Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

- Advertisement -
- Advertisement -

ಕನ್ನಡಿಗರ ಹೃದಯದಲ್ಲಿ ನೆಲೆಸಿರುವ ಪುನೀತ್‌ ರಾಜ್‌ಕುಮಾರ್‌, ಎಲ್ಲರ ಪ್ರೀತಿಯ ನಟ ಅಪ್ಪು ಅವರು ಅಗಲಿ ಒಂದು ವರ್ಷವಾಗಿದೆ. ಪುನೀತ್‌‌ ಅವರ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅಪ್ಪು ನಮ್ಮನ್ನು ನಿನ್ನೆ ಮೊನ್ನೆಯೋ ಬಿಟ್ಟು ಹೋದರೇನೋ ಎಂಬಂತೆ ಭಾಸವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ, ಸಹಿಸುವುದಿಲ್ಲ ಇಲ್ಲ. ಈ ಹೊತ್ತಿನಲ್ಲಿ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರು ಹಗುರವಾಗಿ ಮಾತನಾಡಿದ್ದಾರೆಂದು ಪ್ರತಿಪಾದಿಸಿ ಪೋಸ್ಟರ್‌ವೊಂದು ವೈರಲ್‌ ಆಗುತ್ತಿದೆ.

“ಪುನೀತ್‌ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ?- ಚಕ್ರವರ್ತಿ ಸೂಲಿಬೆಲೆ” ಎಂದಿರುವ ಪೋಸ್ಟರ್‌ಅನ್ನು ಸಾಕಷ್ಟು ಜನರು ಹಂಚಿಕೊಳ್ಳುತ್ತಿದ್ದಾರೆ. ‘ಬಿ ಟಿವಿ’ ಚಾನೆಲ್‌ ವರದಿ ಮಾಡಿರುವಂತೆ ಈ ಪೋಸ್ಟರ್‌ ರೂಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

May be an image of 1 person and text that says "ಪುನೀತ್ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ? BTVNEWSLIVE.COM ಚಕ್ತವರ್ತಿ ಸೂಲಿಬೆಲೆ"

ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಈ ಪೋಸ್ಟರ್‌ ಅನ್ನು ಅನೇಕರು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ. ಕೆಲವರು ಡಿಲೀಟ್ ಕೂಡ ಮಾಡಿದ್ದಾರೆ. ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಸೂಲಿಬೆಲೆಯವರಿಗೆ ಖಾರವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವಾಟ್ಸ್‌ಅಪ್‌ ಗ್ರೂಪ್‌ವೊಂದರಲ್ಲಿ ಆಗಿರುವ ಚರ್ಚೆ

“ಮೊದಲು ಹಂಸಲೇಖ. ಆಮೇಲೆ ಚೇತನ್ ಅಹಿಂಸಾ. ಇವಾಗ ಡಾಲಿ ಧನಂಜಯ. ಮತ್ತೆ ಪುನೀತ್ ರಾಜ್ ಕುಮಾರ್ ರವರ ಬಳಿ ಬರ್ತಿದಾರೆ. ಇದಕ್ಕೆ ಅಭಿಮಾನಿಗಳೇ ಉತ್ತರ ನೀಡ್ತಾರೆ. ಇದ್ಯಾಕೋ ಅತಿ ಅಯ್ತು ಅನ್ಸಲ್ವಾ?” ಎಂದು ಅಪ್ಪು ಅಭಿಮಾನಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಡಾ.ಪುನೀತ್ ರಾಜ್ ಕುಮಾರ್ ನಮಗೆಲ್ಲ ಸ್ಪೂರ್ತಿ. ಅವರನ್ನು ಕಳೆದುಕೊಂಡಾಗ ಕರ್ನಾಟಕದ ಪ್ರತಿಯೊಬ್ಬರು ಕಣ್ಣೀರು ಹಾಕಿದ್ದಾರೆ. ನಮ್ಮ ಅಪ್ಪು ಬಗ್ಗೆ ಮಾತನಾಡುವ ಅರ್ಹತೆಯೂ ನಿಮಗಿಲ್ಲ. ನಮ್ಮ ಪರಮಾತ್ಮ, ನಿಮ್ಮಂತೆ ನಮಗೆ ಸುಳ್ಳು ಹೇಳಿಲ್ಲ” ಎಂದು ಯೂತ್‌ ಕಾಂಗ್ರೆಸ್ ಕರ್ನಾಟಕ ಘಟಕವು ಟ್ವೀಟ್ ಮಾಡಿದೆ. (ಅರ್ಕೈವ್‌ ಲಿಂಕ್‌)

“ಈ ರೀತಿಯಲ್ಲಿ ಬಿಟಿವಿ ವರದಿ ಮಾಡಿದೆಯೇ?” “ಸುದ್ದಿ ನಿಜವೇ?” ಎಂದು ‘ನಾನುಗೌರಿ.ಕಾಂ’ ಪರಿಶೀಲಿಸಿದೆ. ‘ಬಿ ಟಿವಿ’ಯ ಪತ್ರಕರ್ತ ನವೀನ್‌ ಸೂರಿಂಜೆ ಅವರನ್ನು ಸಂಪರ್ಕಿಸಿದಾಗ, “ಈ ರೀತಿಯ ಶೀರ್ಷಿಕೆಯಲ್ಲಿ ಯಾವುದೇ ಸುದ್ದಿಯನ್ನು ನಾವು ಮಾಡಿಲ್ಲ. ಆದರೆ ಬಿ.ಟಿ.ಯ ಮಾದರಿಯಲ್ಲೇ ಪೋಸ್ಟರ್‌ ಎಡಿಟ್ ಮಾಡಲಾಗಿದೆ. ಹಿಂದೊಮ್ಮೆ ಆಗಿದ್ದ ಸುದ್ದಿಯಲ್ಲಿ ಶೀರ್ಷಿಕೆಯನ್ನು ಅಳಸಿ, ಬೇರೆ ಶೀರ್ಷಿಕೆ ನೀಡಿ ವೈರಲ್‌ ಮಾಡಿದ್ದಾರೆ. ಸೂಲಿಬೆಲೆಯವರು ಪುನೀತ್ ರಾಜ್‌ಕುಮಾರ್‌ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದು ಚರ್ಚೆಯಾಗಿತ್ತು. ಈಗ ವೈರಲ್‌ ಆಗುತ್ತಿರುವ ಪೋಸ್ಟರ್‌ಗೂ ಬಿಟಿವಿಗೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು. ಬಿಟಿವಿ ಮಾಡಿದ್ದ ಹಳೆಯ ಸುದ್ದಿ ತುಣುಕನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದರು.

“ಹಿಂದೂಗಳ ರಕ್ಷಣೆ ನೀವೇ ಮಾಡುತ್ತೀರೋ, ನಾವೇ ಮಾಡಿಕೊಳ್ಳಬೇಕಾ… ಗೃಹ ಸಚಿವರಿಗೆ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ…” ಎಂಬ ಶೀರ್ಷಿಕೆಯಲ್ಲಿ ‘ಬಿ ಟಿವಿ’ ಮಾಡಿರುವ ವರದಿಯಲ್ಲಿ ಬಳಸಲಾಗಿರುವ ಪೋಸ್ಟರ್‌ನಲ್ಲಿ ‘ಸರ್ಕಾರ ಹಾಗೂ ಇಂಟೆಲಿಜೆನ್ಸ್‌ ವಿಫಲವಾಗಿದೆ’ ಎಂದು ಬರೆದಿರುವುದನ್ನು ಕಾಣಬಹುದು.

ಅಪ್ಪು ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ; ನಂತರ ಕ್ಷಮೆಯಾಚಿಸಿದ್ದ ಸೂಲಿಬೆಲೆ

“ಚಕ್ರವರ್ತಿ ಸೂಲಿಬೆಲೆ ಅಪ್ಪು ಬಗ್ಗೆ ಹಗುರವಾಗಿ ಟ್ವೀಟ್‌ ಮಾಡಿದ ಆರೋಪಕ್ಕೆ ಈ ಹಿಂದೆ ಗುರಿಯಾಗಿದ್ದರು.” ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಅಪ್ಪು ಅವರ ಸಾವಿನ ಸಂದರ್ಭದ ಬಗ್ಗೆ ಲಘುವಾಗಿ ಟ್ವೀಟ್ ಮಾಡಿದ್ದು ಆಕ್ಷೇಪಗಳಿಗೆ ಕಾರಣವಾಗಿತ್ತು.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುತ್ತಾ ಚಕ್ರವರ್ತಿ ಸೂಲಿಬೆಲೆ, ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿದ್ದರು.

ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ್ದ ಚಕ್ರವರ್ತಿ ಸೂಲಿಬೆಲೆ, ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಅಣಕ ಮಾಡಿದ್ದರು.

“ಉಪಯೋಗಕ್ಕೆ ಬಾರದ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಜನರ ವಿರೋಧದ ಬಳಿಕ ಸೂಲಿಬೆಲೆ, “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...