Homeರಾಷ್ಟ್ರೀಯಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಸೆಪ್ಟೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಿದ್ದರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಮುಂಬೈ-ಗಾಂಧಿನಗರ ವಂದೇ ಭಾರತ್‌‌‌ ಎಕ್ಸ್‌ಪ್ರೆಸ್‌ ರೈಲು ಮಗದೊಮ್ಮೆ ಜಾನುವಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಶನಿವಾರ ಬೆಳಿಗ್ಗೆ ಘಟನೆ ನಡೆದಿದ್ದು, ಗುಜರಾತ್‌ನ ಅತುಲ್ ನಿಲ್ದಾಣದ ಬಳಿ ಗೂಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿ ಹೇಳಿದೆ.

ಈ ತಿಂಗಳಲ್ಲಿ ಇದೇ ರೀತಿಯ ಘಟನೆ ನಡೆಯುತ್ತಿರುವುದು ಇದು ಮೂರನೇ ಭಾರಿಯಾಗಿದೆ. ರೈಲು ಮುಂಬೈ ಸೆಂಟ್ರಲ್‌ನಿಂದ ಗಾಂಧಿನಗರಕ್ಕೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 8.17ಕ್ಕೆ ಮುಂಬೈ ಸೆಂಟ್ರಲ್ ವಿಭಾಗದ ಅತುಲ್ ಬಳಿ ಹಳಿ ಮೇಲೆ ದನಕರುಗಳು ಓಡಾಡಿದ್ದು, ಈ ವೇಳೆ ಗೂಳಿಗೆ ಡಿಕ್ಕಿ ಹೊಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈಲನ್ನು ಸುಮಾರು 15 ನಿಮಿಷಗಳ ಕಾಲ ತಡೆಹಿಡಿಯಲಾಗಿದ್ದು, ರೈಲು ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದಾಗಿ ರೈಲಿನ ಮುಂಬಾಗದ ಒಂದು ಭಾಗಕ್ಕೆ ಹಾನಿಯಾಗಿದೆ.

ಇದನ್ನೂ ಓದಿ: ಚೀನಾ ಲಿಂಕ್: 44 ಅರೆಹೈಸ್ಪೀಡ್ ವಂದೇ ಭಾರತ್‌ ರೈಲು ಟೆಂಡರ್‌‌ ರದ್ದು

“ಮುಂಭಾಗದ ಕೋಚ್ ಅಂದರೆ ಡ್ರೈವರ್ ಕೋಚ್‌ನ ಒಂದು ಭಾಗದ ಕವರ್‌ಗೆ ಹಾನಿಯಾಗಿರುವುದನ್ನು ಹೊರತುಪಡಿಸಿ ರೈಲಿಗೆ ಯಾವುದೇ ಹಾನಿಯಾಗಿಲ್ಲ. ರೈಲು ಸರಾಗವಾಗಿ ಚಲಿಸುತ್ತಿದೆ. ಅದನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ದನಕರುಗಳು ಓಡಾಡುತ್ತಿರುವಾಗ, ಒಂದು ಗೂಳಿ ಡಿಕ್ಕಿ ಹೊಡೆದಿದೆ” ಎಂದು ಭಾರತೀಯ ರೈಲ್ವೇಯ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

ಘಟನೆಯ ನಂತರ ರೈಲ್ವೆ ಅಧಿಕಾರಿಗಳು ತಮ್ಮ ಜಾನುವಾರುಗಳನ್ನು ಟ್ರ್ಯಾಕ್ ಬಳಿ ಬಿಡದಂತೆ ಹತ್ತಿರದ ಗ್ರಾಮಸ್ಥರಿಗೆ ಸಲಹೆ ನೀಡಲು ಪ್ರಯತ್ನಿಸುತ್ತಿದ್ದಾರೆ.

ರೈಲಿನ ವೇಗವನ್ನು ಗಂಟೆಗೆ 160 ಕಿಲೋಮೀಟರ್‌ಗೆ ಹೆಚ್ಚಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಪಶ್ಚಿಮ ರೈಲ್ವೇ ಗಾಂಧಿನಗರ-ಅಹಮದಾಬಾದ್ ವಿಭಾಗದಲ್ಲಿ ಫೆನ್ಸಿಂಗ್ ಕೆಲಸವನ್ನು ಕೈಗೊಳ್ಳಲಿದೆ ಎಂದು ಸಿಪಿಆರ್‌ಒ ಹೇಳಿದ್ದಾರೆ. ಫೆನ್ಸಿಂಗ್ ಕೆಲಸ ಮಾರ್ಚ್ 2024 ರೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸರಣಿಯ ಮೂರನೇ ಸೇವೆಯಾದ ಸ್ವದೇಶಿ ವಿನ್ಯಾಸ ಮತ್ತು ನಿರ್ಮಿಸಿದ ಸೆಮಿ-ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ಗಾಂಧಿನಗರದಿಂದ ಚಾಲನೆ ನೀಡಿದ್ದರು ಮತ್ತು ಮರುದಿನದಿಂದ ರೈಲು ತನ್ನ ವಾಣಿಜ್ಯ ಸಂಚಾರವನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ಅಕ್ಟೋಬರ್ 6 ರಂದು ಗುಜರಾತ್‌ನ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ಮುಂಬೈನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು. ಈ ವೇಳೆ ರೈಲಿಗೆ ಹಾನಿಯಾದ ಕಾರಣ ಅದರ ಮುಂಬಾಗದ ಕವರ್‌‌ ಅನ್ನು ರಾತ್ರೋರಾತ್ರಿ ಬದಲಾಯಿಸಬೇಕಾಯಿತು. ಮರುದಿನ (ಅಕ್ಟೋಬರ್ 7) ಸಂಭವಿಸಿದ ಎರಡನೇ ಘಟನೆಯಲ್ಲಿ, ಮುಂಬೈಗೆ ತೆರಳುತ್ತಿದ್ದಾಗ ಗುಜರಾತ್‌ನ ಆನಂದ್ ಬಳಿ ರೈಲು ಹಸುವಿಗೆ ಡಿಕ್ಕಿ ಹೊಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...