Homeಮುಖಪುಟಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಉರ್ದು ಹೆಸರಿನ ಸಂಸ್ಥೆಯ ಮೂಲಕ, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಬಳಸಿ ಖರೀದಿಸಿದ ಸಂಸ್ಥೆಗೆ ಬಜರಂಗದಳದ ಮಾಜಿ ಸಂಚಾಲಕ,ಬಿಜೆಪಿ ನಾಯಕನೇ ಮುಖ್ಯಸ್ಥ!

- Advertisement -
- Advertisement -

“ಇಲ್ಲಿ ಮುಸ್ಲಿಮರ ವಸತಿ ಯೋಜನೆ ಬರುತ್ತಿದೆ” ಎಂದು ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ಸಣ್ಣ ರೈತರು ಸೇರಿದಂತೆ ಇತರರಿಂದ ಸುಮಾರು 200 ಎಕರೆ ಭೂಮಿಯನ್ನು ಬಿಜೆಪಿ ಬೆಂಬಲಿತ ಹಿಂದುತ್ವ ಸಂಘಟನೆ ಖರೀಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ರೈತರಿಂದ ಭೂಮಿ ಖರೀದಿಸುವಾಗ “ತಂಝೀಮ್-ಎ-ಝಾರ್ಖೆಜ್” ಎಂಬ ಉರ್ದು ಹೆಸರಿನ ಸಂಸ್ಥೆಯ ಮೂಲಕ, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಬಳಸಿ ಖರೀದಿಸಲಾಗಿದೆ ಎಂದು ಮೋಸ ಹೋಗಿರುವ ರೈತರು ಆರೋಪಿಸಿದ್ದಾರೆ. ಇದೀಗ ತಾವು ಮಾರಾಟ ಮಾಡಿರುವ ಪ್ರದೇಶದಲ್ಲಿ ವಸತಿ ಕಾಲೋನಿ ರೂಪುಗೊಳ್ಳುತ್ತಿರುವುದರಿಂದ ರೈತರು ವಿಚಾರಣೆ ನಡೆಸುವಂತೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2000 ರಲ್ಲಿ ರಾಜ್ಯದ ಖಾರ್ಗೋನ್ ಪಟ್ಟಣದ ಹೊರವಲಯದಲ್ಲಿರುವ ಭೂಮಿಯನ್ನು ರೈತರು ಅದರಲ್ಲೂ ಸಣ್ಣ ರೈತರು ಮಾರಾಟ ಮಾಡಿದ್ದರು. ಈ ಪ್ರದೇಶದಲ್ಲಿ ಮುಸ್ಲಿಮರ ವಸತಿ ಯೋಜನೆ ಬರುತ್ತಿದೆ ಎಂದು ಹೇಳಿದ್ದರಿಂದ ‘ನಾವು ಭೂಮಿಯನ್ನು ಮಾರಾಟ ಮಾಡಿ ಮೋಸ ಹೋಗಿದ್ದೇವೆ’ ಎಂದು ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

2007 ರಲ್ಲಿ ಭೂಮಿಯ ಖರೀದಿಯ ಎಲ್ಲಾ ಒಪ್ಪಂದಗಳು ಮುಗಿದ ನಂತರ ಸಂಸ್ಥೆಯ “ತಂಝೀಮ್-ಎ-ಝಾರ್ಖೆಜ್” ಎಂಬ ಹೆಸರನ್ನು “ಪ್ರೊಫೆಸರ್ ಪಿ.ಸಿ. ಮಹಾಜನ್ ಫೌಂಡೇಶನ್” ಎಂದು ಬದಲಾಯಿಸಲಾಗಿದೆ. ಸಂಸ್ಥೆಯ ಪದಾಧಿಕಾರಿಗಳು ಇದರಲ್ಲಿ ಯಾವುದೇ ಮೋಸ ನಡೆದಿಲ್ಲ ಎಂದು ರೈತರ ಆರೋಪವನ್ನು ನಿರಾಕರಿಸಿದ್ದಾರೆ.

ಪ್ರಸ್ತುತ ಆಡಳಿತಾರೂಢ ಬಿಜೆಪಿಯ ನಾಯಕ ರಂಜೀತ್ ಸಿಂಗ್ ದಂಡಿರ್‌ ಅವರು ಈ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ರಂಜೀತ್‌ ಸಿಂಗ್‌ ಅವರು ಈ ಹಿಂದೆ ಬಜರಂಗದಳದ ರಾಜ್ಯ ಸಹ ಸಂಚಾಲಕರಾಗಿದ್ದರು. ಅಲ್ಲದೆ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

“ನಾವು ಭೂಮಿಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದೇವೆ” ಎಂದು ಸಂಸ್ಥೆಯ ನಿರ್ದೇಶಕ ರವಿ ಮಹಾಜನ್ ಹೇಳಿದ್ದಾರೆ. ಸಂಸ್ಥೆಯ ಭೂಮಿಯಲ್ಲಿ ವಸತಿ ನಿವೇಶನಗಳ ಜೊತೆಗೆ ಬಿಡಾಡಿ ಹಸುಗಳಿಗೆ ಗೋಶಾಲೆ ಅಥವಾ ಆಶ್ರಯ ತಾಣವನ್ನೂ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಆದರೆ ರೈತರು, ತಮ್ಮನ್ನು ಮೋಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನಮ್ಮನ್ನು ಸಂಪರ್ಕಿಸುವ ಏಜೆಂಟ್‌ಗಳು ಮುಸ್ಲಿಮರು ಎಂದು ನಾವು ಭಾವಿಸಿದ್ದೆವು ಅವರು ಹೇಳುತ್ತಾರೆ.

ಇದನ್ನೂ ಓದಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಪ್ರತಿಭಟನೆ 

“2004 ರಲ್ಲಿ ಜಾಕಿರ್ ಎಂಬ ವ್ಯಕ್ತಿ ನಮ್ಮ ಬಳಿಗೆ ಬಂದು, ‘ನಿಮ್ಮ ಸುತ್ತಮುತ್ತಲಿನ ಎಲ್ಲಾ ಭೂಮಿಯನ್ನು ಖರೀದಿಸಿದ್ದೇನೆ. ಇಲ್ಲಿ ಶೀಘ್ರದಲ್ಲೇ ಕಸಾಯಿಖಾನೆ ಇರುತ್ತದೆ. ನಿಮ್ಮ ಭೂಮಿಯನ್ನು ಮುಸ್ಲಿಮರಿಗೆ ಮಾರಾಟ ಮಾಡಿ. ಹೇಗಿದ್ದರೂ ಇಲ್ಲಿ ನಮ್ಮ ಸಮುದಾಯ ಬಂದು ನೆಲೆಸುತ್ತಿದೆ’ ಎಂದು ಹೇಳಿದ್ದರು. ಹೀಗೆ ಹೇಳಿದಾಗ ನಾನು ಕೂಡಾ ನನ್ನ ಭೂಮಿಯನ್ನು ಮಾರಾಟ ಮಾಡಿದ್ದೇನೆ” ಎಂದು ಭೂಮಿ ಕಳೆದುಕೊಂಡಿರುವ ರೈತ ನಂದಕಿಶೋರ್ ಕುಶ್ವಾಹ ಹೇಳಿದ್ದಾರೆ. ಅವರ ಐದು ಎಕರೆ ಭೂಮಿಗೆ 40 ಸಾವಿರ ರೂ. ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಖರೀದಿ ಮಾಡಲಾಗಿರುವ ಭೂಮಿಯಲ್ಲಿ ಹಜ್ ಭವನ ರಚಿಸಲಾಗುವುದು ಮತ್ತು ಸ್ಮಶಾನವನ್ನು ಸಹ ಸ್ಥಾಪಿಸಲಾಗುವುದು ಎಂದು ತಮಗೆ ತಿಳಿಸಲಾಗಿತ್ತು ಎಂದು ಇತರ ರೈತರು ಹೇಳಿದ್ದಾರೆ.

ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ | Naanu Gauri

ತಂಝೀಮ್-ಎ-ಝಾರ್ಖೆಜ್ ಎಂಬ ಸಂಸ್ಥೆಯನ್ನು 2002 ರಲ್ಲಿ ಹಿಂದೂಗಳ ಗುಂಪು ರಚಿಸಿತು. ಅವರು ನಂತರ ಜಾಕಿರ್ ಶೇಖ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಅದಕ್ಕೆ ಮ್ಯಾನೇಜರ್ ಆಗಿ ನೇಮಿಸಿಕೊಂಡಿದ್ದರು.

ವಿವಾದದ ಬಗ್ಗೆ NDTV ಜೊತೆಗೆ ಮಾತನಾಡಿದ ಜಾಕಿರ್‌,“ಸಂಸ್ಥೆಯ ಉದ್ದೇಶವು ಸಾಮಾಜಿಕ ಉದ್ದೇಶಕ್ಕಾಗಿ ಕೆಲಸ ಮಾಡುವುದು ಎಂದು ನಾನು ಭಾವಿಸಿದೆ. ಆದರೆ ನಾನು ಯಾರನ್ನೂ ಅವರ ಭೂಮಿಯನ್ನು ಮಾರಾಟ ಮಾಡುವಂತೆ ಒತ್ತಾಯಿಸಲಿಲ್ಲ ಅಥವಾ ದಾರಿ ತಪ್ಪಿಸಲಿಲ್ಲ. ಪ್ರಕಾಶ್ ಸ್ಮೃತಿ ಸೇವಾ ಸಂಸ್ಥಾನ ಎಂಬ ಅದೇ ಗುಂಪಿನಿಂದ ರಚಿಸಲ್ಪಟ್ಟ ಮತ್ತೊಂದು ಸಂಸ್ಥೆಯು ಕೆಲವು ಭೂಮಿಯನ್ನು ಖರೀದಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

200 ಎಕರೆಯಲ್ಲಿ, 150 ಎಕರೆಯನ್ನು 11 ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ಖರೀದಿಸಲಾಗಿದೆ. ಉಳಿದ ಐವತ್ತು ಎಕರೆ ಭೂಮಿಯನ್ನು ಸಣ್ಣ ರೈತರಿಂದ ಖರೀದಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

“ಬಬ್ಲು ಖಾನ್ ಎಂಬ ವ್ಯಕ್ತಿ ತನ್ನ ತಂದೆಯ ಬಳಿಗೆ ಬಂದಿದ್ದರು. ನಾವು ನಮ್ಮಲ್ಲಿದ್ದ ಒಂಬತ್ತು ಎಕರೆಗಳನ್ನು ಮಾರಾಟ ಮಾಡಿದ್ದೇವೆ” ಎಂದು ದೀಪಕ್ ಕುಶ್ವಾಹ ಎಂಬ ರೈತರೊಬ್ಬರು ಹೇಳಿದ್ದಾರೆ.

“ಹಜ್ ಸಮಿತಿ ರಚನೆಯಾಗುತ್ತದೆ. ಮುಸ್ಲಿಮರು ಇಲ್ಲಿ ಬಂದು ನೆಲೆಸುತ್ತಾರೆ ಎಂದು ನನ್ನ ಸಂಬಂಧಿಕರು ಭಾವಿಸಿದ್ದರು. ಅದಕ್ಕಾಗಿ ಅವರು ಭಯಭೀತರಾಗಿ ಭೂಮಿಯನ್ನು ಮಾರಾಟ ಮಾಡಿದರು. ಕೊನೆಯಲ್ಲಿ ನಾನು ಕೂಡಾ ನನ್ನ ಭೂಮಿಯನ್ನೂ ಮಾರಿದೆ” ಎಂದು ಸಂಜಯ್ ಸಿಂಘ್ವಿ ಎಂಬ ಉದ್ಯಮಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಂಸ್ಥೆಯ ಮುಖ್ಯಸ್ಥ, ಬಿಜೆಪಿ ನಾಯಕ ರಂಜೀತ್ ಸಿಂಗ್‌ ದಂಡಿರ್, “ನಾನು ಇಲ್ಲಿ ಚಿರಪರಿಚಿತನಾಗಿರುವುದರಿಂದ ಎಲ್ಲದಕ್ಕೂ ನನ್ನ ಹೆಸರನ್ನು ಎಳೆಯಲಾಗುತ್ತಿದೆ” ಎಂದು ಹೇಳಿದ್ದಾರೆ. ಅವರು ತಾನು ಎದುರಿಸುತ್ತಿರುವ ಕೆಲವು ಪ್ರಕರಣಗಳ ಬಗ್ಗೆ ಮಾತನಾಡಿ,“ನಾನು ಏಳು ಬಾರಿ ಜೈಲು ವಾಸ ಅನುಭವಿಸಿದ್ದೇನೆ; ನನ್ನ ಮೇಲೆ ಕೊಲೆ ಆರೋಪಗಳಿವೆ – ಏಕೆಂದರೆ ನನ್ನ ಜೀವನದುದ್ದಕ್ಕೂ ನಾನು ಹಿಂದೂ ಸಮಾಜಕ್ಕಾಗಿ ಕೆಲಸ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಸಂಸ್ಥೆಯ ಹೆಸರು ಮತ್ತು ಭೂಮಿಯ ಬಳಕೆಯ ಬಗ್ಗೆ ಮಾತನಾಡಿದ ಅವರು,“ನಮಗೆ ಖಾರ್ಗೋನ್ ಪ್ರದೇಶದಲ್ಲಿ ಗೋಶಾಲೆ ಬೇಕು. ಅದನ್ನು ಇಲ್ಲಿ ನಿರ್ಮಿಸಿ ಸಮಾಜಕ್ಕೆ ಮತ್ತು ಗೋವುಗಳಿಗೆ ಏನಾದರೂ ಒಳ್ಳೆಯದನ್ನು ಮಾಡಬಹುದು ಎಂದು ನಾನು ಭಾವಿಸಿದೆ. ಆದರೆ ಅದಕ್ಕೆ ನಾವು ತಂಝೀಮ್-ಎ-ಝಾರ್ಖೆಜ್ ಎಂದು ಹೆಸರಿಟ್ಟರೆ ಏನು ಸಮಸ್ಯೆ ಎಂದು ನನಗೆ ತಿಳಿದಿಲ್ಲ” ಎಂದು ಅವರು ಹೇಳಿದ್ದಾರೆ.

“ಆದರೆ ಇದೀಗ ಸಂಸ್ಥೆಯ ನಿರ್ದೇಶಕರಾಗಿರುವ ರವಿ ಮಹಾಜನ್ ಅವರ ತಂದೆಯ ಹೆಸರನ್ನು ಇಡಲಾಗಿದೆ. ತಂಝೀಮ್-ಎ-ಝಾರ್ಖೆಜ್‌ನ ಅರ್ಥ ಪಾಳುಭೂಮಿಯನ್ನು ಫಲವತ್ತಾಗಿಸುವುದು. ಜನರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ ಎಂದು ಭಾವಿಸಿ, ಇದೀಗ ಅದರ ಹೆಸರನ್ನು ಬದಲಾಯಿಸಿದ್ದೇವೆ” ಎಂದು ರಂಜೀತ್ ಸಿಂಗ್‌ ದಂಡಿರ್ ಹೇಳಿದ್ದಾರೆ.

“ಎಲ್ಲಾ ಆಪಾದನೆಗಳು ಕೇವಲ ದಾರಿತಪ್ಪಿಸುವಂತಿವೆ. ಅವೆಲ್ಲವೂ ಅಪ-ಪ್ರಚಾರದ ಭಾಗವಾಗಿದೆ. ಕಾನೂನು ಪ್ರಕಾರವೇ ಎಲ್ಲಾ ಕೆಲಸಗಳನ್ನು ಮಾಡಲಾಗಿದೆ. ಬಡವರಿಗೆ ಮನೆ ಸಿಕ್ಕಿದೆ. ಈ ಭೂಮಿ ಬರಡಾಗಿತ್ತು. ನೆಲದಡಿಯಲ್ಲಿ 700 ಅಡಿಗಳಷ್ಟು ನೀರು ಇರಲಿಲ್ಲ. ನಾನು ಅಣ್ಣಾ ಹಜಾರೆ ಮತ್ತು ಬಾಬಾ ಆಮ್ಟೆ ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ಸಮಾಜಕ್ಕೆ ಸಂದೇಶ ನೀಡಲು ನಾವು ಇಲ್ಲಿನ ಭೂಮಿಯನ್ನು ಹಸಿರು ಮಾಡಲು ಬಯಸಿದ್ದೇವೆ” ಎಂದು ರಂಜೀತ್ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: ಭದ್ರಾವತಿ: ಬಜರಂಗದಳದ ದುಷ್ಕರ್ಮಿಗಳಿಂದ ದಾಂಧಲೆ; 6 ಮಂದಿ ವಿರುದ್ಧ ಎಫ್‌ಐಆರ್‌

ವಿವಾದದ ಕುರಿತು ರಾಜ್ಯ ಬಿಜೆಪಿ ಅಂತರ ಕಾಯ್ದುಕೊಂಡಿದೆ. “ನಮ್ಮ ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಸಮಸ್ಯೆ ಮಾರಾಟಗಾರ ಮತ್ತು ಖರೀದಿದಾರರ ನಡುವಿನದ್ದು. ಅವರಿಗೆ ತಮ್ಮದೇ ಆದ ಆರ್ಥಿಕ ಹಿತಾಸಕ್ತಿ ಇದೆ” ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ರಜನೀಶ್ ಅಗರ್ವಾಲ್ ಹೇಳಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಕುಮಾರ್ ಪುರುಷೋತ್ತಮ್, ಸೇರಿದಂತೆ ಪೊಲೀಸರು ಹಾಗೂ ಅಧಿಕಾರಿಗಳು ಪ್ರತಿಕ್ರಿಯಿಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...