Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಭರತ್ ಬೆಂಗಳೂರು ಬುಲ್ಸ್ ತಂಡವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿಸಿದ್ದಾರೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿನ ಪಂದ್ಯಾವಳಿ ಆರಂಭಗೊಂಡು ಬಿರುಸಿನಿಂದ ಸಾಗುತ್ತಿದೆ. ಬೆಂಗಳೂರು ಬುಲ್ಸ್ ತಂಡವು ಸತತ ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲೊಂದಾಗಿದೆ. ಇದಕ್ಕೆ ಕಾರಣ ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಯುವ ಆಲ್‌ ರೌಂಡರ್ ಆಟಗಾರ ಭರತ್ ನರೇಶ್ ಹೂಡಾ.

ಅಂದು ಅಕ್ಟೋಬರ್ 22. ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ನಡುವಿನ ಕಬಡ್ಡಿ ಪಂದ್ಯ ನಡೆಯುತ್ತಿತ್ತು. ಪಂದ್ಯದ ಆರಂಭದಲ್ಲಿಯೇ ಆಕ್ರಮಣಕಾರಿ ಆಟವಾಡಿದ ಯು ಮುಂಬಾ ಬೆಂಗಳೂರು ತಂಡವನ್ನು ಎರಡು ಬಾರಿ ಆಲೌಟ್ ಮಾಡಿ 16 ಅಂಕಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಪಂದ್ಯ ಏಕಮುಖವಾಗಿ ಮುಗಿಯುತ್ತದೆ ಯು ಮುಂಬಾ ಸುಲಭವಾಗಿ ಗೆಲ್ಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಏಕೆಂದರೆ ಬುಲ್ಸ್ ತಂಡದ ಡಿಫೆಂಡಿಂಗ್ ತೀರಾ ಕಳಪೆಯಾಗಿತ್ತು. ಆಗ ಬಂದ ನೋಡಿ ಆಪತ್ಭಾಂಧವ ಭರತ್.. ತನ್ನ ಮಿಂಚಿನ ರೈಡಿಂಗ್ ಮೂಲಕ ಬೆಂಗಳೂರು ತಂಡಕ್ಕೆ ಸತತ ಪಾಯಿಂಟ್ ತಂದುಕೊಟ್ಟರು. ಪಂದ್ಯದ ಮೊದಲಾರ್ಧ ಮುಗಿದಾಗ ಬೆಂಗಳೂರು 13 ಪಾಯಿಂಟ್‌ಗಳ ಹಿನ್ನಡೆ ಅನುಭವಿಸಿತ್ತು.

ದ್ವಿತಿಯಾರ್ಧ ಆರಂಭವಾದ ಭರತ್ ಚುರುಕಿನ ರೈಡಿಂಗ್ ಮೂಲಕ ಯು ಮುಂಬಾ ತಂಡವನ್ನು ಮೂರು ಬಾರಿ ಆಲೌಟ್ ಮಾಡುವಲ್ಲಿ ಸಹಕಾರಿಯಾದರು. ತನ್ನ ಏಕಾಗ್ರತೆ ಮತ್ತು ಚಾಣಕ್ಷತನದಿಂದ 16 ರೈಡಿಂಗ್ ಪಾಯಿಂಟ್ ಗಳಿಸಿ ಬೆಂಗಳೂರು 10 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಅದೇ ರೀತಿ ದಬಾಂಗ್ ಡೆಲ್ಲಿ ನಡುವಿನ ಪಂದ್ಯದಲ್ಲಿಯೂ ಸಹ ಆಕ್ರಮಣಕಾರಿ ಆಟವಾಡಿದ ಭರತ್ ಕೈಚೆಲ್ಲಿ ಹೋಗಿದ್ದ ಪಂದ್ಯವನ್ನು ಕೊನೆಯ ಒಂದು ನಿಮಿಷದಲ್ಲಿ ತಹಬದಿಗೆ ತಂದು ಬೆಂಗಳೂರು ತಂಡ 4 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಆ ಪಂದ್ಯದಲ್ಲಿ ಭರತ್ 20 ರೈಡ್‌ಗಳಿಂದ 20 ಪಾಯಿಂಟ್ ಗಳಿಸಿ ಮಿಂಚಿದರು.

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಈ ಎಲ್ಲವೂ ಗೆಲುವಿನ ಪಂದ್ಯಗಳಲ್ಲಿಯೇ ಬಂದಿರುವುದು ವಿಶೇಷ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಮೂಲತಃ ಹರ್ಯಾಣದವರಾದ ಭರತ್ ತಮಗಿರುವ ಎತ್ತರವನ್ನು ಸಂಪೂರ್ಣವಾಗಿ ಬಳಸಿಕೊಂಡು ಚಾಕಚಕ್ಯತೆಯಿಂದ ಪಾಯಿಂಟ್ ಗಳಿಸಿ ಮಿಂಚುತ್ತಿದ್ದಾರೆ. 8ನೇ ಸೀಸನ್‌ನಲ್ಲಿ ಪವನ್ ಕುಮಾರ್ ಶೆರಾವತ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...