Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಭರತ್ ಬೆಂಗಳೂರು ಬುಲ್ಸ್ ತಂಡವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿಸಿದ್ದಾರೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿನ ಪಂದ್ಯಾವಳಿ ಆರಂಭಗೊಂಡು ಬಿರುಸಿನಿಂದ ಸಾಗುತ್ತಿದೆ. ಬೆಂಗಳೂರು ಬುಲ್ಸ್ ತಂಡವು ಸತತ ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲೊಂದಾಗಿದೆ. ಇದಕ್ಕೆ ಕಾರಣ ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಯುವ ಆಲ್‌ ರೌಂಡರ್ ಆಟಗಾರ ಭರತ್ ನರೇಶ್ ಹೂಡಾ.

ಅಂದು ಅಕ್ಟೋಬರ್ 22. ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ನಡುವಿನ ಕಬಡ್ಡಿ ಪಂದ್ಯ ನಡೆಯುತ್ತಿತ್ತು. ಪಂದ್ಯದ ಆರಂಭದಲ್ಲಿಯೇ ಆಕ್ರಮಣಕಾರಿ ಆಟವಾಡಿದ ಯು ಮುಂಬಾ ಬೆಂಗಳೂರು ತಂಡವನ್ನು ಎರಡು ಬಾರಿ ಆಲೌಟ್ ಮಾಡಿ 16 ಅಂಕಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಪಂದ್ಯ ಏಕಮುಖವಾಗಿ ಮುಗಿಯುತ್ತದೆ ಯು ಮುಂಬಾ ಸುಲಭವಾಗಿ ಗೆಲ್ಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಏಕೆಂದರೆ ಬುಲ್ಸ್ ತಂಡದ ಡಿಫೆಂಡಿಂಗ್ ತೀರಾ ಕಳಪೆಯಾಗಿತ್ತು. ಆಗ ಬಂದ ನೋಡಿ ಆಪತ್ಭಾಂಧವ ಭರತ್.. ತನ್ನ ಮಿಂಚಿನ ರೈಡಿಂಗ್ ಮೂಲಕ ಬೆಂಗಳೂರು ತಂಡಕ್ಕೆ ಸತತ ಪಾಯಿಂಟ್ ತಂದುಕೊಟ್ಟರು. ಪಂದ್ಯದ ಮೊದಲಾರ್ಧ ಮುಗಿದಾಗ ಬೆಂಗಳೂರು 13 ಪಾಯಿಂಟ್‌ಗಳ ಹಿನ್ನಡೆ ಅನುಭವಿಸಿತ್ತು.

ದ್ವಿತಿಯಾರ್ಧ ಆರಂಭವಾದ ಭರತ್ ಚುರುಕಿನ ರೈಡಿಂಗ್ ಮೂಲಕ ಯು ಮುಂಬಾ ತಂಡವನ್ನು ಮೂರು ಬಾರಿ ಆಲೌಟ್ ಮಾಡುವಲ್ಲಿ ಸಹಕಾರಿಯಾದರು. ತನ್ನ ಏಕಾಗ್ರತೆ ಮತ್ತು ಚಾಣಕ್ಷತನದಿಂದ 16 ರೈಡಿಂಗ್ ಪಾಯಿಂಟ್ ಗಳಿಸಿ ಬೆಂಗಳೂರು 10 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಅದೇ ರೀತಿ ದಬಾಂಗ್ ಡೆಲ್ಲಿ ನಡುವಿನ ಪಂದ್ಯದಲ್ಲಿಯೂ ಸಹ ಆಕ್ರಮಣಕಾರಿ ಆಟವಾಡಿದ ಭರತ್ ಕೈಚೆಲ್ಲಿ ಹೋಗಿದ್ದ ಪಂದ್ಯವನ್ನು ಕೊನೆಯ ಒಂದು ನಿಮಿಷದಲ್ಲಿ ತಹಬದಿಗೆ ತಂದು ಬೆಂಗಳೂರು ತಂಡ 4 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಆ ಪಂದ್ಯದಲ್ಲಿ ಭರತ್ 20 ರೈಡ್‌ಗಳಿಂದ 20 ಪಾಯಿಂಟ್ ಗಳಿಸಿ ಮಿಂಚಿದರು.

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಈ ಎಲ್ಲವೂ ಗೆಲುವಿನ ಪಂದ್ಯಗಳಲ್ಲಿಯೇ ಬಂದಿರುವುದು ವಿಶೇಷ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಮೂಲತಃ ಹರ್ಯಾಣದವರಾದ ಭರತ್ ತಮಗಿರುವ ಎತ್ತರವನ್ನು ಸಂಪೂರ್ಣವಾಗಿ ಬಳಸಿಕೊಂಡು ಚಾಕಚಕ್ಯತೆಯಿಂದ ಪಾಯಿಂಟ್ ಗಳಿಸಿ ಮಿಂಚುತ್ತಿದ್ದಾರೆ. 8ನೇ ಸೀಸನ್‌ನಲ್ಲಿ ಪವನ್ ಕುಮಾರ್ ಶೆರಾವತ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...