Homeಕರ್ನಾಟಕಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

ಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

“ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು”

- Advertisement -
- Advertisement -

ಕೇಂದ್ರ ಸರಕಾರದ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌‌ಎಸ್‌ಸಿ) ವಿವಿಧ ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

#ಕೇಂದ್ರ_ಸರಕಾರಿ_ಕೆಲಸ_ಕನ್ನಡಿಗರ_ಹಕ್ಕು ಹ್ಯಾಷ್‌ಟ್ಯಾಗ್‌ ಬಳಸಿರುವ ಅವರು ಸರಣಿ ಟ್ವೀಟ್ ಮಾಡಿದ್ದಾರೆ. “ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಹಿಂದಿ, ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ! ಇದೆಂಥಾ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

“ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ” ಎಂದು ತಿಳಿಸಿದ್ದಾರೆ.

“ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...