ಪ್ರಶ್ನಿಸಲಾಗಿದೆ

- Advertisement -
- Advertisement -

ಉತ್ತರ ಪ್ರದೇಶದ ಮೀರತ್‌ನಲ್ಲಿ 400 ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯ ಮಾಡಿದ್ದಾರೆ ಎಂದು ಆರೋಪಿಸಿ ಮೇಲೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಹಿರಿಯ ಪೊಲೀಸ್ ಅಧೀಕ್ಷಕರನ್ನು (ಎಸ್‌ಎಸ್‌ಪಿ) ಸಂಪರ್ಕಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡಲಾಗಿದೆ ಎಂದು ಜನರು ದೂರಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಂಗಟ್ ಪುರಂನ ಮಲಿನ್ ಗ್ರಾಮದಲ್ಲಿ ಘಟನೆ ನಡೆದಿದ್ದು, “ಹಿಂದೂ ದೇವರು ಮತ್ತು ದೇವತೆಗಳ ವಿಗ್ರಹಗಳನ್ನು ತೆಗೆದುಹಾಕುವಂತೆ ಒತ್ತಾಯಿಸಲಾಯಿತು” ಎಂದು ಸಂತ್ರಸ್ತರು ಆರೋಪಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶುಕ್ರವಾರ ಬಿಜೆಪಿ ನಾಯಕನೊಂದಿಗೆ ಬ್ರಹ್ಮಪುತ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಜನರು, ಆರೋಪಿಗಳು ಧಾರ್ಮಿಕ ಮತಾಂತರಕ್ಕಾಗಿ ಹಣ ಮತ್ತು ಆಹಾರದ ಆಮಿಷ ಒಡ್ಡಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ದೇವತೆಗಳ ವಿಗ್ರಹಗಳು, ಪ್ರತಿಮೆಗಳು ಮತ್ತು ಭಾವಚಿತ್ರಗಳನ್ನು ತೆಗೆದು ಕ್ರಿಶ್ಚಿಯನ್ ಧರ್ಮ ಸ್ವೀಕರಿಸುವಂತೆ ಗ್ರಾಮಸ್ಥರನ್ನು ಒತ್ತಾಯಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ‘ಇಂಡಿಗೋ’ ವಿಮಾನದಲ್ಲಿ ಬೆಂಕಿ!

“ನಮ್ಮ ಮೇಲೆ ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಲಾಯಿತು. ನಮ್ಮ ಆಧಾರ್ ಕಾರ್ಡ್‌ನಲ್ಲಿ ನಮ್ಮ ಹೆಸರನ್ನು ಬದಲಾಯಿಸುವಂತೆ ಕೇಳಲಾಯಿತು. ದೀಪಾವಳಿಯ ದಿನದಂದು ನಾವು ಪೂಜೆ ಮಾಡುತ್ತಿದ್ದಾಗ, ಆರೋಪಿಗಳು ನಮ್ಮ ಮನೆಗೆ ನುಗ್ಗಿ ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ನೀವು ನಿಮ್ಮ ಧರ್ಮವನ್ನು ಪರಿವರ್ತಿಸಿದ್ದರೂ ನೀವು ಯಾಕೆ ಹೀಗೆ ಮಾಡುತ್ತಿದ್ದೀರಿ? ಎಂದು ಅವರು ಕೇಳಿದ್ದಾರೆ. ನಾವು ಇದನ್ನು ವಿರೋಧಿಸಿದಾಗ ಅವರು ನಮಗೆ ಜೀವ ಬೆದರಿಕೆ ಹಾಕಿದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಎಫ್‌ಐಆರ್‌ನಲ್ಲಿ ಆರೋಪಿಗಳನ್ನು ಛಬಿಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕು, ಬಸಂತ್, ಪ್ರೇಮಾ, ತಿತ್ಲಿ ಮತ್ತು ರಾಣಿ ಎಂದು ಗುರುತಿಸಲಾಗಿದೆ.

ಎಸ್ಪಿ ಪಿಯೂಷ್ ಸಿಂಗ್ ಮಾತನಾಡಿ,‘‘ಶುಕ್ರವಾರ ಕೆಲವರು ನಮ್ಮ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಿದ್ದು, ಇತರೆ ಧರ್ಮದವರು ಮಾಳಿನ್ ಗ್ರಾಮದ ಜನರ ಧರ್ಮವನ್ನು ಬಲವಂತವಾಗಿ ಮತಾಂತರ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರೊಬ್ಬರು,“ಒಂಬತ್ತು ಜನರು ತಮ್ಮದಲ್ಲದ ಊರಿಗೆ ಬಂದು, ದಾಂದಲೆ ನಡೆಸಿ 400 ಜನರನ್ನು ಬಲವಂತವಾಗಿ ಮತಾಂತರ ಮಾಡಲು ಸಾಧ್ಯವೆ” ಎಂದು ಪ್ರಶ್ನಿಸಿದ್ದಾರೆ.

“ಅಷ್ಟಕ್ಕೂ ಧರ್ಮ ಎಂಬುವುದು ಮನಸ್ಸಿನಲ್ಲಿರುವ ನಂಬಿಕೆಯ ವಿಷಯವಾಗಿದೆ, ಹೀಗಿರುವಾಗ ಒಬ್ಬ ವ್ಯಕ್ತಿಯನ್ನು ಬಲವಂತವಾಗಿ ಮತಾಂತರ ಮಾಡಲು ಹೇಗೆ ಸಾಧ್ಯವಿದೆ?. ಅದರಲ್ಲೂ ನಾಲ್ನೂರು ಜನರೊಂದಿಗೆ ಒಂಬತ್ತು ಜನರು ಬಂದು ನೀವೆಲ್ಲಾ ಮತಾಂತರವಾಗಿ ಎಂದು ಒತ್ತಾಯ ಮಾಡಲು ಸಾಧ್ಯವೆ? ಇದು ಒಂದು ಷಡ್ಯಂತ್ರ” ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....