Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಭರತ್ ಬೆಂಗಳೂರು ಬುಲ್ಸ್ ತಂಡವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿಸಿದ್ದಾರೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿನ ಪಂದ್ಯಾವಳಿ ಆರಂಭಗೊಂಡು ಬಿರುಸಿನಿಂದ ಸಾಗುತ್ತಿದೆ. ಬೆಂಗಳೂರು ಬುಲ್ಸ್ ತಂಡವು ಸತತ ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲೊಂದಾಗಿದೆ. ಇದಕ್ಕೆ ಕಾರಣ ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಯುವ ಆಲ್‌ ರೌಂಡರ್ ಆಟಗಾರ ಭರತ್ ನರೇಶ್ ಹೂಡಾ.

ಅಂದು ಅಕ್ಟೋಬರ್ 22. ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ನಡುವಿನ ಕಬಡ್ಡಿ ಪಂದ್ಯ ನಡೆಯುತ್ತಿತ್ತು. ಪಂದ್ಯದ ಆರಂಭದಲ್ಲಿಯೇ ಆಕ್ರಮಣಕಾರಿ ಆಟವಾಡಿದ ಯು ಮುಂಬಾ ಬೆಂಗಳೂರು ತಂಡವನ್ನು ಎರಡು ಬಾರಿ ಆಲೌಟ್ ಮಾಡಿ 16 ಅಂಕಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಪಂದ್ಯ ಏಕಮುಖವಾಗಿ ಮುಗಿಯುತ್ತದೆ ಯು ಮುಂಬಾ ಸುಲಭವಾಗಿ ಗೆಲ್ಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಏಕೆಂದರೆ ಬುಲ್ಸ್ ತಂಡದ ಡಿಫೆಂಡಿಂಗ್ ತೀರಾ ಕಳಪೆಯಾಗಿತ್ತು. ಆಗ ಬಂದ ನೋಡಿ ಆಪತ್ಭಾಂಧವ ಭರತ್.. ತನ್ನ ಮಿಂಚಿನ ರೈಡಿಂಗ್ ಮೂಲಕ ಬೆಂಗಳೂರು ತಂಡಕ್ಕೆ ಸತತ ಪಾಯಿಂಟ್ ತಂದುಕೊಟ್ಟರು. ಪಂದ್ಯದ ಮೊದಲಾರ್ಧ ಮುಗಿದಾಗ ಬೆಂಗಳೂರು 13 ಪಾಯಿಂಟ್‌ಗಳ ಹಿನ್ನಡೆ ಅನುಭವಿಸಿತ್ತು.

ದ್ವಿತಿಯಾರ್ಧ ಆರಂಭವಾದ ಭರತ್ ಚುರುಕಿನ ರೈಡಿಂಗ್ ಮೂಲಕ ಯು ಮುಂಬಾ ತಂಡವನ್ನು ಮೂರು ಬಾರಿ ಆಲೌಟ್ ಮಾಡುವಲ್ಲಿ ಸಹಕಾರಿಯಾದರು. ತನ್ನ ಏಕಾಗ್ರತೆ ಮತ್ತು ಚಾಣಕ್ಷತನದಿಂದ 16 ರೈಡಿಂಗ್ ಪಾಯಿಂಟ್ ಗಳಿಸಿ ಬೆಂಗಳೂರು 10 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಅದೇ ರೀತಿ ದಬಾಂಗ್ ಡೆಲ್ಲಿ ನಡುವಿನ ಪಂದ್ಯದಲ್ಲಿಯೂ ಸಹ ಆಕ್ರಮಣಕಾರಿ ಆಟವಾಡಿದ ಭರತ್ ಕೈಚೆಲ್ಲಿ ಹೋಗಿದ್ದ ಪಂದ್ಯವನ್ನು ಕೊನೆಯ ಒಂದು ನಿಮಿಷದಲ್ಲಿ ತಹಬದಿಗೆ ತಂದು ಬೆಂಗಳೂರು ತಂಡ 4 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಆ ಪಂದ್ಯದಲ್ಲಿ ಭರತ್ 20 ರೈಡ್‌ಗಳಿಂದ 20 ಪಾಯಿಂಟ್ ಗಳಿಸಿ ಮಿಂಚಿದರು.

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಈ ಎಲ್ಲವೂ ಗೆಲುವಿನ ಪಂದ್ಯಗಳಲ್ಲಿಯೇ ಬಂದಿರುವುದು ವಿಶೇಷ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಮೂಲತಃ ಹರ್ಯಾಣದವರಾದ ಭರತ್ ತಮಗಿರುವ ಎತ್ತರವನ್ನು ಸಂಪೂರ್ಣವಾಗಿ ಬಳಸಿಕೊಂಡು ಚಾಕಚಕ್ಯತೆಯಿಂದ ಪಾಯಿಂಟ್ ಗಳಿಸಿ ಮಿಂಚುತ್ತಿದ್ದಾರೆ. 8ನೇ ಸೀಸನ್‌ನಲ್ಲಿ ಪವನ್ ಕುಮಾರ್ ಶೆರಾವತ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...