Homeಕರ್ನಾಟಕಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಸುತ್ತೋಲೆ ಹೊರಡಿಸಿ, ನಂತರ ವಾಪಸ್ ಪಡೆಯುವ ಸರ್ಕಾರದ ದ್ವಂದ್ವ ನೀತಿ ಮತ್ತೊಮ್ಮೆ ಸಾಬೀತಾಗಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ತರಾತರಿಯಲ್ಲಿ ಮಾಡಿದ್ದ ಪಠ್ಯಪುಸ್ತಕ ಪರಿಷ್ಕರಣೆಯ ಅಧ್ವಾನ ಬಗೆಹರಿಯುವಂತೆ ಕಾಣುತ್ತಿಲ್ಲ. ನಾಡಗೀತೆಗೆ ಅವಮಾನ ಮಾಡಿದ ಆರೋಪವನ್ನು ಹೊತ್ತಿರುವ ರೋಹಿತ್ ಚಕ್ರತೀರ್ಥ ಎಂಬವರು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ನಾಡಿನ ಹಿರಿಯ ಲೇಖಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಂತಿಮವಾಗಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿತ್ತು. ಆದರೆ ಮತ್ತೆ ಆ ಲೇಖಕರ ಪಠ್ಯಗಳು ಸೇರಿಸುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನಾಡಿನ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಹಾಗೂ ಡಾ. ಜಿ.ರಾಮಕೃಷ್ಣ ಅವರು ಸೇರಿದಂತೆ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದ ಸೆ.23ರ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದಿದೆ. ಈ ಮೂಲಕ ಅವರ ಗದ್ಯ ಮತ್ತು ಪದ್ಯಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

10ನೇ ತರಗತಿಯ ಪಠ್ಯದಲ್ಲಿನ (ಪ್ರಥಮ ಭಾಷೆ) ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಗದ್ಯ, ಜಿ.ರಾಮಕೃಷ್ಣ ಅವರ ‘ಭಗತ್ ಸಿಂಗ್’ ಪೂರಕ ಗದ್ಯ, 9ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’ ಪೂರಕ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ಈರಪ್ಪ ಎಂ.ಕಂಬಳಿ ಅವರ ‘ಹೀಗೊಂದು ಬಸ್ ಪ್ರಯಾಣ’ ಪೂರಕ ಗದ್ಯ, ಸತೀಶ್ ಕುಲಕರ್ಣಿ ಅವರ ‘ಕಟ್ಟುತ್ತೇವೆ ನಾವು’ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ದ್ವಿತೀಯ ಭಾಷೆ) ಸುಕನ್ಯ ಮಾರುತಿ ಅವರ ‘ಏಣಿ’ ಪದ್ಯ, 6ನೇ ತರಗತಿ ಪಠ್ಯದಲ್ಲಿನ (ಪ್ರಥಮ ಭಾಷೆ) ದೊಡ್ಡಹುಲ್ಲೂರು ರುಕ್ಕೋಜಿರಾವ್‌ ಅವರ ‘ಡಾ.ರಾಜ್ ಕುಮಾರ್’ ಗದ್ಯಗಳನ್ನು ಪರಿಗಣಿಸದಂತೆ ಶಿಕ್ಷಣ ಇಲಾಖೆಯು ಒಂದು ತಿಂಗಳ ಹಿಂದೆ ಆದೇಶ ಹೊರಡಿಸಿತ್ತು.

ಹಿಂದುತ್ವದ ಅಜೆಂಡಾಗಳನ್ನು ಹೇರಿ, ಪಠ್ಯಪುಸ್ತಕಗಳನ್ನು ಕೇಸರೀಕರಣ ಮಾಡಿದ ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ನಾಡಿನಾದ್ಯಂತ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಆದೇಶವಿಲ್ಲದೆಯೇ ಪಠ್ಯಪರಿಷ್ಕರಣೆಯಾಗಿದ್ದು ವಿವಾದ ಸೃಷ್ಟಿಸಿತ್ತು. ನಾಡಿನ ಅನೇಕ ಸಾಹಿತಿಗಳು ತಮ್ಮ ಪಠ್ಯವನ್ನು ಕೈಬಿಡುವಂತೆ ಕೋರಿದ್ದರು. ಈ ಸಂಬಂಧ ಪತ್ರ ಸಹ ಬರೆದಿದ್ದರು. ಗದ್ಯ ಮತ್ತು ಪದ್ಯಗಳನ್ನು ಪಠ್ಯದಲ್ಲಿ ಉಳಿಸಿಕೊಳ್ಳಲು ಶಿಕ್ಷಣ ಇಲಾಖೆ ಈ ಲೇಖಕರ ಅನುಮತಿ ಕೋರಿತ್ತು. ಮನವಿಯನ್ನು ಲೇಖಕರು ತಿರಸ್ಕರಿಸಿದ್ದರು. ಈ ಹಿನ್ನೆಲೆ ಸುತ್ತೋಲೆ ಹೊರಡಿಸಲಾಗಿತ್ತು. ಪೋಷಕ, ವಿದ್ಯಾರ್ಥಿಗಳ, ಗಣ್ಯರ ಕೋರಿಕೆಯ ಮೇರೆಗೆ ಪಠ್ಯಗಳನ್ನು ಮುಂದುವರೆಸುತ್ತಿರುವುದಾಗಿ ಇಲಾಖೆ ಸ್ಪಷ್ಟ ಪಡಿಸಿದೆ.

ಸರ್ಕಾರದ ನಿಲುವುಗಳ ಕುರಿತು ಜನರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸುದೀರ್ಘವಾದ ಟಿಪ್ಪಣಿಯನ್ನು ಪೋಸ್ಟ್‌ ಮಾಡಿರುವ ಲೇಖಕಿ ಸಂಜ್ಯೋತಿಯವರು, “ಲೇಖಕರ ಅನುಮತಿಯಿಲ್ಲದೆ ಅವರ ಪಠ್ಯವನ್ನು‌ ಸೇರಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಅವರ ಅನುಮತಿ ಇಲ್ಲದೆಯೂ ಬೇಕಾದಂತೆ ಹಾಗೆ ಬಳಸಿಕೊಳ್ಳುವುದು ಅಕ್ರಮ (illegal) ಮತ್ತು ಸರ್ಕಾರ ನಡೆಸುತ್ತಿರುವವರ ನಿರ್ಲಜ್ಜ ಅಹಂಕಾರ” ಎಂದಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

“ಪೋಷಕರು, ಗಣ್ಯರು ಒತ್ತಾಯಿಸಿದ್ದು ಆ ಪಠ್ಯಗಳನ್ನು ಉಳಿಸಿಕೊಳ್ಳಲು ಅಗತ್ಯವಾದ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಅದಕ್ಕಾಗಿ ಸರ್ಕಾರ ನಿಜಕ್ಕೂ ಮಾಡಬೇಕಿದ್ದದ್ದು ಆ ಲೇಖಕರು ಯಾವ ಕಾರಣಕ್ಕೆ ಅನುಮತಿ ನಿರಾಕರಿಸಿದ್ದರೋ ಅದನ್ನು ಸರಿಪಡಿಸುವುದೇ ಹೊರತು, ಹೀಗೆ ಸರ್ವಾಧಿಕಾರಿ ಧೋರಣೆಯಿಂದ ಅನುಮತಿ ನಿರಾಕರಿಸಿದವರ ಲೇಖನಗಳನ್ನು ‘ನಮ್ಮಿಷ್ಟದಂತೆ ಬಳಸ್ತೀವಿ, ಏನಿವಾಗ’ ಅನ್ನೋ ಧೋರಣೆಯಿಂದ ಅಹಂಕಾರ ಮೆರೆಯೋದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಈಗ ಪೋಷಕರ ಗಣ್ಯರ ಒತ್ತಾಯದ ನೆಪ ಹೇಳಿ ಪಠ್ಯ ಮರುಸೇರ್ಪಡೆಯ ಕತೆ ಹೇಳುತ್ತಿರುವ ಸರ್ಕಾರಕ್ಕೆ ಅದೇ ‘ಪೋಷಕರು, ಗಣ್ಯರು’ ಇನ್ನಿಲ್ಲದಂತೆ ಈ ಅಕ್ರಮ, ಅಪ್ರಬುದ್ಧ ದುರುದ್ದೇಶಪೂರಿತ ಪರಿಷ್ಕರಣಾ ಸಮಿತಿಯನ್ನು ವಿರೋಧಿಸಿದ್ದು, ಅದನ್ನು ವಜಾಗೊಳಿಸುವಂತೆ, ಆ ಪರಿಷ್ಕರಣೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದು ಇದ್ಯಾವುದೂ ಕಿವಿಗೆ ಬೀಳಲಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಯಾವ ಲೇಖಕ, ಬರಹಗಾರರ ಮನೆಗೆ ಹೋಗಿ ಅವರ ಬರಹ ಪಡೆದಿಲ್ಲ. ಇವರೇ ಪಠ್ಯ ಸಮೀತಿಗೆ ಲಾಭಿ ಮಾಡಿ ಸೇರಿಸಿಕೊಂಡಿದ್ದಾರೆ. ಲಾಭ ಕೀರ್ತಿ ಪಡೆದಿದ್ದಾರೆ. ನಾವು ಇವರುಗಳನ್ನು ಅತ್ಯಂತ ಗೌರವಾನ್ವಿತರೆಂದು ಪ್ರೀತಿ ಮಾಡಿದ್ದೆವು. ಆದರಿಸುತ್ತಿದ್ದೆವು. ಪಠ್ಯ ಪ್ರಕಟವಾಗಿ ಮಕ್ಕಳು ಓದುವ ಕಾಲಘಟ್ಟದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಲೆಕ್ಕಿಸದೇ ಸ್ವಾರ್ಥ, ಪ್ರತಿಷ್ಟೆಗೆ ನನ್ನ ಬರಹ ವಾಪಾಸ್ ಪಡೆಯುತ್ತೇವೆ ಎಂದರೆ ಏನ್ರೀ ಅರ್ಥ. ಇವರುಗಳು ಸಾಹಿತಿಗಳೇ!? ಛೇ ಛೇ ಛೇ. ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಮಾರಕವಾಗಿ ನಿಂತಿರುವವರನ್ನು ಬಹಿಷ್ಕಾರ ಹಾಕಬೇಕು.
    ಜೆ.ಎಮ್ ರಾಜಶೇಖರ ಸಾಹಿತಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...