Homeರಾಷ್ಟ್ರೀಯಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಸೆಪ್ಟೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಿದ್ದರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಮುಂಬೈ-ಗಾಂಧಿನಗರ ವಂದೇ ಭಾರತ್‌‌‌ ಎಕ್ಸ್‌ಪ್ರೆಸ್‌ ರೈಲು ಮಗದೊಮ್ಮೆ ಜಾನುವಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಶನಿವಾರ ಬೆಳಿಗ್ಗೆ ಘಟನೆ ನಡೆದಿದ್ದು, ಗುಜರಾತ್‌ನ ಅತುಲ್ ನಿಲ್ದಾಣದ ಬಳಿ ಗೂಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿ ಹೇಳಿದೆ.

ಈ ತಿಂಗಳಲ್ಲಿ ಇದೇ ರೀತಿಯ ಘಟನೆ ನಡೆಯುತ್ತಿರುವುದು ಇದು ಮೂರನೇ ಭಾರಿಯಾಗಿದೆ. ರೈಲು ಮುಂಬೈ ಸೆಂಟ್ರಲ್‌ನಿಂದ ಗಾಂಧಿನಗರಕ್ಕೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 8.17ಕ್ಕೆ ಮುಂಬೈ ಸೆಂಟ್ರಲ್ ವಿಭಾಗದ ಅತುಲ್ ಬಳಿ ಹಳಿ ಮೇಲೆ ದನಕರುಗಳು ಓಡಾಡಿದ್ದು, ಈ ವೇಳೆ ಗೂಳಿಗೆ ಡಿಕ್ಕಿ ಹೊಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈಲನ್ನು ಸುಮಾರು 15 ನಿಮಿಷಗಳ ಕಾಲ ತಡೆಹಿಡಿಯಲಾಗಿದ್ದು, ರೈಲು ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದಾಗಿ ರೈಲಿನ ಮುಂಬಾಗದ ಒಂದು ಭಾಗಕ್ಕೆ ಹಾನಿಯಾಗಿದೆ.

ಇದನ್ನೂ ಓದಿ: ಚೀನಾ ಲಿಂಕ್: 44 ಅರೆಹೈಸ್ಪೀಡ್ ವಂದೇ ಭಾರತ್‌ ರೈಲು ಟೆಂಡರ್‌‌ ರದ್ದು

“ಮುಂಭಾಗದ ಕೋಚ್ ಅಂದರೆ ಡ್ರೈವರ್ ಕೋಚ್‌ನ ಒಂದು ಭಾಗದ ಕವರ್‌ಗೆ ಹಾನಿಯಾಗಿರುವುದನ್ನು ಹೊರತುಪಡಿಸಿ ರೈಲಿಗೆ ಯಾವುದೇ ಹಾನಿಯಾಗಿಲ್ಲ. ರೈಲು ಸರಾಗವಾಗಿ ಚಲಿಸುತ್ತಿದೆ. ಅದನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ದನಕರುಗಳು ಓಡಾಡುತ್ತಿರುವಾಗ, ಒಂದು ಗೂಳಿ ಡಿಕ್ಕಿ ಹೊಡೆದಿದೆ” ಎಂದು ಭಾರತೀಯ ರೈಲ್ವೇಯ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

ಘಟನೆಯ ನಂತರ ರೈಲ್ವೆ ಅಧಿಕಾರಿಗಳು ತಮ್ಮ ಜಾನುವಾರುಗಳನ್ನು ಟ್ರ್ಯಾಕ್ ಬಳಿ ಬಿಡದಂತೆ ಹತ್ತಿರದ ಗ್ರಾಮಸ್ಥರಿಗೆ ಸಲಹೆ ನೀಡಲು ಪ್ರಯತ್ನಿಸುತ್ತಿದ್ದಾರೆ.

ರೈಲಿನ ವೇಗವನ್ನು ಗಂಟೆಗೆ 160 ಕಿಲೋಮೀಟರ್‌ಗೆ ಹೆಚ್ಚಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಪಶ್ಚಿಮ ರೈಲ್ವೇ ಗಾಂಧಿನಗರ-ಅಹಮದಾಬಾದ್ ವಿಭಾಗದಲ್ಲಿ ಫೆನ್ಸಿಂಗ್ ಕೆಲಸವನ್ನು ಕೈಗೊಳ್ಳಲಿದೆ ಎಂದು ಸಿಪಿಆರ್‌ಒ ಹೇಳಿದ್ದಾರೆ. ಫೆನ್ಸಿಂಗ್ ಕೆಲಸ ಮಾರ್ಚ್ 2024 ರೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸರಣಿಯ ಮೂರನೇ ಸೇವೆಯಾದ ಸ್ವದೇಶಿ ವಿನ್ಯಾಸ ಮತ್ತು ನಿರ್ಮಿಸಿದ ಸೆಮಿ-ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ಗಾಂಧಿನಗರದಿಂದ ಚಾಲನೆ ನೀಡಿದ್ದರು ಮತ್ತು ಮರುದಿನದಿಂದ ರೈಲು ತನ್ನ ವಾಣಿಜ್ಯ ಸಂಚಾರವನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ಅಕ್ಟೋಬರ್ 6 ರಂದು ಗುಜರಾತ್‌ನ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ಮುಂಬೈನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು. ಈ ವೇಳೆ ರೈಲಿಗೆ ಹಾನಿಯಾದ ಕಾರಣ ಅದರ ಮುಂಬಾಗದ ಕವರ್‌‌ ಅನ್ನು ರಾತ್ರೋರಾತ್ರಿ ಬದಲಾಯಿಸಬೇಕಾಯಿತು. ಮರುದಿನ (ಅಕ್ಟೋಬರ್ 7) ಸಂಭವಿಸಿದ ಎರಡನೇ ಘಟನೆಯಲ್ಲಿ, ಮುಂಬೈಗೆ ತೆರಳುತ್ತಿದ್ದಾಗ ಗುಜರಾತ್‌ನ ಆನಂದ್ ಬಳಿ ರೈಲು ಹಸುವಿಗೆ ಡಿಕ್ಕಿ ಹೊಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...